400 ಕೋಟಿ ಮೌಲ್ಯದ ಬ್ಯಾಂಕ್ ಹಗರಣದ ಮಾಸ್ಟರ್ ಮೈಂಡ್ ಬಂಧನ
ನವದೆಹಲಿ, ನ.16: ಸುಮಾರು 400 ಕೋಟಿ ರು ಮೌಲ್ಯದ ಸಿಟಿಬ್ಯಾಂಕ್ ಹಗರಣದ ಮಾಸ್ಟರ್ ಮೈಂಡ್ ಮತ್ತೆ ಬಂಧನವಾಗಿದೆ.
ಬ್ಯಾಂಕ್ ಹಗರಣದ ಮುಖ್ಯ ರುವಾರಿ ಎನಿಸಿಕೊಂಡಿರುವ ಶಿವರಾಜ್ ಪುರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಯನ್ನು ಮುಂದುವರೆಸಿದ್ದ ಪುರಿ ನಾಪತ್ತೆಯಾಗಿದ್ದ, ಆತನ ಬಗ್ಗೆ ಕೆಲ ತಿಂಗಳುಗಳಿಂದ ಮಾಹಿತಿ ಕಲೆ ಹಾಕಿ, ಚಲನವಲನವನ್ನು ಗಮನಿಸಿ ನವೆಂಬರ್ 13ರಂದು ಡೆಹ್ರಾಡೂನ್ ನಲ್ಲಿ ಪತ್ತೆ ಹಚ್ಚಲಾಯಿತು.
ಪುರಿಯನ್ನು ಬಂಧಿಸಿ, ಕೋರ್ಟಿಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ವಿಶೇಷ ತನಿಖಾ ತಂಡದ ನೇತೃತ್ವ ವಹಿಸಿಕೊಂಡಿರುವ ಎಸಿಪಿ (ಕ್ರೈಂ) ಪ್ರೀತ್ ಪಾಲ್ ಸಾಂಗ್ವಾನ್ ಹೇಳಿದ್ದಾರೆ.

ಹಲವು ವಂಚನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಪುರಿ ಮತ್ತೆ ತನ್ನ ಕಸುಬು ಆರಂಭಿಸಿದ್ದ, ಈಗ ಮತ್ತೊಮ್ಮೆ ಮೂರು ಹೊಸ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
2010ರಲ್ಲಿ ಸಿಟಿಬ್ಯಾಂಕ್ ಉದ್ಯೋಗಿಯಾಗಿದ್ದ ಪುರಿ, ಗುರುಗ್ರಾಮದಲ್ಲಿದ್ದಾಗ ಬ್ಯಾಂಕ್ ದಾಖಲೆಗಳನ್ನು ಫೋರ್ಜರಿ ಮಾಡಿ ಸುಮಾರು 400 ಕೋಟಿ ರು ಗಳನ್ನು ಅಕ್ರಮವಾಗಿ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಬ್ಯಾಂಕ್ ನೀಡಿದ್ದ ದೂರಿನ ಮೇರೆಗೆ ಬಂಧಿಸಲಾಗಿತ್ತು. ಎರಡೂವರೆ ವರ್ಷ ಬಳಿಕ ಜಾಮೀನು ಪಡೆದು ಹೊರ ಬಂದಿದ್ದ. ಆದರೆ, 2018ರಲ್ಲಿ ಕೋರ್ಟಿಗೆ ಹಾಜರಾಗಬೇಕಿತ್ತು. ಆದರೆ, ನಾಪತ್ತೆಯಾಗಿದ್ದವನು ಬಡ್ಡಿ ವ್ಯವಹಾರ ನಡೆಸಿ, ಅನೇಕರಿಗೆ ಮೋಸ ಮಾಡುತ್ತಿದ್ದ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications