Gruhalakshmi scheme: ಬೋರ್ವೆಲ್ ಕೊರೆಸಲು ನೆರವಾದ 'ಗೃಹಲಕ್ಷ್ಮಿ', ಅತ್ತೆ-ಸೊಸೆಗೆ ಆಸರೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಯು ಹಲವು ಯಶೋಗಾಥೆಗಳಿಗೆ ಸಾಕ್ಷಿಯಾಗಿದೆ. ಸರ್ಕಾರದಿಂದ ಪ್ರತಿ ತಿಂಗಳು ಮನೆಯ ಯಜಮಾನಿಯರಿಗೆ ಸಿಗುತ್ತಿರುವ ಈ ಯೋಜನೆಯ 2000 ರೂಪಾಯಿ ಹಣದಿಂದ ಹಲವರು ತಮ್ಮ ಬದುಕಿನಲ್ಲಿ ಬದಲಾವಣೆ ಕಂಡಿದ್ದಾರೆ. ಇದೀಗ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು ಬೋರ್ವೆಲ್ ಕೊರೆಸಿ ಯಶಸ್ಸು ಕಂಡಿದ್ದಾರೆ.
ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಅತ್ತೆ ಮಾಬುಬಿ ಹಾಗೂ ಸೊಸೆ ರೋಷನ್ ಬೇಗಂ ಸೇರಿ ಬೋರ್ವೆಲ್ ಕೊರೆಸಿದ್ದಾರೆ. ಇನ್ನು ಬೋರ್ವೆಲ್ ಕೊರೆಸಿದ ನಂತರ ಉತ್ತಮ ನೀರು ಕೂಡ ಸಿಕ್ಕಿದೆ. ಇದರಿಂದ ಗೃಹಲಕ್ಷ್ಮಿ ಈ ಕುಟುಂಬ ಧನ್ಯವಾದಗಳನ್ನು ಅರ್ಪಿಸಿ, ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಅತ್ತೆ ಹಾಗೂ ಸೊಸೆ ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಬಂದಿದ್ದ 44000 ರೂಪಾಯಿ ಹಣ ಕೂಡಿಟ್ಟಿದ್ದರು ಎನ್ನಲಾಗಿದೆ. ಈ ಹಣವನ್ನು ಅವರು ಕೊಳವೆ ಬಾವಿ ಕೊರೆಸಲು ನೀಡಿದ್ದರು. ಒಟ್ಟಾರೆ ಬೋರ್ವೆಲ್ ಕೊರೆಸಲು 60000 ರೂಪಾಯಿವರೆಗೆ ಖರ್ಚಾಗಿದೆ. ಇದಕ್ಕೆ ಪ್ರಧಾನವಾಗಿ ಗೃಹಲಕ್ಷ್ಮಿ ಹಣವೇ ಬಳಕೆಯಾಗಿದ್ದು, ಬಾಕಿ ಹಣವನ್ನು ಪುತ್ರ ನೀಡಿರುವುದಾಗಿ ತಿಳಿಸಿದ್ದಾರೆ.
ಬೋರ್ವೆಲ್ ಈಗ ಅವರ ಬದುಕಿಗೆ ಆಸರೆಯಾಗಲಿದ್ದು, ಇನ್ಮುಂದೆ ನಿಶ್ಚಿಂತೆಯಾಗಿ ಜೀವನ ನಡೆಸಬಹುದು ಎಂದು ಅವರು ಧನ್ಯತಾ ಭಾವದಲ್ಲಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಗೃಹಲಕ್ಷ್ಮಿ ಯೋಜನೆಯಿಂದ ನಮ್ಮ ಕುಟುಂಬಕ್ಕೆ ಬಹಳ ಅನುಕೂಲವಾಗಿದ್ದು, ನಮ್ಮ ಬದುಕಿಗೂ ದಾರಿದೀಪವಾಗಿದ್ದಾರೆ. ಅವರಿಗೆ ನಮ್ಮ ಕುಟುಂಬದ ಪರವಾಗಿ ಧನ್ಯವಾದಗಳು ಎಂದು ಮಾಬುಬಿ ಅವರು ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯು ಬಡ ಕುಟುಂಬಗಳ ಬದುಕಿಗೆ ಆಸರೆಯಾಗಿ ಮಹಿಳಾ ಸಬಲೀಕರಣದ ಆಶಯಕ್ಕೆ ಶಕ್ತಿ ತುಂಬಿರುವ ಬಗ್ಗೆ ಹಲವು ನಿದರ್ಶನಗಳಿವೆ. ಗೃಹಲಕ್ಷ್ಮಿ ಹಣದಿಂದಲೇ ಬೆಳಗಾವಿಯ ವೃದ್ಧೆಯೊಬ್ಬರು ಇಡೀ ಊರಿಗೆ ಸಿಹಿಯೂಟ ಹಾಕಿಸಿದರೆ, ಮಹಿಳೆಯೊಬ್ಬರು ಫ್ಯಾನ್ಸಿ ಸ್ಟೋರ್ ತೆರೆದಿದ್ದರು.
ಇದೇ ಯೋಜನೆಯ ಹಣದಿಂದ ಬೆಳಗಾವಿಯಲ್ಲಿ ಮಹಿಳೆಯೊಬ್ಬರು ತಮ್ಮ ಪತಿಯ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿದ್ದರು. ದ್ವಿತೀಯ ಪಿಯುಸಿ ಕಲಾ ವಿಭಾಗದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿ ಶಿಕ್ಷಣ ಪಡೆಯಲು ಕೂಡ ಇದೇ ಗೃಹಲಕ್ಷ್ಮಿ ಯೋಜನೆ ನೆರವಾಗಿತ್ತು. ಮಲ್ಲವ್ವ ಮೇಟಿ ಎಂಬ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗಾಗಿ ಗ್ರಂಥಾಲಯವನ್ನು ತೆರೆಯುವ ಮೂಲಕ ಮಾದರಿಯಾಗಿದ್ದರು.
ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಮಹಿಳೆ ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿ, ಮುತ್ತೈದೆಯರಿಗೆ ಮಡಿಲು ತುಂಬಿದ್ದರು. ಈ ಬಗ್ಗೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಯು ಬಹಳಷ್ಟು ಕುಟುಂಬಗಳ ಪಾಲಿಗೆ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ, ಮನೆಗೆ ದಿನಸಿ, ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ ಭರಿಸಲು ಬಳಕೆಯಾಗಿರುವುದು ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿ ಎಂದು ಸಂತಸ ವ್ಯಕ್ತಪಡಿಸಿದ್ದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications