ದೆಹಲಿ ಹಿಂಸಾಚಾರ; 'ಸ್ವಾತಂತ್ರ್ಯಾನಂತರ ಇಂತಹ ಹೇಯ ಘಟನೆ ನಡೆದಿರಲಿಲ್ಲ'
ಗದಗ, ಫೆಬ್ರವರಿ 27; ದೆಹಲಿ ಹಿಂಸಾಚಾರದ ಹೊಣೆ ಹೊತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಸಾಮಾಜಿಕ ಹೋರಾಟಗಾರ ಎಸ್ ಆರ್ ಹಿರೇಮಠ ಆಗ್ರಹಿಸಿದ್ದಾರೆ.
ಗದಗನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಾನಂತರ ಇಂತಹ ಹೇಯ ಘಟನೆ ನಡೆದಿರಲಿಲ್ಲ ಎಂದು ಆರೋಪಿಸಿದರು. ದೆಹಲಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದ ಕಪಿಲ್ ಮಿಶ್ರಾ, ಅನುರಾಗ್ ಠಾಕೂರ್ ಮತ್ತು ಪರ್ವೇಶ್ ವರ್ಮಾ ಮೇಲೆ ಎಫ್ಐಆರ್ ಹಾಕಬೇಕಿತ್ತು. ಈ ಮೂವರಿಗೆ ಮೂಗುದಾರ ಹಾಕಿ ನಿಯಂತ್ರಿಸುವ ಬದಲು ಗೃಹ ಸಚಿವರು ನಾಚಿಕೆಗೇಡಿತನದ ಹೇಳಿಕೆ ನೀಡುತ್ತಾರೆ. ಬಿಜೆಪಿ ಮುಖಂಡರ ಬಾಯಲ್ಲಿನ ಹೇಳಿಕೆಗಳು ದೆಹಲಿಯನ್ನು ಉರಿಯುವಂತೆ ಮಾಡಿವೆ. ಬೆಂಕಿಯಲ್ಲಿ ಪೆಟ್ರೋಲ್ ಎಸದಂತೆ ಮಾಡಿವೆ. ಇದನ್ನೆಲ್ಲಾ ನಿಯಂತ್ರಣ ಮಾಡಬೇಕಾದ ಅಮಿತ್ ಶಾ ಎಲ್ಲಿದ್ದಾರೆ. ಮಾನ ಮರ್ಯಾದೆ ಇದ್ದರೆ ಇವರು ತಕ್ಷಣ ರಾಜೀನಾಮೆ ನೀಡಲಿ ಎಂದು ಎಸ್.ಆರ್. ಹಿರೇಮಠ ಒತ್ತಾಯಿಸಿದರು.
ದೆಹಲಿ ಗಲಭೆಯಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. 200 ಜನರು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾರೆ. ಪೊಲೀಸರ ಗುಂಡೇಟು ಇವರೆಲ್ಲರ ಸಾವಿಗೆ ಕಾರಣವಾಗಿದೆ. ದೆಹಲಿ ಪೊಲೀಸರು ಗಲಭೆ ನಿಯಂತ್ರಿಸಲು ವಿಫಲರಾಗಿದ್ಧಾರೆ. ಜವಾಬ್ದಾರಿ ಮರೆತಿರುವ ಗೃಹ ಮಂತ್ರಿ ರಾಜೀನಾಮೆ ನೀಡಬೇಕು. ಇವರು ರಾಜೀನಾಮೆ ನೀಡದಿದ್ದರೆ ಪ್ರಧಾನಿಗಳು ಇವರನ್ನು ಕಿತ್ತೆಸೆಯಬೇಕು ಎಂದರು.

ಅಮಿತ್ ಶಾ ಈಗಾಗಲೇ ಜೈಲಿಗೆ ಹೋಗಿ ಬಂದಿದ್ಧಾರೆ. ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರಲು ಅವರು ಯೋಗ್ಯರಲ್ಲ. ಮುಂದಿನ ಭವಿಷ್ಯದ ಬಗ್ಗೆ ಕಾಳಜಿ ಇರುವವರು ಇದರ ಬಗ್ಗೆ ಧ್ವನಿ ಎತ್ತಬೇಕು ಎಂದು ಹಿರೇಮಠ ಹೇಳಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications