ಗದಗ; ಶ್ರಾವಣ ಶನಿವಾರ ಹನುಮ ಮೂರ್ತಿ ಕಳ್ಳತನ
ಗದಗ, ಆಗಸ್ಟ್, 07: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ವ್ಯಾಪ್ತಿಯಲ್ಲಿನ ಆಂಜನೇಯ ಮೂರ್ತಿಯನ್ನು ಕಿಡಿಗೇಡಿಗಳು ಶ್ರಾವಣ ಶನಿವಾರದಂದೇ ಕಳ್ಳತನ ಮಾಡಿದ್ದಾರೆ. ಶ್ರಾವಣ ಶನಿವಾರದ ಪೂಜೆಗೆ ಎಂದು ಅರ್ಚಕರು ಹನುಮನ ಕಟ್ಟೆಗೆ ತೆರಳಿದ್ದ ಸಮಯದಲ್ಲಿ ಆಂಜನೇಯ ಮೂರ್ತಿ ಕಳ್ಳತನ ಆಗಿರುವುದು ಗೊತ್ತಾಗಿದೆ.
ಈ ಹಿನ್ನೆಲೆಯಲ್ಲಿ ಮಾರುತಿ ದೇವಸ್ಥಾನದ ಕಮಿಟಿ ಸದಸ್ಯರು ಸೇರಿ ಸಭೆ ಮಾಡಿದ್ದು, ಮೂರ್ತಿಯನ್ನು ವಾಪಾಸ್ ತಂದಿಡದಿದ್ದರೆ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಸುತ್ತಲಿನ ಗ್ರಾಮದಿಂದ ದೇವರ ದರ್ಶನಕ್ಕೆ ಆಗಮಿಸಿದ್ದ ಭಕ್ತರು ಗುಡಿಯಲ್ಲಿ ದೇವರ ಮೂರ್ತಿ ಇಲ್ಲದಿದ್ದನ್ನು ಕಂಡು ಗಾಬರಿಯಗಿದ್ದಾರೆ. ಅತ್ಯಂತ ಪುರಾತನವಾದ ಈ ದೇವಸ್ಥಾನ ಇತ್ತೀಚೆಗೆ ಬಹಳಷ್ಟು ಪ್ರಸಿದ್ಧಿ ಮತ್ತು ಭಕ್ತರ ಗಮನ ಸೆಳೆದಿದ್ದರಿಂದ ಭಕ್ತರ ಸಂಖ್ಯೆ ಹೆಚ್ಚಾಗಿತ್ತು. ಆದ್ದರಿಂದ ದೇವಸ್ಥಾನದ ಅಭಿವೃದ್ಧಿಗೆ ಗ್ರಾಮಸ್ಥರು, ಭಕ್ತರು ಮುಂದಾಗಿದ್ದರು.

ಊರಿನ ಹೊರವಲಯದಲ್ಲಿರುವ ಈ ದೇವಸ್ಥಾನದಲ್ಲಿ ಸಣ್ಣ ಆಭರಣಗಳ ಕಳ್ಳತನ ಸಾಮಾನ್ಯವಾಗಿಬಿಟ್ಟಿತ್ತು. ಆದರೆ ಈ ಬಾರಿ ಖದೀಮರು ನಾಲ್ಕೈದು ಅಡಿ ಎತ್ತರದ ದೇವರ ಮೂರ್ತಿಯನ್ನೇ ಕದ್ದೊಯ್ದಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಿ ವಿಡಿಯೋ ಹರಿಬಿಟ್ಟ ಕಮಿಟಿ ಸದಸ್ಯರು, ಐತಿಹಾಸಿಕ ಮೂರ್ತಿ ಕಳ್ಳತನವಾಗಿದೆ. ಪೂಜೆಗೆ ಬಂದಿರುವ ಭಕ್ತರಿಗೆ ಸ್ವಾಮಿ ವಿಗ್ರಹ ಇಲ್ಲದಿದ್ದನ್ನು ಕಂಡು ಅತೀವ ನೋವಾಗಿದೆ. ವಿಗ್ರಹವನ್ನು ಯಾರು ತೆಗೆದುಕೊಂಡು ಹೋಗಿದ್ದೀರಾ ಅವರೇ ತಂದಿಡಬೇಕೆಂದು ಎಂದು ಎಚ್ಚರಿಸಿದ್ದಾರೆ.
ವಿಗ್ರಹವನ್ನು ತಂದಿಡದಿದ್ದರೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿ ಅಲ್ಲಿನ ಸ್ಥಳೀಯರು ಎಚ್ಚರಿಕೆ ಸಂದೇಶ ರವಾನಿಸಿದರು. ಸೂರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನೂರಾರು ವರ್ಷದ ಹಿಂದೆ ಹನುಮನ ಕಲ್ಲು ರೂಪದಲ್ಲಿ ಉದ್ಭವಿಸಿದ್ದು, ಅದು ಇತ್ತೀಚೆಗೆ ಹನುಮನ ಮೂರ್ತಿ ರೂಪ ಪಡೆದಿತ್ತು.

ಇಷ್ಟಾರ್ಥ ಸಿದ್ಧಿಯಿಂದಾಗಿ ಹನುಮ ದೇವಾಲಯ ಸುತ್ತಲಿನ ಊರಿನವರಿಗೂ ಹೆಚ್ಚು ಪ್ರಸಿದ್ಧಿಯಾಗಿತ್ತು. ಸದ್ಯ ಮೂರ್ತಿ ಕಳ್ಳತನವಾಗಿರುವುದು ಭಕ್ತರಲ್ಲಿ ದಿಗ್ಭ್ರಮೆ ಉಂಟುಮಾಡಿದೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ವಿಗ್ರಹ ನಾಪತ್ತೆಯಾದ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಭಕ್ತರ ಭಾವನೆ ಜೊತೆ ಆಟ ಆಡುತ್ತಿರುವ ಕಿಡಿಗೇಡಿಗಳಿಗೆ ಮೂರ್ತಿಯನ್ನು ವಾಪಾಸ್ ತಂದಿಡುವಂತೆ ಗ್ರಾಮಸ್ಥರು ಕೇಳಿಕೊಂಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications