ಗದಗ: ಕುಸಿದ ರಸ್ತೆ ಕಂದಕಕ್ಕೆ ಬಿದ್ದ ಬೈಕ್; ಇಬ್ಬರು ಯುವಕರ ದಾರುಣ ಸಾವು
ಗದಗ, ಸೆಪ್ಟೆಂಬರ್ 28: ಗದಗ ತಾಲೂಕಿನ ನಾಗಾವಿ ಗ್ರಾಮದ ಹೊರವಲಯದಲ್ಲಿ ಕುಸಿದಿದ್ದ ರಸ್ತೆ ಕಂದಕಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಮಂಜುನಾಥ್ ಮಾದರ್ (19) ಬಸವರಾಜ್ ಜವಳಬೆಂಚಿ (17) ಮೃತ ಯುವಕರು. ಲಕ್ಕುಂಡಿಯಿಂದ ಎಲೆಸಿರುಂದ ಗ್ರಾಮಕ್ಕೆ ಸಂಬಂಧಿಕರ ಮನೆಗೆ ಹೊರಟಿದ್ದ ಇಬ್ಬರು ಕಂದಕದಲ್ಲಿ ಬಿದ್ದು ದುರ್ಮರಣಕ್ಕೀಡಾಗಿದ್ದಾರೆ.
ಬರ್ತ್ ಡೇ ಆಚರಣೆಗೆ ಹೊರಟಿದ್ದ ಯುವಕರು
ಮಂಜುನಾಥ್ ಮಾದರ್ ಅವರ ಸಂಬಂಧಿಕರ ಮನೆಗೆ ಜನ್ಮದಿನಾಚರಣಗಾಗಿ ಸ್ನೇಹಿತ ಬಸವರಾಜ್ ಜೊತೆ ಕೇಕ್ ತೆಗೆದುಕೊಂಡು ಎಲೆಸಿರುಂದಕ್ಕೆ ಹೊರಟಿದ್ದರು. ನಾಗಾವಿ-ಬೆಳದಡಿ ಮಧ್ಯ ರಸ್ತೆ ಕಂದಕ ಬಿದ್ದಿರುವುದು ಅವರಿಗೆ ಗೊತ್ತಾಗಿರಲಿಲ್ಲ. ಸಂಜೆ ಏಳು ಗಂಟೆ ಸುಮಾರಿಗೆ ಕತ್ತಲೆಲ್ಲೇ ಬೈಕ್ ಸಾಗುವಾಗ ಕಂದಕ ಗಮನಿಸದೇ ಬಿದ್ದಿದ್ದಾರೆ.
ಎಚ್ಚರಿಕೆ ಫಲಕ ಇಲ್ಲ
ರಸ್ತೆ ಕುಸಿದಿದ್ದರೂ ಬ್ಯಾರಿಕೇಡ್, ಸುರಕ್ಷತಾ ಫಲಕ ಅಳವಡಿಸದಿರುವುದೇ ಸಾವಿಗೆ ಕಾರಣ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಂದಕ ಬಿದ್ದು ಸುಮಾರು ತಿಂಗಳು ಕಳಿದಿದೆ. ಹೀಗಿದ್ರೂ ಬ್ಯಾರಿಕೇಡ್ ಹಾಕಿಲ್ಲ ಮತ್ತು ಪೊಲೀಸರ ನಿಯೋಜನೆ ಮಾಡ್ಲಿಲ್ಲ. ಹೀಗಾಗಿ ಅಧಿಕಾರಿಗಳು, ಜನಪ್ರತಿನಿಧಿಗಳೇ ಇಬ್ಬರು ಯುವಕರ ಸಾವಿಗೆ ಕಾರಣಕರ್ತರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.


ಮೃತ ದೇಹ ಮೇಲೆತ್ತದಿರಲು ಗ್ರಾಮಸ್ಥರ ನಿರ್ಧಾರ
ಕಂದಕಕ್ಕೆ ಬಿದ್ದು ಯುವಕರ ಮೃತಪಟ್ಟಿರುವ ಹಿನ್ನಲೆ ಕುಟುಂಬಕ್ಕೆ ನೆರವಾಗುವ ಅಗತ್ಯವಿದೆ. ಹಾಗಾಗಿ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಹಾರ ಕೊಡಬೇಕು. ಹಾಗ ಮಾತ್ರ ಮೃತ ದೇಹ ಮೇಲೆತ್ತಲು ಅವಕಾಶ ಕೊಡುತ್ತೇವೆ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications