Get Updates
Get notified of breaking news, exclusive insights, and must-see stories!

ಕಪ್ಪತ್ತಗುಡ್ಡದ ಮೇಲೆ ಮತ್ತೆ ಕರಿನೆರಳು, ಗಣಿಗಾರಿಕೆ ಆರಂಭ?

ಗದಗ, ಮೇ 21: ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಮತ್ತು ಅರಣ್ಯ ಖಾತೆ ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ಇಂದು ಸಭೆ ನಡೆದಿದ್ದು, ಕಪ್ಪತ್ತಗುಡ್ಡದ ಮೇಲೆ ಮತ್ತೆ ಕರಿನೆರಳು ಚಾಚಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಆತಂಕ ವ್ಯಕ್ತಪಡಿಸಿದ್ದಾರೆ.

Recommended Video

      ಏಪ್ರಿಲ್ ಫೂಲ್ ಆದ ಕುಡುಕರು | April Fool | Liquor Shop | Oneindia kannada

      2017ನೆ ಇಸವಿಯಲ್ಲಿ ಆಗ ಅಧಿಕಾರದಲ್ಲಿದ್ದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕೆಲವು ಬಲಾಢ್ಯ ಗಣಿ ಕಂಪನಿಗಳ ಮಾಲೀಕರಿಗೆ ಲಾಭ ಮಾಡಿಕೊಡಬೇಕೆಂದು ಗದಗ ಜಿಲ್ಲೆಯ ಸುಮಾರು 80 ಸಾವಿರ ಎಕರೆ ವಿಸ್ತೀರ್ಣದ ಸಂಪದ್ಭರಿತ ಮತ್ತು ಹಸಿರುಕಾಡಿನ ಅಪರೂಪದ ಜೀವವೈವಿಧ್ಯದ ಕಪ್ಪತ್ತಗುಡ್ಡ ಪ್ರದೇಶವನ್ನು ಗಣಿಗಾರಿಕೆಗೆ ಮುಕ್ತವನ್ನಾಗಿ ಮಾಡಲು ಅನುಕೂಲವಾಗುವಂತಹ ಆದೇಶ ಹೊರಡಿಸಿತ್ತು.

      ಆ ಜನವಿರೋಧಿ ಮತ್ತು ಪರಿಸರಕ್ಕೆ ಹಾನಿಕಾರಕವಾದ ತೀರ್ಮಾನದ ವಿರುದ್ಧ ಗದಗಿನ ತೋಂಟದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳ ಮತ್ತು ಹಿರಿಯ ಹೋರಾಟಗಾರರಾದ ಎಸ್.ಆರ್.ಹಿರೇಮಠರ ನೇತೃತ್ವದಲ್ಲಿ ದೊಡ್ಡ ಹೋರಾಟ ನಡೆದಿತ್ತು. ಆ ಹೋರಾಟದ ಭಾಗವಾಗಿ "ಕಪ್ಪತ್ತಗುಡ್ಡ ಉಳಿಸಿ" ಎಂದು 2017ರ ಫೆಬ್ರವರಿ 13 ರಿಂದ 15 ರ ತನಕ ಮೂರು ದಿನದ ಅಹೋರಾತ್ರಿ ಪ್ರತಿಭಟನೆ ನಡೆಯಿತು. ಆ ಹೋರಾಟಕ್ಕೆ ಮಣಿದು ಮತ್ತು ಗದಗಿನ ಶಾಸಕ ಮತ್ತು ಆಗ ಸಚಿವರಾಗಿದ್ದ ಎಚ್.ಕೆ.ಪಾಟೀಲರ ಮಧ್ಯಪ್ರವೇಶದ ಕಾರಣ ಅಂದು ಸರ್ಕಾರ ತನ್ನ ತೀರ್ಮಾನವನ್ನು ಹಿಂಪಡೆಯಿತು.

      ತದನಂತರ ರಾಜ್ಯ ಉಚ್ಛ ನ್ಯಾಯಾಲಯದಲ್ಲಿಯೂ ತೋಂಟದ ಸ್ವಾಮಿಗಳ ಮತ್ತು ಹಿರೇಮಠರ ಸತತ ಹೋರಾಟದ ಫಲವಾಗಿ ಕಪ್ಪತ್ತಗುಡ್ಡವು ಈಗ ಇರುವ ರೀತಿಯಲ್ಲಿಯೇ ಉಳಿಯುವಂತಾಯಿತು.

      Is Karnataka government opening up Mining in Kappatagudda

      ಅಂದು ಸರ್ಕಾರದ ಜನವಿರೋಧಿ ತೀರ್ಮಾನವನ್ನು ವಿರೋಧಿಸಿದ್ದ ಮತ್ತು ನಮ್ಮ ಹೋರಾಟವನ್ನು ಬೆಂಬಲಿಸಿದ್ದ ಬಿಜೆಪಿ ಪಕ್ಷ ಇಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಕೈಗಾರಿಕಾ ಖಾತೆ ಸಚಿವ ಜಗದೀಶ್ ಶೆಟ್ಟರ್ ಮತ್ತು ಅರಣ್ಯ ಖಾತೆ ಸಚಿವ ಆನಂದ್ ಸಿಂಗ್ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಕಪ್ಪತ್ತಗುಡ್ಡ ವಿಚಾರವಾಗಿ ಸಭೆ ನಡೆಯುತ್ತಿದೆ ಎಂಬ ಮಾಹಿತಿ ಬಂದಿದೆ. ಮತ್ತೆ ಕಪ್ಪತ್ತಗುಡ್ಡದ ಮೇಲೆ ಕರಿನೆರಳು ಚಾಚುತ್ತಿದೆ.

      ಗದಗ ಪೊಲೀಸರ ಪರಿಸರ ಪ್ರೇಮಕ್ಕೆ ಹೇಳಿ ಸಲಾಂ
      ಭ್ರಷ್ಟ ರಾಜಕಾರಣಿಗಳು ಮತ್ತು ಅಧಿಕಾರಿಗಳು ಏನೆಲ್ಲಾ ಲಾಭ ಮಾಡಿಕೊಂಡು ರಾಜ್ಯವನ್ನು ಹರಾಜು ಹಾಕುತ್ತಾರೋ ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು ಕಪ್ಪತ್ತಗುಡ್ಡದ ವಿಚಾರದಲ್ಲಿ ಜನವಿರೋಧಿಯಾದ ತಪ್ಪು ನಿರ್ಧಾರ ತೆಗೆದುಕೊಳ್ಳಬಾರದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸುತ್ತದೆ.

      ಈ ಸರ್ಕಾರ ಏನಾದರೂ ಅಂತಹ ಜನವಿರೋಧಿಯಾದ, ಪರಿಸರಕ್ಕೆ ಹಾನಿಕಾರವಾದ, ಮತ್ತು ಹಿಂದಿನ ಜನಹೋರಾಟಗಳನ್ನು ತುಚ್ಛೀಕರಿಸುವಂತಹ ತೀರ್ಮಾನಗಳನ್ನು ತೆಗೆದುಕೊಂಡರೆ ಅದರ ವಿರುದ್ಧ ಮತ್ತೊಮ್ಮೆ ಅನಿವಾರ್ಯವಾಗಿ ಹೋರಾಟ ರೂಪಿಸಲೇಬೇಕಾಗುತ್ತದೆ. ಆ ಎಚ್ಚರ ಈ ಸರ್ಕಾರಕ್ಕೆ ಇರಲಿ ಎಂದು ಈ ಮೂಲಕ ಎಚ್ಚರಿಸುತ್ತಿದ್ದೇವೆ ಎಂದು ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+