ರಾಕಿಂಗ್ ಸ್ಟಾರ್ ಯಶ್ಗೆ ಮತ್ತೊಂದು ಆಘಾತ: ನಟನನ್ನು ನೋಡಲು ಬಂದಿದ್ದ ಯುವಕ ಅಪಘಾತದಲ್ಲಿ ಸಾವು
ಗದಗ, ಜನವರಿ 09: ರಾಕಿಂಗ್ ಸ್ಟಾರ್ ಯಶ್ ನೋಡಲು ಬಂದ ಅಭಿಮಾನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಬಿಂಕದಕಟ್ಟಿ ಗ್ರಾಮದ ನಿಖಿಲ್ ಕರೂರ್ (22) ಮೃತ ದುರ್ದೈವಿ.
ಇಂಜಿನಿಯರ್ ಆಗಿದ್ದ ನಿಖಿಲ್ ಕರೂರ್ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಯಾಗಿದ್ದನು. ನಿನ್ನೆ( ಜನವರಿ 08)ರಂದು ಯಶ್ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಯಶ್ ಬಂದ ಹಿನ್ನೆಲೆಯಲ್ಲಿ ನಟನನ್ನು ಕಾಣಲು ತನ್ನೂರಿನಿಂದ ಬಂದಿದ್ದನು.

ಈತ ಗದಗದಿಂದ ವಾಪಸ್ಸು ಆಗುತ್ತಿದ್ದ ನಟ ಯಶ್ ಕಾರಿನ ಹಿಂದೆ ತನ್ನ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಗದಗದ ತೇಜಾ ನಗರದ ಬಳಿ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ನಿಖಿಲ್ ಕರೂರ್ ಗಂಭೀರ ಗಾಯಗೊಂಡಿದ್ದನು. ಕೂಡಲೇ ಆತನನ್ನು ಸ್ಥಳೀಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿಲಾಯಿತು. ಆದರೆ ದುರಾದೃಷ್ಟವಶಾತ್ ಯುವಕ ಸಾವನ್ನಪ್ಪಿದ್ದಾನೆ.
ರಾಕಿಂಗ್ ಸ್ಟಾರ್ ಯಶ್ ಸೂರಣಗಿಗೆ ಭೇಟಿ ನೀಡಿದ್ದೇಕೆ..?
ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬ್ಯಾನರ್ ಕಟ್ಟಲು ಹೋದ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಹನಮಂತ ಹರಿಜನ (21), ಮುರಳಿ ನಡವಿನಮನಿ (20) ಹಾಗೂ ನವೀನ್ ಗಾಜಿ (19) ಎನ್ನುವ ಮೂವರು ಯುವಕರು ಸಾವನ್ನಪ್ಪಿದ್ದರು.

ಒಂದೇ ಊರಿನಲ್ಲಿ ಮೂವರು ಅಭಿಮಾನಿಗಳ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ನಟ ಯಶ್ ಅವರು ಗದಗದ ಸೂರಣಗಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಯುವಕರ ಪೋಷಕರಿಗೆ ಸಾಂತ್ವನ ಹೇಳಿದ್ದರು. ಸೂರಣಗಿ ಗ್ರಾಮಕ್ಕೆ ಬಂದಿದ್ದ ಯಶ್ರನ್ನು ನೋಡಲು ನೂರಾರು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.
ಮೂವರು ಮೃತ ಯುವಕರ ಮನೆಗೆ ಭೇಟಿ ನೀಡಿದ ನಂತರ ಯಶ್ ವಾಪಾಸ್ ಆಗುವ ವೇಳೆ ಮತ್ತೊಂದು ದುರಂತ ನಡೆದಿದೆ. ಯಶ್ ನೋಡಲು ಬಂದ ಮತ್ತೋರ್ವ ಅಭಿಮಾನಿ ನಿಖಿಲ್ ಕರೂರ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದನು. ಈ ವೇಳೆ ಯಶ್ ಆಸ್ಪತ್ರೆಗೆ ಭೇಟಿ ನೀಡಿ ಆತನ ಆರೋಗ್ಯ ವಿಚಾರಿಸಿ ಪೋಷಕರಿಗೆ ಧೈರ್ಯ ತುಂಬಿ ವಾಪಸ್ ಆಗಿದ್ದರು. ದುರಾದೃಷ್ಟವಶಾತ್ ನಿಖಿಲ್ ಕರೂರ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications