ವೃದ್ಧಾಪ್ಯ ವೇತನಕ್ಕಾಗಿ 2 ಕಿ. ಮೀ. ನಡೆದುಕೊಂಡು ಬಂದ ಅಜ್ಜಿ
ಗದಗ, ಮೇ 31; ಕೋವಿಡ್ ಹರಡುವಿಕೆ ತಡೆಯಲು ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಇದರಿಂದಾಗಿ ಹಲವು ಜನರಿಗೆ ಹಣಕಾಸಿನ ಸಂಕಷ್ಟ ಎದುರಾಗಿದೆ. ಇದರ ಮಧ್ಯೆಯೇ ಜನರು ಬದುಕು ನಡೆಸುತ್ತಿದ್ದಾರೆ. ಅಜ್ಜಿಯೊಬ್ಬರು ವೃದ್ಧಾಪ್ಯ ವೇತನಕ್ಕಾಗಿ 2 ಕಿ. ಮೀ. ನಡೆದುಕೊಂಡು ಬಂದ ಘಟನೆ ನಡೆದಿದೆ.
Recommended Video
ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಯಲ್ಲವ್ವ ಭಜಂತ್ರಿ ಎಂಬ ಅಜ್ಜಿ ವೃದ್ಧಾಪ್ಯ ವೇತನ ಪಡೆಯಲು ಅಂಚೆ ಕಚೇರಿಗೆ ಆಗಮಿಸಿದ್ದರು. ಲಾಕ್ಡೌನ್ ಪರಿಣಾಮ ಯಾವುದೇ ವಾಹನಗಳ ವ್ಯವಸ್ಥೆ ಇಲ್ಲದ ಕಾರಣ ನಡೆದುಕೊಂಡೇ ಬಂದಿದ್ದಾರೆ. ಆದರೆ ಹಣ ಸಿಗದೆ ಬರಿಗೈಯಲ್ಲಿ ವಾಪಸ್ ಆಗಿದ್ದಾರೆ.
ಗದಗ ನಗರದ ಹಳೇ ಡಿಸಿ ಆಫೀಸ್ ಸರ್ಕಲ್ ಬಳಿ ನಡೆದುಕೊಂಡು ಬಂದ ಯಲ್ಲವ್ವ ಭಜಂತ್ರಿಯನ್ನು ಪೊಲೀಸರು ವಿಚಾರಿಸಿದ್ದಾರೆ. ಆಗ ಅಜ್ಜಿ ವೃದ್ಧಾಪ್ಯ ವೇತನ ಪಡೆಯಲು ಬಂದಿದ್ದು ತಿಳಿದುಬಂದಿದೆ.

ಅಜ್ಜಿಯ ಜೊತೆ ಮಾತುಕತೆ ನಡೆಸಿದ ಪೊಲೀಸರು ಅಂಚೆ ಕಚೇರಿ ಬಂದ್ ಆಗಿದೆ. ಈಗ ಅವು ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವಾಪಸ್ ಕಳಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ಸದ್ಯ 5 ದಿನಗಳ ಕಠಿಣ ಲಾಕ್ಡೌನ್ ಜಾರಿಯಲ್ಲಿದೆ. ಹೀಗಾಗಿ ವಾಹನ ಸಂಚಾರ ಸಂಪೂರ್ಣವಾಗಿ ಬಂದ್ ಆಗಿದೆ.
ಕೈಯಲ್ಲಿ ಹಣ ಇಲ್ಲದ ಕಾರಣ ಭಜಂತ್ರಿ ನಗರದಿಂದ ಅಜ್ಜಿ ಯಲ್ಲವ್ವ ಭಜಂತ್ರಿ ನಡೆದುಕೊಂಡು ಅಂಚೆ ಕಚೇರಿಗೆ ಬಂದಿದ್ದರು. ಕಿವಿಯೂ ಸರಿಯಾಗಿ ಕೇಳದ ಅಜ್ಜಿ ಅಂಚೆ ಕಚೇರಿ ಮುಚ್ಚಿದೆ ಎಂದು ತಿಳಿದು ಕಣ್ಣೀರಿಟ್ಟರು, ಪೊಲೀಸರು ಆಕೆಯನ್ನು ವಾಪಸ್ ಕಳಿಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications