ಆನ್ ಲೈನ್ ಶಿಕ್ಷಣದ ಎಫೆಕ್ಟ್: ತಾಳಿ ಅಡವಿಟ್ಟು ಟಿವಿ ಕೊಡಿಸಿದ ಮಹಾತಾಯಿ!
ಗದಗ, ಜುಲೈ 31: ಕೂಲಿ ನಾಲಿ ಮಾಡಿಕೊಂಡು ಪ್ರತಿ ದಿನದ ಬದುಕು ಸಾಗಿಸುವ ಬಡ ಕುಟುಂಬಕ್ಕೆ ತಮ್ಮ ಮಕ್ಕಳಿಗೆ ಕೈಲಾದಷ್ಟು ಓದಿಸುವ ಹಂಬಲ. ಆದರೆ, ಕಿಲ್ಲರ್ ಕೊರೊನಾ ಸೋಂಕು ಹಾವಳಿಯಿಂದ ಶಾಲೆಗಳ ಬಾಗಿಲು ತೆಗೆದಿಲ್ಲ. ಎಲ್ಲಾ ಕಡೆಗಳಲ್ಲಿ ಆನ್ ಲೈನ್ ಶಿಕ್ಷಣ ಆರಂಭವಾಗಿದೆ. ಈ ಬಡ ಕುಟುಂಬಗಳಿಗೆ ತಮ್ಮ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಕೊಡಿಸಲು ಆಗುತ್ತಿಲ್ಲ. ಆದರೆ ಇಲ್ಲೊಬ್ಬ ತಾಯಿ ತನ್ನ ತಾಳಿಯನ್ನು ಅಡವಿಟ್ಟು ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾಳೆ.
ಕೊರೊನಾ ವೈರಸ್ ಹಾವಳಿಯಿಂದ ಶಿಕ್ಷಣವು ಟಿವಿ ಹಾಗೂ ಮೊಬೈಲ್ ಮೇಲೆ ಅವಲಂಬನೆಯಾಗಿದೆ. ಉಳ್ಳವರ ಮಕ್ಕಳು ಮೊಬೈಲ್ ಮೂಲಕ ಅಥವಾ ದೊಡ್ಡ ಟಿವಿ ಮೂಲಕ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಬಡ, ಮಧ್ಯಮ ವರ್ಗದ ಜನರಿಗೆ ಇದೊಂದು ದೊಡ್ಡ ಸಮಸ್ಯೆ ಎದುರಾಗಿದೆ. ಅದರಲ್ಲೂ ಬಡ ಕುಟುಂಬಗಳಿಗೆ ಟಿವಿ ಖರೀದಿ ಮಾಡೋದು ಸವಾಲಿನ ಕೆಲಸವೇ ಸರಿ.

ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಪಾಠ
ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ್ ನಾಗನೂರ ಗ್ರಾಮದ ತಾಯಿ ತನ್ನ ಮಕ್ಕಳ ಶಿಕ್ಷಣಕ್ಕಾಗಿ ತನ್ನ ತಾಳಿಯನ್ನು ಅಡವಿಟ್ಟು ಟಿವಿ ಕೊಡಿಸಿದ್ದಾಳೆ. ಕಸ್ತೂರಿ ಎನ್ನುವ ಮಹಿಳೆಯ ಇಬ್ಬರು ಮಕ್ಕಳು ಹೈಸ್ಕೂಲ್ ಮತ್ತು ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾರೆ. ಓರ್ವ ವಿದ್ಯಾರ್ಥಿನಿ 8 ನೇ ತರಗತಿಯಲ್ಲಿ ಇನ್ನೋರ್ವ 7 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಆದರೆ ಈಗ ಮಕ್ಕಳಿಗೆ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಪಾಠವನ್ನು ಕೇಳಲು ಶಿಕ್ಷಕರು ಪ್ರತಿದಿನ ಫೋನ್ ಮೂಲಕ ಕರೆ ಮಾಡಿ ಟಿವಿ ನೋಡಿ ಅಂತ ಹೇಳುತ್ತಿದ್ದರು. ಜೊತೆಗೆ ಅದರಲ್ಲಿ ಬರುವ ಪಾಠಗಳ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದರು.

ಮಕ್ಕಳು ಟಿವಿ ನೋಡಲು ಕಷ್ಟ ಪಡುತ್ತಿದ್ದರು
ಮನೆಯಲ್ಲಿ ಟಿವಿ ಇಲ್ಲದ ಕಾರಣ ನೋಡುವುದಕ್ಕೆ ಆಗುತ್ತಿರಲಿಲ್ಲ. ಜೊತೆಗೆ ಶಿಕ್ಷಕರು ಕೇಳಿದ ಪ್ರಶ್ನೆಗೆ ಉತ್ತರಿಸಲು ಮಕ್ಕಳಿಗೆ ಆಗ್ತಿರಲಿಲ್ಲ. ಇವರ ಮನೆಯಲ್ಲಿ ಈ ಮೊದಲು ಇದ್ದ ಟಿವಿ ಸುಟ್ಟು ಹೋಗಿತ್ತು. ಹೀಗಾಗಿ ಮಕ್ಕಳು ಟಿವಿ ನೋಡಲು ಕಷ್ಟ ಪಡುತ್ತಿದ್ದರು. ಬೇರೆಯವರ ಮನೆಗೆ ಹೋದರೆ ಅವರು ಸಿನಿಮಾ ಇನ್ನಿತರ ಕಾರ್ಯಕ್ರಮಗಳನ್ನು ನೋಡುತ್ತಾರೆ. ಹೀಗಾಗಿ ನಮ್ಮ ತಾಯಿ ತನ್ನ ತಾಳಿಯನ್ನು ಅಡವಿಟ್ಟು ಟಿವಿ ಖರೀದಿ ಮಾಡಿದ್ದಾಳೆ. ಈಗ ನಿತ್ಯ ಚಂದನ ವಾಹಿನಿಯಲ್ಲಿ ಪ್ರಸಾರವಾಗುವ ಪಾಠವನ್ನು ಕೇಳುತ್ತಿದ್ದೇವೆ ಅಂತಾರೆ ವಿದ್ಯಾರ್ಥಿನಿ ಸುರೇಖಾ.

ಮದುವೆಗಾಗಿ 1 ಲಕ್ಷ ರೂ. ಸಹ ಸಾಲ ಮಾಡಿಕೊಂಡಿದ್ದಾರೆ
ಗ್ರಾಮದಲ್ಲಿ ಅಕ್ಕಪಕ್ಕದ ಮನೆಯವರನ್ನು ಸಾಲ ಕೇಳಿದರೆ ಕೊರೊನಾ ಹಾವಳಿ ನಡುವೆ ಸಾಲವನ್ನು ಹೀಗೆ ಹಿಂದಿರುಗಿಸುತ್ತೀರಿ ಎಂದು ಸಾಲ ಕೊಡಲು ಯಾರೂ ಮುಂದೆ ಬಂದಿಲ್ಲ. ಇವರಿಗೆ ನಾಲ್ಕು ಜನ ಮಕ್ಕಳಿದ್ದು, ಓರ್ವ ಹೆಣ್ಣು ಮಗಳನ್ನು ಈಗಾಗಲೇ ಮದುವೆ ಮಾಡಿ ಕೊಟ್ಟಿದ್ದಾರೆ. ಅವಳ ಮದುವೆಗಾಗಿ 1 ಲಕ್ಷ ರೂ. ಸಹ ಸಾಲ ಮಾಡಿಕೊಂಡಿದ್ದಾರೆ. ಹೀಗಾಗಿ ಗದಗ ನಗರಕ್ಕೆ ಬಂದು ತನ್ನ ತಾಳಿಯನ್ನು 20 ಸಾವಿರ ರೂಪಾಯಿ ಅಡವಿಟ್ಟು 14 ಸಾವಿರ ರುಪಾಯಿಯ 32 ಇಂಚಿನ ಟಿ ವಿ ಖರೀದಿ ಮಾಡಿದ್ದಾರೆ.

ಆನ್ ಲೈನ್ ಶಿಕ್ಷಣ ಕೊಡಿಸುವುದು ಬಡ ಕುಟುಂಬಕ್ಕೆ ಸವಾಲು
ಕಸ್ತೂರಿ ಪತಿ ಕೂಡಾ ಕೂಲಿ ಕೆಲಸ ಮಾಡ್ತಾರೆ. ಇಬ್ಬರು ಕೂಲಿ ಮಾಡಿಯೇ ಕುಟುಂಬ ಸಾಗಿಸುತ್ತಾರೆ. ಆದರೆ ಮೊದಲೇ ಕೂಲಿ ಕೆಲಸ ಇಲ್ಲದೆ ಕಂಗಾಲಾಗಿದ್ದ ದಂಪತಿಗೆ ಇದೊಂದು ದೊಡ್ಡ ಸಮಸ್ಯೆಯಾಗಿ ಕಾಡಿತ್ತು. ನಮ್ಮ ಮಕ್ಕಳು ಚೆನ್ನಾಗಿ ಕಲಿತರೆ ಸಾಕು, ಹಂತ ಹಂತವಾಗಿ ಹಣ ಕಟ್ಟಿ ತಾಳಿ ಬಿಡಿಸಿಕೊಳ್ಳಬಹುದು ಅಂತ ವಿಚಾರ ಮಾಡಿದ್ದಾರೆ.
ಈ ಕಿಲ್ಲರ್ ಕೊರೊನಾ ಹಾವಳಿಯಿಂದ ಇಡೀ ಮಾನವ ಕುಲವೇ ಸಂಕಷ್ಟ ಎದುರಿಸುತ್ತಿದೆ. ಅದರಲ್ಲೂ ಬಡ ಕುಟುಂಬಗಳು ಜೀವನ ನಡೆಸುವುದೇ ದುಸ್ತರವಾಗಿದೆ. ಇಂತಹ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣ ಕೊಡಿಸುವುದು ಬಡ ಕುಟುಂಬಕ್ಕೆ ಸವಾಲಾಗಿ ಪರಿಣಮಿಸಿದೆ. ಆದರೆ ಮಕ್ಕಳ ಶಿಕ್ಷಣಕ್ಕಾಗಿ ತನ್ನ ತಾಳಿಯನ್ನೇ ತ್ಯಾಗ ಮಾಡಿದ್ದಾಳೆ. ತಾಯಿಯ ಋಣವನ್ನು ತೀರಿಸಲು ಈ ಜನ್ಮದಲ್ಲಿ ಸಾಧ್ಯವಿಲ್ಲ ಎನ್ನುವುದು ಸುಳ್ಳಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications