ಚುನಾವಣೆ ನಮ್ಮ ಹೊಣೆ ಅಭಿಯಾನ: ನ್ಯಾ. ಸಂತೋಷ್ ಹೆಗ್ಡೆ ಭಾಗಿ
ಗದಗ, ಫೆಬ್ರವರಿ3 : ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಾನೂನು ಹೋರಾಟ ನಡೆಸಿ ರಾಜಕೀಯ ಪಲ್ಲಟಕ್ಕೆ ನಾಂದಿ ಹಾಡಿದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ ಇದೀಗ ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಜಾಗೃತಿಗೆ ಮುಂದಾಗಿದ್ದಾರೆ.
ಫೆಬ್ರವರಿ ೨೪ರಂದು ಕೂಡಲಸಂಗಮದಿಂದ ಭ್ರಷ್ಟಾಚಾರ ಹಾಗೂ ಲೂಟಿಕೋರರ ವಿರುದ್ಧ ಆರಂಭಿಲಿರುವ ಚುನಾವಣೆ ನಮ್ಮ ಹೊಣೆ ಅಭಿಯಾನಕ್ಕೆ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಚಾಲನೆ ನೀಡಲಿದ್ದಾರೆ. ರಾಜ್ಯದ ವಿವಿಧ23 ಸಂಘಟನೆಗಳು, ಎಸ್ ಆರ್ ಹಿರೇಮಠ್ ಹೋರಾಟಕ್ಕೆ ಸಾಥ್ ನೀಡಲಿದ್ದು, ರಾಜ್ಯಾಧ್ಯಂತ ಅಭಿಯಾನ ನಡೆಯಲಿದೆ.
ಈ ಹಿಂದೆ ಕರ್ನಾಟಕದ ಅಕರಮ ಗಣಿಗಾರಿಕೆಗೆ ಕಡಿವಾಣ ಹಾಕಿದ್ದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಈ ಅಭಿಯಾನಕ್ಕೆ ಸಾಥ್ ನೀಡುತ್ತಿರುವುದು ವಿಶೇಷ.

ಶನಿವಾರ ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್. ಆರ್. ಹಿರೇಮಠ್ ಈ ವಿಷಯ ತಿಳಿಸಿದರು. ಬಳ್ಳಾರಿ ನಂತರ ಇದೀಗ ಗದಗ ಜಿಲ್ಲೆಯ ಕಪ್ಪತ ಗುಡ್ಡದ ಮೇಲೆ ಅಕ್ರಮ ಗಣಿಕುಳಗಳ ಕಣ್ಣುಬಿದ್ದುದ್ದು ಕಪ್ಪತಗುಡ್ಡ ರಕ್ಷಿಸುವ ನಿಟ್ಟಿನಲ್ಲಿ ಫೆಬ್ರವರಿ 27 ರಂದು ಕಪ್ಪತಗುಡ್ಡ ಪರಿಸರದಲ್ಲಿ ವಾಸಿಸುತ್ತಿರುವ ಲಂಬಾಣಿ ಜನರೊಂದಿಗೆ ಚರ್ಚೆ ನಡೆಸಲಿದ್ದೇವೆ. ನಂತರ ಮುಂದಿನ ರೂಪುರೇಷೆ ನಿರ್ಧರಿಸಲಾಗುವುದು ಎಂದರು.
ರೈತರ ಸಮಸ್ಯೆ, ನಿರುದ್ಯೋಗ, ಆರೋಗ್ಯದ ಖಾಸಗೀಕರಣ ಮತ್ತು ಸಿಕ್ಷಣ ಕುರಿತಾದ ಸಮಸ್ಯೆಗಳ ವಿರುದ್ಧ ಗಂಭೀರವಾಗಿ ಧ್ವನಿ ಎತ್ತುವ ಕಾರ್ಯಕ್ರಮ ಮಾಡಲಾಗುತ್ತಿದೆ. ಹೊಸ ಸಮಾಜ ಪರಿಕಲ್ಪನೆಯಿಂದ ಈ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications