ಶೀಘ್ರವೇ ನಾಡಗೀತೆಗೆ ಕತ್ತರಿ; ಸುಳಿವು ಕೊಟ್ಟ ಸಚಿವರು
ಗದಗ, ಮಾರ್ಚ್ 15; "ನಾಡಗೀತೆ ಸುಧೀರ್ಘವಾಗಿದ್ದು, ಅದರ ಘನತೆಗೆ ಧಕ್ಕೆ ಬಾರದ ಹಾಗೆ ಹಾಡುವ ಅವಧಿ ಕಡಿತಗೊಳಿಸಲು ಚಿಂತನೆ ನಡೆಸಲಾಗುತ್ತಿದೆ" ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿಯಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ಸಮ್ಮುಖದಲ್ಲಿ ನಡೆದ ಜಗದ್ಗುರು ಶ್ರೀ ಸಿದ್ದರಾಮೇಶ್ವರರ 849 ನೇ ಜಯಂತೋತ್ಸವ ಹಾಗೂ ಗದಗ ಜಿಲ್ಲಾ ಭೋವಿ ವಡ್ಡರ ಸಮಾಜದ ಬೃಹತ್ ಸಮಾವೇಶದಲ್ಲಿ ಸಚಿವರು ಮಾತನಾಡಿದರು.
"ಸದ್ಯಕ್ಕಿರುವ ನಾಡಗೀತೆ ಅವಧಿ ಸುದೀರ್ಘವಾಗುತ್ತಿದೆ. ನಾಡಗೀತೆಗೆ ಗೌರವ ಸೂಚಕವಾಗಿ ಎಲ್ಲರೂ ಎದ್ದು ನಿಲ್ಲುವುದು ಸಹಜ. ಗೀತೆ ಸುದೀರ್ಘವಾಗಿರುವುದರಿಂದ ನಿಂತ ವ್ಯಕ್ತಿಗಳು ಕುಸಿದು ಬೀಳುವ ಸಾಧ್ಯತೆ ಹೆಚ್ಚು" ಎಂದು ಸಚಿವರು ತಿಳಿಸಿದರು.

"ಈ ಗೀತೆಗೆ ಧಕ್ಕೆ ಬಾರದ ಹಾಗೆ ಕಡಿಮೆ ಅವಧಿಯಲ್ಲಿ ಮುಗಿಯುವ ಹಾಗೆ ಮಾಡುವ ಚಿಂತನೆ ನಡೆದಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದರು.
"ನಾಡಗೀತೆ ದೊಡ್ಡದಾಗಿರುವುದರಿಂದ ಹಿರಿಯ ವಯಸ್ಕರು ನಿಂತುಕೊಳ್ಳಲು ಕಷ್ಟ ಆಗುತ್ತಿದೆ. ಹೀಗಾಗಿ ಹಿಂದೆಯೂ ನಾಡಗೀತೆ ಕಡಿತ ಮಾಡುವ ಬಗ್ಗೆ ಸಾಕಷ್ಟು ಚರ್ಚೆಗಳಾಗಿತ್ತು. ಕಡಿಮೆ ಅವಧಿಯಲ್ಲಿ ನಾಡಗೀತೆ ಹಾಡುವಂತೆ ಮಾಡಲು ಚಿಂತನೆ ನಡೆಸುತ್ತಿದ್ದೇವೆ" ಎಂದು ಅರವಿಂದ ಲಿಂಬಾವಳಿ ಹೇಳಿದರು.
ಸಾಹಿತ್ಯ ಸಮ್ಮೇಳನ ಮುಂದೂಡಿಕೆ?: ಹಾವೇರಿಯಲ್ಲಿ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮತ್ತೆ ಮುಂದೂಡಲಾಗುತ್ತದೆ ಎಂದು ಸಚಿವರು ಸುಳಿವು ಕೊಟ್ಟಿದ್ದಾರೆ.
"ಮಾರ್ಚ್ 9ರಂದು ಸಮ್ಮೇಳನದ ದಿನಾಂಕ ನಿಗದಿ ಮಾಡಲು ಸಭೆ ನಡೆಯಬೇಕಿತ್ತು. ಆದರೆ, ಕರ್ನಾಟಕ ಸರ್ಕಾರ 500ಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಆದೇಶ ಹೊರಡಿಸಿರುವುದರಿಂದ ಸಮ್ಮೇಳನ ಮುಂದೂಡಿಕೆ ಬಗ್ಗೆ ನಾನು ಚಿಂತನೆ ಮಾಡುತ್ತಿದ್ದಾನೆ" ಎಂದು ಸಚಿವರು ಹೇಳಿದರು.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications