ದೆಹಲಿಯಲ್ಲಿ ಮತ್ತೊಬ್ಬ ಯುವತಿಯ ಮೇಲೆ ಅತ್ಯಾಚಾರ!
ಗುರ್ ಗಾವ್, ಮೇ 15: ಹರ್ಯಾಣದಲ್ಲಿ ಯುವತಿಯೊಬ್ಬಳ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ಆಕೆಯನ್ನು ದುಷ್ಕರ್ಮಿಗಳು ಕ್ರೂರವಾಗಿ ಕೊಂದ ಘಟನೆಯಿಂದ ತಲ್ಲಣಗೊಂಡಿರುವ ದೇಶದ ಪ್ರಜ್ಞಾವಂತ ಜನತೆಯು ಆ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಅಂಥದ್ದೇ ಪ್ರಕರಣ ಗುರ್ ಗಾಂವ್ ನಿಂದ ವರದಿಯಾಗಿದೆ.
ಇಲ್ಲಿ, 22 ವರ್ಷದ ಯುವತಿಯೊಬ್ಬಳನ್ನು ಆಕೆಯ ಮನೆಯ ಬಳಿಯಿಂದಲೇ ಕಾರೊಂದರಲ್ಲಿ ಅಪಹರಿಸಿ, ಚಲಿಸುತ್ತಿದ್ದ ಆ ಕಾರಿನಲ್ಲೇ ಆಕೆಯ ಮೇಲೆ ಸರದಿ ಪ್ರಕಾರ ಅತ್ಯಾಚಾರ ಎಸಗಿದ್ದಲ್ಲದೆ ಆಕೆಯನ್ನು ದೆಹಲಿಯ ನಡು ರಸ್ತೆ ಮೇಲೆ ಬಿಸಾಕಿ ಪರಾರಿಯಾಗಿದ್ದಾರೆ. ಈ ಘಟನೆ, ಇಡೀ ಜಗತ್ತು ವಿಶ್ವ ಅಮ್ಮಂದಿರ ದಿನಾಚರಣೆಯಲ್ಲಿ ಮುಳುಗಿದ್ದಾಗಲೇ (ಮೇ 14) ನಡೆದಿದೆ.[ಮದುವೆ ನಿರಾಕರಿಸಿದ್ದಕ್ಕೆ ಯುವತಿಯ ಅತ್ಯಾಚಾರ ಬರ್ಬರ ಕೊಲೆ]

ದೆಹಲಿಯ ಕನ್ನಾಟ್ ಪ್ಲೇಸ್ ನಿಂದ ಹೊರಟಿದ್ದ ಈ ಯುವತಿ, ಗುರ್ ಗಾಂವ್ ನ ಸೆಕ್ಟರ್ 17ರಲ್ಲಿರುವ ತನ್ನ ನಿವಾಸಕ್ಕೆ ತೆರಳುವಾಗ ಸರಿಸುಮಾರು ಮಧ್ಯರಾತ್ರಿ 2 ಗಂಟೆಯಾಗಿದೆ. ತನ್ನ ಮನೆಯಿರುವ ಪ್ರದೇಶ ತಲುಪಿದ ಆಕೆ ನಡೆದುಕೊಂಡು ತನ್ನ ಮನೆಯ ಬಳಿಗೆ ಬರುತ್ತಿದ್ದಂತೆ ಆಕೆಯನ್ನು ದೂರದಲ್ಲೇ ಗಮನಿಸಿದ 3 ಯುವಕರುಳ್ಳ ದುಷ್ಟರ ಗುಂಪೊಂದು ಆಕೆಯನ್ನು ಸ್ವಿಫ್ಟ್ ಕಾರಿನಲ್ಲಿ ಅಪಹರಣ ಮಾಡಿದೆ.
ಅಪಹರಣ ಆದ ಜಾಗದಿಂದ ದೆಹಲಿ ಕಡೆಗೆ ಸುಮಾರು 20 ಕಿ.ಮೀ. ದೂರದಲ್ಲಿರುವ ನಜಾಫ್ ಗಢದ ಕಡೆಗೆ ಕಾರು ಓಡಿದ್ದು, ಹಾಗೆ ಚಲಿಸುತ್ತಿರುವ ಕಾರಿನಲ್ಲೇ ಆ ಕಾಮುಕರು ಒಬ್ಬರ ನಂತರ ಒಬ್ಬರಂತೆ ಆ ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಅವರ ಕಾಮ ದಾಹ ತೀರುವಷ್ಟರಲ್ಲಿ ಕಾರು ದೆಹಲಿ ಗಡಿ ಪ್ರವೇಶಿಸಿದೆ.[ಆ ದುಷ್ಟರನ್ನು ಜೀವಂತವಾಗಿ ಸುಡಬೇಕು: ನಿರ್ಭಯಾಳ ಕೊನೆ ಹೇಳಿಕೆ]
ಅಷ್ಟರಲ್ಲಿ ತಮ್ಮ ಕೆಲಸ ಮುಗಿದಿದ್ದರಿಂದ, ಆ ದುಷ್ಕರ್ಮಿಗಳು ನಡು ರಸ್ತೆಯಲ್ಲಿ ಕಾರು ನಿಲ್ಲಿಸಿ ಅರೆಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ಕಾರಿನಿಂದ ಹೊರನೂಕಿ ತಮ್ಮ ಪಾಡಿಗೆ ತಾವು ಹೊರಟು ಹೋಗಿದ್ದಾರೆ.
ಆ ಅರೆ ಪ್ರಜ್ಞಾವಸ್ಥೆಯಲ್ಲೇ ಕೊಂಚ ಎದ್ದು ಕುಳಿತು ಆಕೆ ಹೋಗಿ ಬರುವ ವಾಹನಗಳಿಗೆ ಕೈ ತೋರಿಸಿ ಸಹಾಯ ಕೋರಿದ್ದು, ಹಿಂದೆ ಬರುತ್ತಿದ್ದ ವಾಹನಗಳ ಹತ್ತಾರು ಜನರು ಆಕೆಯನ್ನು ತಂದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications