ಹೊಸ ತಂತ್ರಜ್ಞಾನ ಬಳಸಿ ಕಳ್ಳತನವಾಗಿದ್ದ 41 ಲಕ್ಷ ಮೌಲ್ಯದ ಮೊಬೈಲ್ಗಳನ್ನು ಪತ್ತೆ ಹಚ್ಚಿದ ಗದಗ ಪೊಲೀಸರು
ವಿವಿಧಡೆ ಕಳ್ಳತನವಾಗಿದ್ದ ಸುಮಾರು 295 ಮೊಬೈಲ್ಗಳನ್ನು ಹೊಸ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವಲ್ಲಿ ಗದಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಗದಗ, ಮಾರ್ಚ್, 07: ವಿವಿಧಡೆ ಕಳ್ಳತನವಾಗಿದ್ದ ಸುಮಾರು 295 ಮೊಬೈಲ್ಗಳನ್ನು ಹೊಸ ತಂತ್ರಜ್ಞಾನದ ಮೂಲಕ ಪತ್ತೆ ಮಾಡುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಪತ್ತೆಹಚ್ಚಿದ ಮೊಬೈಲ್ಗಳನ್ನು ಸೋಮವಾರ ಪುನಃ ಆಯಾ ಮಾಲೀಕರಿಗೆ ಒಪ್ಪಿಸಿದರು. ಕಳೆದುಕೊಂಡಿದ್ದ ಮೊಬೈಲ್ಗಳು ಮತ್ತೆ ತಮ್ಮ ಕೈಸೇರುತ್ತಿದ್ದಂತೆಯೇ ಸಾರ್ವಜನಿಕರು ಸಂತೋಷ ವ್ಯಕ್ತಪಡಿಸಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿಗೆ ಮಾಲೀಕರು ಧನ್ಯವಾದ ಹೇಳಿದರು.
ಜಿಲ್ಲೆಯ 12 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧಡೆ ಈ ಮೊಬೈಲ್ಗಳು ಕಳ್ಳತನವಾಗಿದ್ದವು. "ಕೇಂದ್ರ ಸರ್ಕಾರದ ಸಿ.ಇ.ಐ.ಆರ್ ಮತ್ತು ಮೋಬಿಫೈ" ಆ್ಯಪ್ಗಳ ಮೂಲಕ ಕ್ಷಿಪ್ರವಾಗಿ ಪತ್ತೆ ಮಾಡಲಾಯಿತು. ಪತ್ತೆಯಾದ ಮೊಬೈಲ್ಗಳ ಮೌಲ್ಯ ಸುಮಾರು 4,097,461 ರೂ. ಎಂದು ಅಂದಾಜು ಮಾಡಲಾಗಿದೆ.

295 ಮೊಬೈಲ್ಗಳನ್ನು ಪತ್ತೆ ಹಚ್ಚಿದ ಪೊಲೀಸರು
ಸಾವಿರಾರು ರೂಪಾಯಿ ಬೆಲೆ ತೆತ್ತು ಮೊಬೈಲ್ ಖರೀದಿ ಮಾಡಿದ್ದ ಸಾರ್ವಜನಿಕರು, ಅವುಗಳ ಜೊತೆಗೆ ಮೌಲ್ಯವಾದ ದಾಖಲೆ, ದತ್ತಾಂಶಗಳನ್ನು ಕೂಡ ಕಳೆದುಕೊಂಡಿದ್ದರು. ಹಲವರು ಕಳೆದುಹೋಗಿದ್ದ ಮೊಬೈಲ್ ಫೋನ್ಗಳನ್ನು ಪತ್ತೆ ಮಾಡುವಂತೆ ಪೊಲೀಸ್ ಠಾಣೆಗೂ ಅಲೆದಾಡಿದ್ದರು. ಕೊನೆಗೆ ಸಿಗದೇ ಇದ್ದುದರಿಂದ ಮೊಬೈಲ್ಗಳ ಮೇಲಿನ ಆಸೆಯನ್ನು ಕೈಬಿಟ್ಟಿದ್ದರು.
ಮೊಬೈಲ್ಗಳನ್ನು ಪತ್ತೆ ಹಚ್ಚಿದ್ದು ಹೇಗೆ?
ಇತ್ತೀಚೆಗೆ ಪರಿಚಯ ಮಾಡಲಾಗಿರುವ ಕೇಂದ್ರ ಸರ್ಕಾರದ ಸಿ.ಇ.ಐ.ಆರ್ ಮತ್ತು ಮೋಬಿಫೈ ನೂತನ ತಂತ್ರಜ್ಞಾನದ ಮೂಲಕ ಅವುಗಳನ್ನು ಮತ್ತೆ ಪತ್ತೆ ಮಾಡಿದ್ದಲ್ಲದೆ ಮಾಲೀಕರಿಗೂ ಒಪ್ಪಿಸಲಾಯಿತು. ಸಾಮಾನ್ಯರು ಸೇರಿದಂತೆ ವೈದ್ಯರು, ಲಾಯರ್, ಪತ್ರಕರ್ತರು ಸಹ ಮೊಬೈಲ್ ಕಳೆದುಕೊಂಡು ಚಿಂತೆಗೀಡಾಗಿದ್ದರು.

ಸದ್ಯ ಪುನಃ ಮೊಬೈಲ್ ತಮ್ಮ ಕೈ ಸೇರಿದ್ದಕ್ಕೆ ಪೊಲೀಸರಿಗೆ ಧನ್ಯವಾದ ತಿಳಿಸಿದರು. ಖದೀಮರು ಜಾತ್ರೆ, ಸಂತೆ, ಬಸ್ ನಿಲ್ದಾಣ ಹೀಗೆ ವಿವಿಧ ಜನನಿಬಿಡ ಪ್ರದೇಶದಲ್ಲಿ ಅತೀ ಕಡಿಮೆ ಹಣಕ್ಕೆ ಅಂಗಡಿಗಳಲ್ಲಿ ಮೊಬೈಲ್ಗಳನ್ನು ಮಾರಿ ಪರಾರಿಯಾಗಿದ್ದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications