ಗದಗದಲ್ಲಿ ಮಳೆ ಹಾನಿಗೀಡಾದ ಮನೆಗಳಿಗೆ ಪರಿಹಾರ ಸಿಕ್ಕಿಲ್ಲ: ಎಚ್.ಕೆ ಪಾಟೀಲ್
ಗದಗ, ಆಗಸ್ಟ್, 07: ಗದಗದಲ್ಲಿ ಭಾರೀ ಮಳೆಯಿಂದ ಹಲವು ಮನೆಗಳು ಕುಸಿದು ಬಿದ್ದಿದ್ದು, ಹಾನಿಗೊಳಗಾದವರಿಗೆ ಇನ್ನು ಪರಿಹಾರ ಕೊಟ್ಟಿಲ್ಲ ಎಂದು ಶಾಸಕ ಹೆಚ್.ಕೆ ಪಾಟೀಲ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭೀಕರ ಮಳೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅದರಲ್ಲೂ ಬೆಳೆದ ಬೆಳೆಗಳೆಲ್ಲ ಜಲಾವೃತವಾಗಿ ಅನ್ನದಾತ ಭಾರೀ ತೊಂದರೆ ಅನುಭವಿಸುತ್ತಿದ್ದಾನೆ. ಆದರೆ ರಾಜ್ಯ ಸರ್ಕಾರ ಮಾತ್ರ ಪರಿಹಾರ ಕೊಡುವುದಕ್ಕೆ ಮುಂದಾಗುತ್ತಿಲ್ಲ ಎಂದು ಶಾಸಕ ಹೆಸ್.ಕೆ ಪಾಟೀಲ್ ಅಸಮಾಧಾನ ಹೊರಹಾಕಿದರು. ಗದಗನಲ್ಲಿ ಮಾತನಾಡಿದ ಅವರು ಬೆಳೆದು ನಿಂತ ಬೆಳೆ ನೆಲಕಚ್ಚಿವೆ. ಬೆಳೆ ಪರಿಹಾರವನ್ನ ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
'ಪರಿಹಾರದ ವಿಷಯದಲ್ಲಿ ಸರ್ಕಾರ ಗಪ್ ಚುಪ್'
ಇನ್ನು ಗದಗ ನಗರದ ಬೆಟಗೇರಿ ಭಾಗದಲ್ಲಿ ನಿರಂತರವಾಗಿ ಮಳೆ ಸುರಿದು ಹಲವು ಮನೆಗಳು ಕುಸಿದು ಬಿದ್ದಿವೆ. ಆದರೆ ಹತ್ತು ದಿನದ ಹಿಂದೆ ಮಳೆಯಿಂದಾಗಿ ಹಾನಿಗೊಳಗಾದವರಿಗೆ ಇನ್ನೂ ಪರಿಹಾರದ ಹಣ ಮುಟ್ಟಿಲ್ಲ. ಬಿದ್ದ ಮನೆಗಳಿಗೆ ಪರಿಹಾರ ನೀಡದೇ ಸರ್ಕಾರ ಗಪ್ ಚುಪ್ ಆಗಿದೆ. ತಕ್ಷಣ ಮನೆಗಳನ್ನು ಕಳೆದುಕೊಂಡವರಿಗೆ ಪರಿಹಾರ ಬಿಡುಗಡೆ ಮಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಾಗೆಯೇ ಕಿತ್ತು ಹೋಗಿರುವ ರಸ್ತೆಗಳನ್ನು ದುರಸ್ತಿ ಮಾಡಿಸಿ. ರಸ್ತೆಗಳು ಗುಂಡಿ ಬಿದ್ದಿದ್ದು, ವಾಹವ ಸವಾರರು ಪರದಾಡುವಂತೆ ಆಗಿದೆ. ತಕ್ಷಣ ಎಲ್ಲಾ ಕಡೆ ರಸ್ತೆ ರಿಪೇರಿ ಕೆಲಸವನ್ನು ಮಾಡಿಸಬೇಕು. ಹದಗೆಟ್ಡ ರಸ್ತೆಗಳ ಬಗ್ಗೆ ಜನ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು. ಗದಗ ನಗರದಲ್ಲೂ ರಸ್ತೆ ಪಾಟ್ ಹೋಲ್ ಸಮಸ್ಯೆ ಇದೆ. ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ, ಸೋಮವಾರದಿಂದ ಕೆಲಸ ಆರಂಭವಾಗುತ್ತದೆ ಎಂದರು.

ವಯಸ್ಸಿನ ಬಗ್ಗೆ ತಕರಾರು ಯಾಕೆ?:
ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯನವರ ವಯಸ್ಸಿನ ಚರ್ಚೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಸಿದ್ಧರಾಮಯ್ಯನವರಿಗೆ ವಯಸ್ಸು ಎಷ್ಟಾದರು ಇರಲಿ ತಕರಾರು ಯಾಕೆ? ಎಂದು ಕಿಡಿಕಾರಿದರು. ಸಿದ್ದರಾಮಯ್ಯನವರೇ ನನಗೆ 75 ವಯಸ್ಸು ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಹುಟ್ಟಿದ್ದ ದಿನಾಂಕ ನಮ್ಮ ಅಪ್ಪ, ಅಮ್ಮನಿಗೂ ಗೊತ್ತಿಲ್ಲ, ನನಗೂ ಗೊತ್ತಿಲ್ಲ ಟೀಚರ್ ದಾಖಲಿಸಿದ್ದು ಎಂದು ಅವರೇ ಹೇಳಿಕೊಂಡಿದ್ದಾರೆ. ಅವರ ಮನೆಯಲ್ಲಿಯೂ ಒಪ್ಪಿಕೊಂಡಿದ್ದಾರೆ, ನಾವು ಒಪ್ಪಿಕೊಂಡಿದ್ದೇವೆ. ಅವರ ಅಭಿಮಾನಿಗಳು ಒಪ್ಪಿಕೊಂಡಿದ್ದಾರೆ. ಹೀಗಿದ್ದರೂ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ಧರಾಮೋತ್ಸವ ರಾಷ್ಟ್ರಮಟ್ಟದಲ್ಲಿ ಅಭೂತಪೂರ್ವ ಕಾರ್ಯಕ್ರಮ ಆಗಿತ್ತು. ನಮ್ಮ ಪಕ್ಷಕ್ಕೆ ಇದರಿಂದ ದೊಡ್ಡ ಶಕ್ತಿ ಬಂದಿದೆ. ಈ ಕಾರಣಕ್ಕೆ ಬಹಳ ಜನ ಗಾಬರಿಯಾಗಿದ್ದಾರೆ. ಅದಕ್ಕೇನೂ ಮಾಡಲು ಆಗುವುದಿಲ್ಲ. ಜನರ ಪ್ರೀತಿಗಾಗಿ ಅಷ್ಟು ದೊಡ್ಡ ಕಾರ್ಯಕ್ರಮ ಆಗಿದೆ. ಅವರಿಗೆ 75 ವಯಸ್ಸು ಪೂರ್ಣಗೊಂಡಿಲ್ಲ ಎಂದು ಹುಡುಕುವುದರಲ್ಲಿ ಏನೂ ಲಾಭ ಇಲ್ಲ. ಅವರಿಗೆ 73, 74 ವಯಸ್ಸು ಎಂದು ಹುಡುಕಿದರೆ ಏನೂ ಲಾಭ ಇಲ್ಲ ಎಂದು ಗುಡುಗಿದರು.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications