Karnataka Elections: ಪತ್ನಿ, ಸಹೋದರನಿಂದ ಟಿಕೆಟ್ಗಾಗಿ ಪೈಪೋಟಿ- ವಿಚಿತ್ರ ಸಂದಿಗ್ಧ ಎದುರಿಸುತ್ತಿರುವ ಬಿಜೆಪಿ ಶಾಸಕ
ಗದಗ, ಏಪ್ರಿಲ್ 10: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೂ ( Karnataka Assembly Elections 2023 ) ಮುನ್ನ ರಾಜ್ಯದಲ್ಲಿ ಹಲವು ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ರೋಣ ಬಿಜೆಪಿ ( BJP ) ಶಾಸಕ ಕಳಕಪ್ಪ ಬಂಡಿ ಈ ಬಾರಿ ಟಿಕೆಟ್ಗಾಗಿ ಹರಸಾಹಸ ಪಡುತ್ತಿದ್ದಾರೆ. ಕಾರಣ, ರೋಣ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಪತ್ನಿ ಸಂಯಕ್ತಾ ಹಾಗೂ ಸಹೋದರ ಸಿದ್ದಪ್ಪ ತೀವ್ರ ಪೈಪೋಟಿ ನಡೆಸಿದ್ದಾರೆ.
ಸಂಯುಕ್ತಾ ಅವರು ತಮ್ಮ ಬೆಂಬಲಿಗರ ಮೂಲಕ ಟಿಕೆಟ್ಗೆ ಬೇಡಿಕೆ ಇಟ್ಟಿದ್ದರೆ, ಸಿದ್ದಪ್ಪ ಬಹಿರಂಗವಾಗಿಯೇ ತಮ್ಮ ಉಮೇದುವಾರಿಕೆ ಬಗ್ಗೆ ಹೇಳಿಕೊಳ್ಳುತ್ತಿದ್ದಾರೆ. ಇನ್ನು ಹಲವು ಆಕಾಂಕ್ಷಿಗಳು ಕೂಡ ಕ್ಷೇತ್ರದಲ್ಲಿ ತಮ್ಮ ಉಮೇದುವಾರಿಕೆ ಬಗ್ಗೆ ಹೇಳಿಕೊಂಡು ಓಡಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನೋಡುವುದಾದರೆ, ರೋಣ ಕ್ಷೇತ್ರದ ಹಾಲಿ ಶಾಸಕ ಕಳಕಪ್ಪ ಬಂಡಿ ಅವರು ವಿಚಿತ್ರ ಸಂದಿಗ್ಧ ಎದುರಿಸುತ್ತಿರುವ ಮೇಲ್ನೋಟಕ್ಕೆ ಕಂಡುಬಂದಿದೆ.

ಈ ವಿಚಾರವಾಗಿ 'ಟೈಮ್ಸ್ ಆಫ್ ಇಂಡಿಯಾ' ಜೊತೆ ಮಾತನಾಡಿರುವ ಸಿದ್ದಪ್ಪ ಅವರು, 'ಕಳೆದ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದೇನೆ. ಗ್ರಾಮ ಪಂಚಾಯಿತಿಯಿಂದ ಹಿಡಿದು ಲೋಕಸಭೆ ವರೆಗೂ ಬಿಜೆಪಿಗಾಗಿ ಶ್ರಮಿಸಿದ್ದೇನೆ' ಎಂದು ಹೇಳಿದ್ದಾರೆ.
'ನಾವು ಕಳೆದ 20 ವರ್ಷಗಳಿಂದ ನಮ್ಮ ಅಣ್ಣನಿಗಾಗಿ ಕೆಲಸ ಮಾಡುತ್ತಿದ್ದೇವೆ. ಆದಾಗ್ಯೂ, 2018 ರಿಂದ ಅವರ ಕಾರ್ಯಕ್ಷಮತೆಯ ಬಗ್ಗೆ ನಾವು ನಿರಾಶೆಗೊಂಡಿದ್ದೇವೆ. ವಿಶೇಷವಾಗಿ, ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅವರು ನಮ್ಮ ಜನರಿಗೆ ಸಹಾಯ ಮಾಡಲಿಲ್ಲ. ಆದರೆ ನರಗುಂದ ಶಾಸಕ ಸಿ ಸಿ ಪಾಟೀಲ್ ನಮ್ಮ ಕ್ಷೇತ್ರದ ಜನರ ನೆರವಿಗೆ ಬಂದರು' ಎಂದು ತಿಳಿಸಿದ್ದಾರೆ.
