ಸರ್ಕಾರಿ ವೈದ್ಯರ ಮುಷ್ಕರ: ಗದಗದ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಪರದಾಟ
ಸರ್ಕಾರಿ ನೌಕರರ ಮುಷ್ಕರದ ಬಗ್ಗೆ ತಿಳಿಯದೇ ಜಿಲ್ಲೆಯ ಹಲವು ಗ್ರಾಮಗಳಿಂದ ನೂರಾರು ರೋಗಿಗಳು ಗದಗದ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದು, ಚಿಕಿತ್ಸೆ ನೀಡದೇ ಮುಷ್ಕರ ನಡೆಸುತ್ತಿರುವ ಆಸ್ಪತ್ರೆ ಸಿಬ್ಬಂದಿ ವರ್ತನೆಗೆ ಬೇಸರ ವ್ಯಕ್ತಪಡಿಸಿದ್ದಾರೆ.
ಗದಗ, ಮಾರ್ಚ್ 1: 7ನೇ ವೇತನ ಆಯೋಗದ ಶಿಫಾರಸು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರ ಅನಿರ್ಧಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಪರದಾಡುವಂತಾಗಿದೆ. ಮುಷ್ಕರದ ಬಗ್ಗೆ ಗೊತ್ತಿರದ ನೂರಾರು ರೋಗಿಗಳು ಗದಗದ ಜಿಮ್ಸ್ ಆಸ್ಪತ್ರೆಗೆ ಬಂದಿದ್ದು, ವೈದ್ಯರ ವರ್ತನೆಗೆ ಬೇಸರ ವ್ಯಕ್ತಪಡಿಸಿದರು.
ಸರ್ಕಾರಿ ನೌಕರರ ಮುಷ್ಕರದ ಬಗ್ಗೆ ತಿಳಿಯದೇ ಜಿಲ್ಲೆಯ ಹಲವು ಗ್ರಾಮಗಳಿಂದ ನೂರಾರು ರೋಗಿಗಳು ಗದಗದ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದಾರೆ. ಆದರೆ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದು, ಒಪಿಡಿ ವಿಭಾಗದಲ್ಲಿ ಯಾರೂ ಚೀಟಿ ಮಾಡುತ್ತಿಲ್ಲ. ಹಿರಿಯ ವೈದ್ಯರು ಹೇಳಿದರೆ ಮಾತ್ರ ಚೀಟಿ ಮಾಡಲಾಗುತ್ತದೆ. ಇಲ್ಲದಿದ್ದರೆ ಇಲ್ಲವೆಂದು ಒಪಿಡಿ ವಿಭಾಗದಲ್ಲಿರುವ ಸಿಬ್ಬಂದಿ ಕಡ್ಡಿ ಮುರಿದಂತೆ ಹೇಳುತ್ತಿದ್ದಾರೆ ಎಂದು ರೋಗಿಗಳು ಅಸಮಾಧಾನಗೊಂಡಿದ್ದಾರೆ.

ಮುಷ್ಕರದ ಬಗ್ಗೆ ಗೊತ್ತಿರದ ನೂರಾರು ರೋಗಿಗಳು ಆಸ್ಪತ್ರೆಗೆ ಬಂದಿದ್ದಾರೆ. ಹೀಗೆ ಇದ್ದಕ್ಕಿದ್ದಂತೆ ಚೀಟಿ ಮಾಡುವುದಿಲ್ಲವೆಂದು ಹೇಳಿದರೆ ಅವರು ಎಲ್ಲಿಗೆ ಹೋಗಬೇಕು ಎಂದು ಜಿಲ್ಲೆಯ ಬೆಳ್ಳಟ್ಟಿಯಿಂದ ಬಂದ ರೋಗಿ ಅನಿಲ್ ಕುಮಾರ್ ಎಂಬ ಯುವಕ ಹಿರಿಯ ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಾವು ಕಣ್ಣಿನ ಚಿಕಿತ್ಸೆಗೆಂದು ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿಯಿಂದ ಈ ಆಸ್ಪತ್ರೆಗೆ ಬಂದಿದ್ದೇವೆ. ಒಪಿಡಿ ವಿಭಾಗದಲ್ಲಿ ಯಾರೂ ಚೀಟಿ ಮಾಡುತ್ತಿಲ್ಲ. ನೀವು ಹೇಳಿದರೆ ಚೀಟಿ ಮಾಡಲು ಒಪ್ಪಿದ್ದಾರೆ. ಚಿಕಿತ್ಸೆ ನೀಡುವ ಬಗ್ಗೆ ಅಥವಾ ನೀಡದ ಬಗ್ಗೆ ಜನರಿಗೆ ತಿಳಿಯುವಂತೆ ಸ್ಪಷ್ಟವಾಗಿ ಹೇಳಿ ಎಂದು ಜಿಮ್ಸ್ ಆಸ್ಪತ್ರೆಯ ಎಂಎಸ್ ಅವರನ್ನು ಯುವಕ ಅನಿಲ್ ಕುಮಾರ್ ಕೇಳಿಕೊಂಡಿದ್ದಾರೆ.
ಮುಷ್ಕರದ ಬಗ್ಗೆ ರೋಗಿಗಳಿಗೆ ಮನವರಿಕೆ ಮಾಡದ ಆಸ್ಪತ್ರೆಯ ಎಂಎಸ್ ಅವರು ಈ ಬಗ್ಗೆ ಮಾತನಾಡದೇ ಆಸ್ಪತ್ರೆಯಿಂದ ತೆರಳಿದ್ದಾರೆ. ಬೇರೆ ದಾರಿ ಕಾಣದ ಅನಿಲ್, ವೈದ್ಯರ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ವೈದ್ಯರು ಹಾಜರಿದ್ದರೂ ಚೀಟಿ ಮಾಡದೇ ನಿರ್ಲಕ್ಷ್ಯ ತೋರುತ್ತಿದ್ದಾರೆ. ಮುಷ್ಕರ ಇರುವ ಬಗ್ಗೆ ನಮಗೆ ಗೊತ್ತಿಲ್ಲ. ದಿಢೀರ್ ಮುಷ್ಕರದಿಂದ ದೂರದಿಂದ ಬಂದಿರುವ ನಮಗೆ ಕಷ್ಟವಾಗುತ್ತಿದೆ. ನಾವು ಕಟ್ಟುವ ತೆರಿಗೆಯಿಂದಲೇ ನಿಮಗೆ ಸಂಬಳ ಕೊಡಲಾಗುತ್ತಿದೆ. ನಮಗೆ ಉತ್ತರ ಕೊಟ್ಟು ಹೋಗಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications