ಮುಂಬೈ ರೈಲು ಗದಗ ವರೆಗೆ ವಿಸ್ತರಣೆ: ಪ್ರಹ್ಲಾದ್ ಜೋಶಿ
ಗದಗ, ಮೇ 21: ವಿಜಯಪುರ, ಬಾಗಲಕೋಟೆ ಹಾಗೂ ಗದಗ ಭಾಗದ ಜನರ ಬೇಡಿಕೆ ಮೇರೆಗೆ ವಾರದಲ್ಲಿ 5 ದಿನ ಪ್ರಯಾಣಿಸುತ್ತಿದ್ದ ಮುಂಬೈ-ಸೊಲ್ಲಾಪುರ(12319/121140) ರೈ ಸಂಚಾರವನ್ನು ಗದಗದವರೆಗೆ ವಿಸ್ತರಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ ಎಂದು ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ವಿಜಯಪುರ, ಬಾಗಲಕೋಟೆ ಹಾಗೂ ಗದಗ ಭಾಗದ ಜನರ ಬಹುದಿನಗಳ ಬೇಡಿಕೆ ಇದಾಗಿತ್ತು. ಈ ಕುರಿತು ಈ ಭಾಗದ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಅಹ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ರೈಲ್ವೆ ಸಚಿವ ಪಿಯೂಷ್ ಗೋಯಲ್ ಹಾಗೂ ರೈಲ್ವೆ ಮಂಡಳಿ ಅಧ್ಯಕ್ಷ ಅಶ್ವಿನ್ ಲೋಹಾನಿ ಅವರನ್ನು ದೆಹಲಿ ಕಚೇರಿಯಲ್ಲಿ ಭೇಟಿಯಾಗಿ ಮನವಿ ಮಾಡಿದ್ದರಿಂದ ಗದಗದವರೆಗೂ ಈ ರೈಲು ಸಂಚಾರ ಆರಂಭಗೊಂಡಿದೆ.

ಇದರಿಂದ ಗದಗ, ಬಾಗಲಕೋಟೆ ಹಾಗೂ ವಿಜಯಪುರದ ಜನರು ನೇರವಾಗಿ ಮುಂಬೈಗೆ ಪ್ರಯಾಣಿಸಲು ಅನುಕೂಲವಾಗಿದೆ ಎಂದು ಜೋಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications