ಗದಗದಲ್ಲಿ ನೆರೆ ಹಾವಳಿಯಿಂದ ತತ್ತರಿಸಿದವರಿಗೆ ಇನ್ನೂ ಸಿಕ್ಕಿಲ್ಲ ಪರಿಹಾರ
ಗದಗ, ಡಿಸೆಂಬರ್ 01: ಇದೇ ಏಪ್ರಿಲ್ ತಿಂಗಳಿನಿಂದ ಸಂಭವಿಸಿದ ಪ್ರವಾಹಕ್ಕೆ ಇಡೀ ಊರಿಗೆ ಊರೇ ನಲುಗಿಹೋಗಿತ್ತು. ಮಲಪ್ರಭಾ ನದಿ ಉಕ್ಕಿ ಹರಿದು ಜಿಲ್ಲೆಯ ಬಹುಪಾಲು ಗ್ರಾಮಗಳು ಮುಳುಗಡೆಯಾಗಿದ್ದವು. ಮನೆ ಮಠ ಎಲ್ಲವನ್ನೂ ಕಳೆದುಕೊಂಡ ಜನರು ಕಾಳಜಿ ಕೇಂದ್ರಗಳತ್ತ ಮುಖ ಮಾಡಿದ್ದರು. ಪ್ರವಾಹದ ನೀರಿನಲ್ಲಿ ಜಮೀನುಗಳು ಮುಳುಗಡೆಯಾಗಿ ಬೆಳೆಹಾನಿಯಿಂದ ರೈತರು ಕಂಗಾಲಾದರು. ಆ ಸಂದರ್ಭ ಜನರ ನೆರವಿಗೆ ನಿಲ್ಲುವುದಾಗಿ ಸರ್ಕಾರ ಘೋಷಿಸಿತು.
ದಿನಗಳೆದಂತೆ ಬದುಕು ಸಹಜ ಸ್ಥಿತಿಯತ್ತ ಮರಳಿತು. ಆದರೆ ಪ್ರವಾಹದಿಂದಾದ ಪರಿಣಾಮ ಮಾತ್ರ ಜನರನ್ನು ಬಿಡಲಿಲ್ಲ. ಸರ್ಕಾರದ ಭರವಸೆ ನಂಬಿ ಮನೆಗಳತ್ತ ಮುಖ ಮಾಡಿದ್ದವರು ಇದೀಗ ಸಮರ್ಪಕ ಪರಿಹಾರ ಸಿಗದೇ ಅಲೆದಾಡುವಂತಾಗಿದೆ.
ಗದಗ ಜಿಲ್ಲೆಯ ರೋಣ ತಾಲೂಕು ಹೊಳೆ ಆಲೂರು ಗ್ರಾಮಸ್ಥರು ಪ್ರವಾಹದಲ್ಲಿ ಬದುಕನ್ನೇ ಕಳೆದುಕೊಂಡು ಇದೀಗ ಬಿದ್ದ ಮುರುಕಲು ಮನೆಯಲ್ಲೇ ಜೀವನ ಸಾಗಿಸುತ್ತಿದ್ದಾರೆ. ನೆರೆ ಹಾನಿಯ ಪರಿಹಾರಕ್ಕೆ ಮೂರ್ನಾಲ್ಕು ಬಾರಿ ಹೋರಾಟ ಮಾಡಿ ಮನವಿ ನೀಡಿದ್ದಾರೆ. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಸಂಬಂಧ ತಹಶೀಲ್ದಾರ್, ಎಸಿ, ಡಿಸಿ ಎಲ್ಲರಿಗೂ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಯಾವುದೇ ಪ್ರಯೋಜನವಿಲ್ಲ. ಗ್ರೇಡ್ ನೀಡುವಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಸಂತ್ರಸ್ತರು ಆರೋಪ ಮಾಡುತ್ತಿದ್ದಾರೆ. ಪ್ರವಾಹದಿಂದ ಹಾಳಾದ ಖುಷ್ಕಿ ಹಾಗೂ ನೀರಾವರಿ ಜಮೀನುಗಳಿಗೂ ಪರಿಹಾರ ನೀಡುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಸರಿಯಾದ ಗ್ರೇಡ್ ನೀಡಲು ಫಲಾನುಭವಿಗಳು ಆಗ್ರಹಿಸಿ ಸಮರ್ಪಕ ಪರಿಹಾರ ನೀಡಬೇಕು ಎಂದು ಕಣ್ಣೀರು ಹಾಕಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications