ಗದಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗದಗ: ಒಂದೇ ಊರಿನ 50 ಮಂದಿ ವಾಂತಿ, ಬೇಧಿಯಿಂದ ಅಸ್ವಸ್ಥ

By ಗದಗ ಪ್ರತಿನಿಧಿ
|
Google Oneindia Kannada News

ಗದಗ, ಫೆಬ್ರವರಿ 17 : ವಾಂತಿ, ಬೇಧಿಗೆ ಇಡೀ ಗ್ರಾಮಸ್ಥರೇ ಕಂಗಾಲಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಚೇನಹಳ್ಳಿ ಗ್ರಾಮದಲ್ಲಿ ಸುಮಾರು 50 ಕ್ಕೂ ಹೆಚ್ಚಿನ ಮಂದಿ ವಾಂತಿ, ಬೇಧಿಯಿಂದ ನರಳುತ್ತಿದ್ದಾರೆ. ಬಸ್ ನಿಲ್ದಾಣ, ರಸ್ತೆಯಲ್ಲಿ ನರಳಾಟ ಮುಂದುವರೆದಿದೆ. ಸರಿಯಾದ ಸಮಯಕ್ಕೆ ಆಂಬುಲೆನ್ಸ್ ಬಾರದ ಕಾರಣಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಅನಾರೋಗ್ಯದ ಕುರಿತು ಮಾಹಿತಿ ನೀಡಿದ್ದರೂ ಆಂಬುಲೆನ್ಸ್ ಕಳುಹಿಸಿಲ್ಲ, ಅವರ ಬೇಜವಾಬ್ದಾರಿ ವರ್ತನೆಯಿಂದ ಮೂರು ಗಂಟೆ ತಡವಾಗಿ ಆಂಬುಲೆನ್ಸ್ ಬಂದಿದೆ. ಅಲ್ಲಿವರೆಗೆ ನಿಲ್ದಾಣದಲ್ಲಿಯೇ ಎಳನೀರು ಕುಡಿಸಿ ಆರೈಕೆ ಮಾಡಲಾಗಿದೆ. ಶಿರಹಟ್ಟಿ ತಾಲೂಕು ಆಸ್ಪತ್ರೆಯಲ್ಲಿ 30 ಕ್ಕೂ ಹೆಚ್ಚು ಮಂದಿಯನ್ನು ದಾಖಲಿಸಲಾಗಿದೆ.

Machenahalli of Shirahatti taluk suffers with Diarrhea

ಗ್ರಾಮದಲ್ಲಿ ಎಲ್ಲರಿಗೂ ಒಂದೇ ರೀತಿಯ ತೊಂದರೆ ಕಾಣಿಸಿಕೊಳ್ಳಲು ಕಾರಣ ಏನು ಎಂದು ಇದುವರೆಗೂ ತಿಳಿದುಬಂದಿಲ್ಲ, ನೀರಿನಿಂದಲೂ ಬಂದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ರೋಗಿಗಳ ಪರೀಕ್ಷೆ ನಂತರ ಕಾರಣ ತಿಳಿಯಲಿದೆ.

English summary
Havoc created after almost people in Gadag were suffered with Diarrhea and vomiting on Saturday. Later officials were rushed to village and taken further rescue operations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X