ಶೆಟ್ಟೆಕೆರೆಯಲ್ಲಿ ಅಪರೂಪದ ನೀರು ನಾಯಿ ಪ್ರತ್ಯಕ್ಷ, ಹರಿದು ಬಂದ ಜನರ ದಂಡು
ಗದಗ, ಜನವರಿ, 23: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೆರೆಯ ಗ್ರಾಮದಲ್ಲಿರುವ ಶೆಟ್ಟಿ ಎಂಬ ಕೆರೆಯೊಂದರಲ್ಲಿ ಅಳಿವಿನ ಅಂಚಿನಲ್ಲಿರುವ ನೀರು ನಾಯಿಗಳು ಕಾಣಿಸಿಕೊಂಡಿವೆ. ಸುದ್ದಿ ಗೊತ್ತಾಗಿದ್ದೇ ತಡ ನೀರು ಕೆರೆಯಲ್ಲಿರುವ ನಾಯಿಗಳನ್ನು ನೋಡಲು ಸುತ್ತಮುತ್ತಲಿನ ಜನ ಕಿಕ್ಕಿರಿದು ಬರುತ್ತಲೇ ಇದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮಳೆ ಹೆಚ್ಚಾಗಿ ಸುರಿದಿದ್ದು, ಇಲ್ಲಿನ ಕೆರೆ ಕಟ್ಟೆಗಳು, ಹಳ್ಳ -ಕೊಳ್ಳ ತುಂಬಿ ಹರಿದು ಕೋಡಿ ಬಿದ್ದಿದೆ. ಹಚ್ಚ ಹಸಿರಾದ ವಾತಾವರಣವೂ ಇದೆ. ಹಾಗಾಗಿ ಸುಂದರ ತಾಣ ಹುಡಿಕಿಕೊಂಡು ನಾಯಿಗಳು ಇಲ್ಲಿಗೆ ಬಂದಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಕೆರೆಯಲ್ಲಿ ಕಾಣಿಸಿಕೊಂಡ ನೀರು ನಾಯಿ
ಕಾಶ್ಮೀರ, ಅಸ್ಸಾಂ ಹಾಗೂ ದಕ್ಷಿಣ ಭಾರತದಲ್ಲಿ ಅನೇಕ ಕಡೆ ಹಾಗೂ ತುಂಗಾಭದ್ರಾ ನದಿಯಲ್ಲಿ ಈ ಅಳಿವಿನ ಅಂಚಿನಲ್ಲಿರುವ ನೀರು ನಾಯಿಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಸದ್ಯ ಕೆರೆಯ ಅಚ್ಚುಕಟ್ಟು ಪ್ರದೇಶ (ಸುಮಾರು 234 ಹೆಕ್ಟೇರ್) ವಿಶಾಲವಾಗಿದ್ದರಿಂದ ನೀರು ನಾಯಿಗಳು ಇಲ್ಲಿಯೇ ಬೀಡು ಬಿಟ್ಟಿವೆ. ಅಲ್ಲದೇ ಜಲಚರ ಪ್ರಾಣಿಗಳಿಗೆ ಹಾಗೂ ಪಕ್ಷಿಗಳಿಗೆ ಕೆರೆಯಲ್ಲಿ ಸ್ವಚ್ಛಂದವಾಗಿ ವಾಸಿಸಲು ವಾತಾವರಣವೂ ಇದ್ದು, ಈ ನೀರು ನಾಯಿಗಳು ಸದ್ಯ ಕೆರೆಯಲ್ಲಿ ತಿರುಗಾಡುತ್ತಿವೆ. ನೀರಿನಲ್ಲಿ ಅತ್ಯಂತ ವೇಗವಾಗಿ ಚಲಿಸುವ ಹಾಗೂ ಹರಿಯುವ ನೀರಿಗೆ ಎದುರು ಚಲಿಸುವ ಪ್ರಾಣಿ ಇದಾಗಿದೆ.

ಹರಿದು ಬಂದ ಜನರ ದಂಡು
ಈಗಾಗಲೇ ಮಳೆ ಹೆಚ್ಚಾಗಿ ಆಗಿರುವುದರಿಂದ ಇಲ್ಲಿನ ಹಳ್ಳ -ಕೊಳ್ಳ ತುಂಬಿ ಹರಿದಿದ್ದು, ಈ ನಾಯಿಗಳು ನದಿಯ ಮೂಲಕ ಬಂದು ಹಳ್ಳಕ್ಕೆ ಸೇರಿಕೊಂಡಿವೆ. ಬಳಿಕ ಅಲ್ಲಿಂದ ಈ ಕೆರೆಗೆ ಬಂದಿವೆ ಎನ್ನಲಾಗುತ್ತಿದೆ. ಇಂತಹ ಅಪರೂಪದ ಪ್ರಾಣಿಗಳನ್ನು ಉಳಿಸುವ ಕಾರ್ಯಕ್ಕೆ ಮುಂದಾಗಬೇಕಾಗಿದೆ. ಈ ಪ್ರಾಣಿಗಳು ನೋಡಲು ಸಿಗುವುದು ಅಪರೂಪವಾಗಿದೆ. ಏಕೆಂದರೆ ನೀರಿನಲ್ಲಿ ಕೆಲವೊಮ್ಮೆ ತಲೆಯೆತ್ತಿ ಅತ್ತಿತ್ತ ನೋಡಿ ಕೂಡಲೇ ಮುಳುಗಿ ನೀರಿನಲ್ಲಿ ಚಲಿಸುತ್ತದೆ. ಕೆಲವೊಮ್ಮೆ ಮಾತ್ರ ಕೆರೆಯ ದಡದಲ್ಲಿ ಕಾಣುತ್ತಿವೆ. ಈ ಪ್ರಾಣಿ ಶೆಟ್ಟಿಕೆರೆ ಗ್ರಾಮದ ಕೆರೆಗೆ ಹೊಸ ಅತಿಥಿಯಾಗಿದೆ.

ಅಳಿವಿನಂಚಿನಲ್ಲಿರುವ ನೀರು ನಾಯಿ
ಅಳಿವಿನಂಚಿನಲ್ಲಿರುವ ನೀರು ನಾಯಿಯ ಚಿತ್ರವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿಯುತ್ತಲೇ ಇದ್ದಾರೆ. ಅಲ್ಲದೇ ಈ ಪ್ರದೇಶ ಹೆಚ್ಚಾಗಿ ಬಯಲು ಸೀಮೆಯಿಂದ ಕೂಡಿದೆ. ಇಂತಹ ಅಪರೂಪದ ಪ್ರಾಣಿಗಳು ಇಲ್ಲಿ ಕಾಣಸಿಗುವುದು ತುಂಬಾ ಕಡಿಮೆ. ಹಾಗಾಗಿ ಸದ್ಯ ಶೆಟ್ಟಿ ಕೆರೆ ಚಿಕ್ಕದಾದ ಪ್ರಾಣಿ-ಪಕ್ಷಿಗಳ ಸಂಗ್ರಹಾಲಯವಾಗಿ ಮಾರ್ಪಟ್ಟಿದೆ. ಸದ್ಯ ಈ ಪ್ರದೇಶದಲ್ಲಿ ಅಪರೂಪದ ಪ್ರಾಣಿಗಳು ಕಾಣಿಸಿಕೊಂಡು ಅಚ್ಚರಿ ಮೂಡಿಸಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications