ಅಂತರ್ ಧರ್ಮೀಯ ದಂಪತಿಗಳ ಕಗ್ಗೊಲೆ: ಜನವಾದಿ ಸಂಘಟನೆ ಖಂಡನೆ
ಗದಗ, ಸೆ.27: ಗದಗದಲ್ಲಿ ಅಂತರ್ ಧರ್ಮೀಯ ವಿವಾಹವಾಗಿ ಸ್ವತಂತ್ರವಾಗಿ ಜೀವನ ನಡೆಸುತ್ತಿದ್ದ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡಿಸಿದೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿ ಬಸಾಪುರದಲ್ಲಿ ಅಂತರ್ ಧರ್ಮೀಯ ವಿವಾಹವಾಗಿದ್ದ ಅಶ್ರಫ್ ಅಲಿ(45) ಮತ್ತು ಸೋಮವ್ವ(38) ಮೃತರಾದವರು. 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ದಂಪತಿ ಗಳನ್ನು ಸೋಮವ್ವನ ಸಹೋದರ ದೇವಪ್ಪಹೊಟ್ಟಿ ಮರ್ಯಾದಾ ಹೆಸರಿನಲ್ಲಿ ಕೊಲೆ ಮಾಡಿರುವುದು ಹೇಯ ಕೃತ್ಯ.
ಈ ಹಿಂದೆಯೂ ರಾಜ್ಯದ ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಮರ್ಯಾದಾ ಹೆಸರಿನಲ್ಲಿ ನಡೆದ ಹತ್ಯೆಗಳ ಸಂದರ್ಭಗಳಲ್ಲಿ ಪರಸ್ಪರ ಕಡು ವೈರಿಗಳಂತೆ ಒಬ್ಬರ ಮೇಲೊಬ್ಬರು ಬೀಳುವ ರಾಜ್ಯದ ಪ್ರಮುಖ ಮೂರೂ ಪಕ್ಷಗಳ ನಾಯಕರು ಸ್ವಜಾತಿ ಪ್ರೇಮದಿಂದ, ಅನ್ಯಾಯವಾಗಿ ಬಲಿಯಾದ ಮುಗ್ಧ ಪ್ರೇಮಿಗಳ ಸಾವಿಗೆ ಕುರುಡಾಗಿ ಕುಳಿತಿದ್ದೇ ಇಂಥಹ ಪ್ರಕರಣಗಳು ಮತ್ತೆ ಮತ್ತೆ ನಡೆಯಲು ಕಾರಣ ಎಂದು ತಿಳಿಸಿದೆ.

ದೇಶದ ಸಂವಿಧಾನವು ವಯಸ್ಕರಿಗೆ ಆಯ್ಕೆ ಸ್ವಾತಂತ್ರ್ಯ ನೀಡಿದ್ದು, ತಮ್ಮ ಆಯ್ಕೆಯ ಜೀವನ ಸಂಗಾತಿಯೊಡನೆ 13 ವರ್ಷಗಳಿಂದ ಬದುಕುತ್ತಿದ್ದ ತಂಗಿಯನ್ನು ಕೊಂದವನನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಮಾರ್ಯಾದೆ ಹೆಸರಿನ ಹತ್ಯೆಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದು ನಾಗರಿಕ ಸಮಾಜಕ್ಕೆ ತಕ್ಕುದಾದ ನಡೆ ಅಲ್ಲ.ಇಂದಿಗೂ ಇರುವ ಅಸಮಾನ ವ್ಯವಸ್ಥೆ, ಹುಸಿ ಪ್ರತಿಷ್ಟೆಗಳಿಗೆ ಇಡೀ ಸಮಾಜ ನಾಚಿ ತಲೆ ತಗ್ಗಿಸಬೇಕಾಗಿದೆ.
ಈ ಹಿಂದೆ ಹರ್ಯಾಣ, ಮಹಾರಾಷ್ಟ್ರ ರಾಜ್ಯಗಳಿಂದ ಇಂಥಹ ಘಟನೆಗಳು ವರದಿಯಾಗುವಾಗಲೇ, ಯುವ ಜನರ ಆಯ್ಕೆ ಹಕ್ಕುಗಳನ್ನು ಗೌರವಿಸುವ ಮತ್ತು ಅದಕ್ಕೆ ಚ್ಯುತಿ ಬಂದಾಗ ಜೊತೆ ನಿಂತು ಅವರ ಪರವಾಗಿ ಹೋರಾಟ ಮಾಡಿದ ಜನವಾದಿ ಮಹಿಳಾ ಸಂಘಟನೆ ಮರ್ಯಾದೆಗೇಡು ಹತ್ಯೆ ಯ ವಿರುದ್ಧ ಕಾನೂನು ತರುವಂತೆ ಒತ್ತಾಯಿಸುತ್ತಲೇ ಇದೆ.ಕೇಂದ್ರ ಸರ್ಕಾರಕ್ಕೆ , ಮುಸ್ಲಿಂ ಮಹಿಳೆಯರನ್ನು ಬಾಣಲೆಯಿಂದ ಬೆಂಕಿಗೆ ನೂಕುವ ಕಾನೂನು ತಂದು ಟ್ರಿಪಲ್ ತಲಾಖ್ ನಿಷೇಧಿಸುವ ಬಗ್ಗೆ ಸುಗ್ರೀವಾಜ್ಞೆ ತರುವಲ್ಲಿ ಇರುವ ತರಾತುರಿ ಈ ವಿಷಯಗಳಲ್ಲಿ ಇಲ್ಲ.
ಯಾಕೆಂದರೆ ಇದಕ್ಕೆ ಮೌನ ಮತ್ತು ಅದಕ್ಕೆ ಆದೇಶ ಎರಡರಲ್ಲಿಯೂ ಓಟ್ ಬ್ಯಾಂಕ್ ರಾಜಕಾರಣ ವಿದೆ. ಇತ್ತೀಚಿನ ದಿನಗಳಲ್ಲಿಯೇ ದಕ್ಷಿಣ ಭಾರತ ದಲ್ಲಿಯೇ ವರದಿಯಾದ ಘೋರ ಪ್ರಕರಣಗಳನ್ನೂ ಗಮನಿಸಿ ಕಾನೂನು ತರಲು ಕೇಂದ್ರ ಸರಕಾರ ಮುಂದಾಗಬೇಕು. ಮತ್ತು ಕರ್ನಾಟಕ ರಾಜ್ಯ ಸರ್ಕಾರವೂ ಅತ್ತ ಗಮನ ಹರಿಸಬೇಕೆಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯು ಒತ್ತಾಯಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications