Breaking; ದಿಂಗಾಲೇಶ್ವರ ಸ್ವಾಮೀಜಿಗೆ ತಡೆ ಹಾಕಿದ ನರಗುಂದ ಪೊಲೀಸ್
ಗದಗ, ಏಪ್ರಿಲ್ 27; ಶಿರಹಟ್ಟಿಯ ಫಕೀರೇಶ್ವರ ಮಠದ ಶ್ರೀ ದಿಂಗಾಲೇಶ್ವರ ಸ್ವಾಮೀಜಿ ನರಗುಂದ ಪ್ರವೇಶಿಸದಂತೆ ಪೊಲೀಸರು ತಡೆದರು. ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ನಿವಾಸದ ಮುಂದೆ ಮಂಗಳವಾರ ಧರಣಿ ನಡೆಸಲು ಸ್ವಾಮೀಜಿ ಬೆಂಬಲಿಗರ ಜೊತೆ ಆಗಮಿಸಿದ್ದರು.
ಗದಗ ನರಗುಂದ ಪಟ್ಟಣದಲ್ಲಿರುವ ಸಚಿವ ಸಿ. ಟಿ. ಪಾಟೀಲ್ ನಿವಾಸದ ಮುಂದೆ ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲು ಆಗಮಿಸಿದ್ದರು. ಆದರೆ ಪಟ್ಟಣ ಪ್ರವೇಶ ಮಾಡಲು ಪೊಲೀಸರು ಅವಕಾಶ ನೀಡಲಿಲ್ಲ.
ಬುಧವಾರ ನರಗುಂದ ಹೈಡ್ರಾಮಕ್ಕೆ ಸಾಕ್ಷಿಯಾಯಿತು. ಸಚಿವರ ನಿವಾಸದ ಮುಂದೆ ಸ್ವಾಮೀಜಿ ಪ್ರತಿಭಟನೆ ನಡೆಸಲು ಆಗಮಿಸುವುದನ್ನು ತಿಳಿದು ಸಚಿವರ ಬೆಂಬಲಿಗರು ಸಹ ಅಪಾರ ಸಂಖ್ಯೆಯಲ್ಲಿ ಜಮಾಯಿಸಿದ್ದರು.

ದಿಂಗಾಲೇಶ್ವರ ಸ್ವಾಮೀಜಿ ಮತ್ತು ಅವರ ಭಕ್ತರು, ಸಚಿವ ಸಿ. ಸಿ. ಪಾಟೀಲ್ ಬೆಂಬಗರ ಜಮಾವಣೆಯಿಂದ ನರಗುಂದದಲ್ಲಿ ಹೈಡ್ರಾಮ ನಡೆಯಿತು. ಅಂತಿಮವಾಗಿ ದಿಂಗಾಲೇಶ್ವರ ಸ್ವಾಮೀಜಿ ಪಟ್ಟಣ ಪ್ರವೇಶಿಸದೆ ವಾಪಸ್ ಹೋದ ಮೇಲೆ ಪರಿಸ್ಥಿತಿ ತಿಳಿಯಾಯಿತು.
ದಿಂಗಾಲೇಶ್ವರ ಸ್ವಾಮೀಜಿ, "ಮಠಗಳಿಗೆ ಮಂಜೂರಾದ ಅನುದಾನ ಪಡೆಯಲು ಶೇ 30ರಷ್ಟು ಕಮೀಷನ್ ನೀಡಬೇಕು" ಎಂದು ಹೇಳಿಕೆ ಕೊಟ್ಟಿದ್ದರು.
ಇದಕ್ಕೆ ತಿರುಗೇಟು ನೀಡಿದ್ದ ಸಚಿವ ಸಿ. ಸಿ. ಪಾಟೀಲ್, "ದಿಂಗಾಲೇಶ್ವರ ಸ್ವಾಮೀಜಿ ಬಳಿ ಯಾರಾದರೂ ಕಮೀಷನ್ ಕೇಳಿದ್ದರೆ ದಾಖಲೆಗಳನ್ನು ಕೊಡಲಿ. ಮುಖ್ಯಮಂತ್ರಿಗಳು ತನಿಖೆ ಮಾಡಿಸುತ್ತೇವೆ ಎಂದು ಹೇಳಿದ್ದಾರೆ. ಕೇವಲ ಆರೋಪ ಮಾಡುವುದು ಬೇಡ. ಸ್ವಾಮೀಜಿಗಳು ರಾಜಕಾರಣಿಗಳಾಗಿ ಮಾತನಾಡಬಾರದು" ಎಂದು ಹೇಳಿದ್ದರು.
ನರಗುಂದಲ್ಲಿ ಬುಧವಾರ ನಡೆದ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಸಿ. ಸಿ. ಪಾಟೀಲ್, "ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ನಾನು ಮಾಡಿದ ಆರೋಪಕ್ಕೆ ಬದ್ಧನಾಗಿದ್ದೇನೆ. ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಆರೋಪ ದೃಢಪಡಿಸುವ ಕೆಲಸ ನನ್ನದಲ್ಲ" ಎಂದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications