ಗದಗ: ಏತ ನೀರಾವರಿ ಯೋಜನೆಗೆ ಮರುಜೀವ, ನರಗುಂದದ ರೈತರಿಗೆ ಶುಭಸುದ್ದಿ
ಗದಗ, ಆಗಸ್ಟ್ 14 : ನರಗುಂದ ತಾಲೂಕಿನ ವ್ಯಾಪ್ತಿಯ ಬನಹಟ್ಟಿ, ಕುರ್ಲಗೇರಿ ಸುರಕೋಡ, ಖಾನಾಪುರ, ರೆಡ್ಡೇರನಾಗನೂರು, ಕೊಣ್ಣೂರು ಗ್ರಾಮದ ಜಮೀನುಗಳಿಗೆ ನೀರು ಪೂರೈಸುವ ದೃಷ್ಟಿಯಿಂದ 25 ವರ್ಷಗಳ ಹಿಂದೆ ರೂಪುಗೊಂಡಿದ್ದ ಏತ ನೀರಾವರಿ ಯೋಜನೆಗೆ ಮರು ಜೀವ ನೀಡುವ ನಿಟ್ಟಿನಲ್ಲಿ 80 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ ತಿಳಿಸಿದರು.
ಸಂಪುಟ ಸಭೆಯಲ್ಲಿ ಜಾಕ್ ವೆಲ್ ಪೈಪ್ ರೀ ಮಾಡ್ಲಿಂಗ್ ಮಾಡಲು 80 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಪೈಪ್ ಗಳು ದುರಸ್ಥಿಯಾದಲ್ಲಿ, ನರಗುಂದ ಭಾಗದ 15 ರಿಂದ 20 ಸಾವಿರ ಎಕರೆ ಕೃಷಿ ಜಮೀನಿಗೆ ನೀರು ಹರಿಸಬಹುದಾಗಿದೆ ಎಂದು ಹೇಳಿದರು.
ನರಗುಂದ ಪಟ್ಟಣದಲ್ಲಿ ಶನಿವಾರ ನಡೆದ ತಿರಂಗಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, "ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಹಿನ್ನೆಲೆ ನರಗುಂದ ಬಿಜೆಪಿ ಯುವ ಘಟಕ, ಲಯನ್ಸ್ ಕ್ಲಬ್ ವತಿಯಿಂದ ತಿರಂಗಾ ಯಾತ್ರೆ ಆಯೋಜಿಸಲಾಗಿದೆ. ನೂರು ಮೀಟರ್ ಉದ್ದದ ತಿರಂಗ ಧ್ವಜದ ಮೆರವಣಿಗೆ ಮಾಡಲಾಗಿದೆ. ನರಗುಂದ ಜನರ ಆಶೋತ್ತರಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ನೀರಾವರಿ ಯೋಜನೆಗೆ ಮರು ಜೀವ ನೀಡಲಾಗುವುದು" ಎಂದು ಹೇಳಿದರು.

80 ಕೋಟಿ ರೂಪಾಯಿ ಬಿಡುಗಡೆ; ಏತ ನೀರಾವರಿ ಯೋಜನೆಗಳಿಗೆ ಒಟ್ಟು 34.610 ಕಿ.ಮೀ. ಉದ್ದದ ಮತ್ತು 0.60 ರಿಂದ 1 ಮೀಟರ್ ವ್ಯಾಸದ ಸಿಮೆಂಟ್ ಪೈಪ್ ಗಳನ್ನು ಅಳವಡಿಸಲಾಗಿದೆ. ಈ ಪೈಪ್ಗಳಲ್ಲಿ ನೀರಿನ ಸೋರಿಕೆ ಆಗುತ್ತಿರುವುದರಿಂದ ರೈತರ ಹೊಲಗಳಲ್ಲಿ ನೀರು ನಿಂತು ಕೃಷಿ ಚಟುವಟಿಕೆ ಮಾಡಲು ಅಡಚಣೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಳೆಯ ಸಿಮೆಂಟ್ ಪೈಪ್ಗಳನ್ನು ಬದಲಾಯಿಸಿ ಎಂ. ಎಸ್. ಪೈಪ್ (ಕಬ್ಬಿಣದ ಪೈಪ್) ಅಳವಡಿಸುವ ಕಾಮಗಾರಿ ಕೈ ಗೊಳ್ಳುವ ಉದ್ದೇಶ ಹೊಂದಲಾಗಿದೆ.
ಆಗಸ್ಟ್ 12 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಯೋಜನೆಗೆ ಬಗ್ಗೆ ಪ್ರಸ್ತಾಪಿಸಿ, ಅಂದಾಜು 80 ಕೋಟಿ ರೂಪಾಯಿ ಬಿಡುಗಡೆಗೊಳಿಸಲು ಅನುಮತಿ ನೀಡಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದರು.
ಗಮನ ಸೆಳೆದ ತ್ರಿವರ್ಣ ಧ್ವಜ ಯಾತ್ರೆ; ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುವ ಮುನ್ನ, ಸಂಗೊಳ್ಳಿರಾಯಣ್ಣ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಚಿವ ಸಿ. ಸಿ. ಪಾಟೀಲ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು. ನಂತರ ನರಗುಂದ ಪ್ರಮುಖ ಬೀದಿಗಳಲ್ಲಿ ತಿರಂಗಾ ಮೆರವಣಿಗೆ ನಡೆಯಿತು.

ನರಗುಂದ ಬಿಜೆಪಿ ಯುವ ಘಟಕ, ಲಾಯನ್ಸ್ ಕ್ಲಬ್ ಆಯೋಜಿಸಲಾಗಿದ್ದ ಧ್ವಜ ಯಾತ್ರೆಯಲ್ಲಿ, ನೂರು ಅಡಿ ಉದ್ದದ ಧ್ವಜ ಹಿಡಿದು ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ವಾತಂತ್ರ್ಯ ಹೋರಾಟಗಾರರ ವೇಷದಲ್ಲಿ ಬಂದು ಮಕ್ಕಳು ಗಮನ ಸೆಳೆಯಿತು. ಬೀದಿಯಲ್ಲಿ ಸಾಗುತ್ತಿದ್ದ ತ್ರಿವರ್ಣ ಯಾತ್ರೆಗೆ ಹೂ ಮಳೆಗರೆದು ಜನ ದೇಶಾಭಿಮಾನ ಮೆರೆದರು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications