Get Updates
Get notified of breaking news, exclusive insights, and must-see stories!

ಚುನಾವಣೆ ನಮ್ಮ ಹೊಣೆ ಅಭಿಯಾನ: ನ್ಯಾ. ಸಂತೋಷ್ ಹೆಗ್ಡೆ ಭಾಗಿ

ಗದಗ, ಫೆಬ್ರವರಿ3 : ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಾನೂನು ಹೋರಾಟ ನಡೆಸಿ ರಾಜಕೀಯ ಪಲ್ಲಟಕ್ಕೆ ನಾಂದಿ ಹಾಡಿದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಇದೀಗ ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಜಾಗೃತಿಗೆ ಮುಂದಾಗಿದ್ದಾರೆ.

ಫೆಬ್ರವರಿ ೨೪ರಂದು ಕೂಡಲಸಂಗಮದಿಂದ ಭ್ರಷ್ಟಾಚಾರ ಹಾಗೂ ಲೂಟಿಕೋರರ ವಿರುದ್ಧ ಆರಂಭಿಲಿರುವ ಚುನಾವಣೆ ನಮ್ಮ ಹೊಣೆ ಅಭಿಯಾನಕ್ಕೆ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಚಾಲನೆ ನೀಡಲಿದ್ದಾರೆ. ರಾಜ್ಯದ ವಿವಿಧ23 ಸಂಘಟನೆಗಳು, ಎಸ್ ಆರ್ ಹಿರೇಮಠ್ ಹೋರಾಟಕ್ಕೆ ಸಾಥ್ ನೀಡಲಿದ್ದು, ರಾಜ್ಯಾಧ್ಯಂತ ಅಭಿಯಾನ ನಡೆಯಲಿದೆ.

ಈ ಹಿಂದೆ ಕರ್ನಾಟಕದ ಅಕರಮ ಗಣಿಗಾರಿಕೆಗೆ ಕಡಿವಾಣ ಹಾಕಿದ್ದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಈ ಅಭಿಯಾನಕ್ಕೆ ಸಾಥ್ ನೀಡುತ್ತಿರುವುದು ವಿಶೇಷ.

Justice Hegde will take part pre election awareness programme

ಶನಿವಾರ ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್. ಆರ್. ಹಿರೇಮಠ್ ಈ ವಿಷಯ ತಿಳಿಸಿದರು. ಬಳ್ಳಾರಿ ನಂತರ ಇದೀಗ ಗದಗ ಜಿಲ್ಲೆಯ ಕಪ್ಪತ ಗುಡ್ಡದ ಮೇಲೆ ಅಕ್ರಮ ಗಣಿಕುಳಗಳ ಕಣ್ಣುಬಿದ್ದುದ್ದು ಕಪ್ಪತಗುಡ್ಡ ರಕ್ಷಿಸುವ ನಿಟ್ಟಿನಲ್ಲಿ ಫೆಬ್ರವರಿ 27 ರಂದು ಕಪ್ಪತಗುಡ್ಡ ಪರಿಸರದಲ್ಲಿ ವಾಸಿಸುತ್ತಿರುವ ಲಂಬಾಣಿ ಜನರೊಂದಿಗೆ ಚರ್ಚೆ ನಡೆಸಲಿದ್ದೇವೆ. ನಂತರ ಮುಂದಿನ ರೂಪುರೇಷೆ ನಿರ್ಧರಿಸಲಾಗುವುದು ಎಂದರು.
ರೈತರ ಸಮಸ್ಯೆ, ನಿರುದ್ಯೋಗ, ಆರೋಗ್ಯದ ಖಾಸಗೀಕರಣ ಮತ್ತು ಸಿಕ್ಷಣ ಕುರಿತಾದ ಸಮಸ್ಯೆಗಳ ವಿರುದ್ಧ ಗಂಭೀರವಾಗಿ ಧ್ವನಿ ಎತ್ತುವ ಕಾರ್ಯಕ್ರಮ ಮಾಡಲಾಗುತ್ತಿದೆ. ಹೊಸ ಸಮಾಜ ಪರಿಕಲ್ಪನೆಯಿಂದ ಈ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+