'ನಮ್ಮ ಸಹೋದರನ ವರ್ತನೆ ನೋಡಿ ಕ್ಷೇತ್ರದ ಅನೇಕ ಯುವಕರು ಮತ್ತು ಹಿರಿಯರು ನಾನು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಕ್ಷೇತ್ರದಲ್ಲಿ ಬರುವ ರೋಣ, ಗಜೇಂದ್ರಗಡ, ನರೇಗಲ್ ಪಟ್ಟಣಗಳ ಮತದಾರರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದೇವೆ. ನಾನು ಆರ್ಎಸ್ಎಸ್ ಕಾರ್ಯಕರ್ತನಾಗಿದ್ದರಿಂದ ಪಕ್ಷದ ಮುಖಂಡರು ಟಿಕೆಟ್ ಪಡೆಯಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.

ಸಹೋದರರ ನಡುವಿನ ಪೈಪೋಟಿಯನ್ನು ರೋಣ ಕ್ಷೇತ್ರದ ಜನರು ಸಂಶಯಾಸ್ಪದವಾಗಿ ನೋಡುತ್ತಿದ್ದಾರೆ. ಇದು ಬಂಡಿ ಕುಟುಂಬದ ಸದಸ್ಯರಿಗೆ ಟಿಕೆಟ್ ಉಳಿಸಿಕೊಳ್ಳುವ ತಂತ್ರ ಎಂದು ಜನರು ಹೇಳುತ್ತಿದ್ದಾರೆ. ಇದು ನಾಟಕವಲ್ಲ ಎಂದು ಗಜೇಂದ್ರಗಡ ಸಮೀಪದ ಕಾಲಕಾಲೇಶ್ವರ ದೇವಸ್ಥಾನದಲ್ಲಿ ಪ್ರಮಾಣ ಮಾಡುವುದಾಗಿ ಎಂದು ಸಿದ್ದಪ್ಪ ಹೇಳಿದ್ದಾರೆ.
ಪಕ್ಷ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಈ ಬಾರಿ ಬಂಡಿ ಸೋಲುವ ಶಂಕೆ ವ್ಯಕ್ತವಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಮೂಲಗಳು ತಿಳಿಸಿವೆ. 'ಈ ವರದಿಯನ್ನು ತಿಳಿದ ಬಂಡಿ ತನ್ನ ಹೆಂಡತಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿರಬಹುದು' ಎಂದೂ ಮೂಲಗಳು ಹೇಳಿವೆ.
ಕಳೆದ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಪತಿಯ ಯಶಸ್ಸಿಗೆ ಶ್ರಮಿಸಿದ್ದೇನೆ ಎಂದು ಸಂಯುಕ್ತಾ ಹೇಳಿದ್ದಾರೆ.
'ಈಗ ನಾನು ರಾಜಕೀಯದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ ನನಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ. ಅವರು ಮನಃಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ. ನಾನು ಎರಡು- ಮೂರು ವರ್ಷಗಳಿಂದ ತಳಮಟ್ಟದಲ್ಲಿ ಕೆಲಸ ಮಾಡಿದ್ದು, ಮಹಿಳಾ ಮತದಾರರು ಬೆಂಬಲ ನೀಡಿದ್ದಾರೆ. ರಾಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರನಾಗಿರುವುದರಿಂದ ಮತ್ತು ಕಿತ್ತೂರು ಚನ್ನಮ್ಮನ ಕುಟುಂಬಕ್ಕೆ ಸೇರಿದ ನಾನು ನನ್ನನ್ನು ಸಾಬೀತುಪಡಿಸಲು ಬಯಸುತ್ತೇನೆ' ಎಂದು ಸಂಯುಕ್ತಾ 'ಟೈಮ್ಸ್ ಆಫ್ ಇಂಡಿಯಾ' ಪತ್ರಿಕೆಗೆ ತಿಳಿಸಿದ್ದಾರೆ.
ಕಳಕಪ್ಪ ಕರೆಗಳಿಗೆ ಸ್ಪಂದಿಸಲಿಲ್ಲ ಎಂದು ಪತ್ರಿಕೆ ವರದಿ ಮಾಡಿದೆ.
ಬಂಡಿ ಕುಟುಂಬದ ಮೂವರು ಸದಸ್ಯರು ಅಲ್ಲದೇ, ರವಿ ದಂಡಿನ್, ಅಂದಪ್ಪ ಸಂಕನೂರು, ಹೇಮಗಿರೀಶ್ ಹಾವಿನಾಳ್ ಸೇರಿದಂತೆ ಹಲವು ಆಕಾಂಕ್ಷಿಗಳೂ ಬಿಜೆಪಿ ಟಿಕೆಟ್ ಪಡೆಯಲು ರೇಸ್ ನಲ್ಲಿದ್ದಾರೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications