ಕಾರ ಹುಣ್ಣಿಮೆ: ಎತ್ತಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ: ಫೋಟೋ ವೈರಲ್

ಕೊಪ್ಪಳ, ಜೂನ್ 25: ಕರ್ನಾಟಕದಲ್ಲಿ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೇ ಕಾಂಗ್ರೆಸ್‌ನಲ್ಲಿ ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ ಪಕ್ಷದ ಕಾರ್ಯಕರ್ತರು ಹಾಗೂ ಶಾಸಕರಲ್ಲಿ ಗೊಂದಲ ಮನೆಮಾಡಿದೆ.

ಈ ನಡುವೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಕಾರ ಹುಣ್ಣಿಮೆಗೆ ಸಿಂಗಾರಗೊಂಡ ಎತ್ತಿನ ಮೇಲೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬರೆದು ತಮ್ಮ ಅಭಿಮಾನ ತೋರಿಸಿದ್ದಾರೆ.

ರಾಜ್ಯದ ವಿವಿಧ ಭಾಗಗಳಲ್ಲಿ ಕಾರ ಹುಣ್ಣಿಮೆಯನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ, ಈ ಬಾರಿ ಕೊರೊನಾ ವೈರಸ್‌ನಿಂದಾಗಿ ಸರಳವಾಗಿ ಆಚರಿಸಲಾಗಿದೆ.

Gadag: Next Chief Minister Siddaramaiah Lines Written On Bull In Thimmapur Pic Goes Viral

ಗದಗ ತಾಲ್ಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡುವ ಪ್ರತೀತಿ ಇದ್ದು, ಈ ಬಾರಿ ಕೂಡ ಸರಳವಾಗಿ ಗ್ರಾಮಸ್ಥರು ಕಾರ ಹುಣ್ಣಿಮೆ ಆಚರಿಸಿದ್ದಾರೆ. ಈ ಬಾರಿ ಎತ್ತಿಗೆ ಸಿಂಗರಿಸುವ ವೇಳೆ ಸಿದ್ದರಾಮಯ್ಯ ಅಭಿಮಾನಿಗಳು 'ಮುಂದಿನ ಸಿಎಂ ಸಿದ್ದರಾಮಯ್ಯ' ಎಂದು ಬರೆದಿದ್ದಾರೆ.

Recommended Video

      ಇರಾಕ್ ಅಥವಾ ಇಸ್ರೇಲ್ ಆ ದಾಳಿ ಮಾಡಿರೋದ ಅಂತ!! | Oneindia Kannada

      ತಿಮ್ಮಾಪುರ ಗ್ರಾಮದಲ್ಲಿ ಕಾರ ಹುಣ್ಣಿಮೆ ದಿನ ಕರಿ ಹರಿಯುವ ಸಂಪ್ರದಾಯಕ್ಕೆ ತಕ್ಕಂತೆ ಎತ್ತುಗಳನ್ನು ಸಿಂಗರಿಸಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭ ಮೆರವಣಿಗೆಗೆ ಸಿದ್ಧಗೊಳಿಸಿದ್ದ ಎತ್ತಿನ ಮೇಲೆ ಮುಂದಿನ ಸಿಎಂ ಸಿದ್ದರಾಮಯ್ಯ ಬರವಣಿಗೆಯೊಂದು ಎಲ್ಲರ ಗಮನ ಸೆಳೆದಿದೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+