400 ಕೋಟಿ ಮೌಲ್ಯದ ಬ್ಯಾಂಕ್ ಹಗರಣದ ಮಾಸ್ಟರ್ ಮೈಂಡ್ ಬಂಧನ
ನವದೆಹಲಿ, ನ.16: ಸುಮಾರು 400 ಕೋಟಿ ರು ಮೌಲ್ಯದ ಸಿಟಿಬ್ಯಾಂಕ್ ಹಗರಣದ ಮಾಸ್ಟರ್ ಮೈಂಡ್ ಮತ್ತೆ ಬಂಧನವಾಗಿದೆ.
ಬ್ಯಾಂಕ್ ಹಗರಣದ ಮುಖ್ಯ ರುವಾರಿ ಎನಿಸಿಕೊಂಡಿರುವ ಶಿವರಾಜ್ ಪುರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಯನ್ನು ಮುಂದುವರೆಸಿದ್ದ ಪುರಿ ನಾಪತ್ತೆಯಾಗಿದ್ದ, ಆತನ ಬಗ್ಗೆ ಕೆಲ ತಿಂಗಳುಗಳಿಂದ ಮಾಹಿತಿ ಕಲೆ ಹಾಕಿ, ಚಲನವಲನವನ್ನು ಗಮನಿಸಿ ನವೆಂಬರ್ 13ರಂದು ಡೆಹ್ರಾಡೂನ್ ನಲ್ಲಿ ಪತ್ತೆ ಹಚ್ಚಲಾಯಿತು.
ಪುರಿಯನ್ನು ಬಂಧಿಸಿ, ಕೋರ್ಟಿಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ವಿಶೇಷ ತನಿಖಾ ತಂಡದ ನೇತೃತ್ವ ವಹಿಸಿಕೊಂಡಿರುವ ಎಸಿಪಿ (ಕ್ರೈಂ) ಪ್ರೀತ್ ಪಾಲ್ ಸಾಂಗ್ವಾನ್ ಹೇಳಿದ್ದಾರೆ.

ಹಲವು ವಂಚನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಪುರಿ ಮತ್ತೆ ತನ್ನ ಕಸುಬು ಆರಂಭಿಸಿದ್ದ, ಈಗ ಮತ್ತೊಮ್ಮೆ ಮೂರು ಹೊಸ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
2010ರಲ್ಲಿ ಸಿಟಿಬ್ಯಾಂಕ್ ಉದ್ಯೋಗಿಯಾಗಿದ್ದ ಪುರಿ, ಗುರುಗ್ರಾಮದಲ್ಲಿದ್ದಾಗ ಬ್ಯಾಂಕ್ ದಾಖಲೆಗಳನ್ನು ಫೋರ್ಜರಿ ಮಾಡಿ ಸುಮಾರು 400 ಕೋಟಿ ರು ಗಳನ್ನು ಅಕ್ರಮವಾಗಿ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಬ್ಯಾಂಕ್ ನೀಡಿದ್ದ ದೂರಿನ ಮೇರೆಗೆ ಬಂಧಿಸಲಾಗಿತ್ತು. ಎರಡೂವರೆ ವರ್ಷ ಬಳಿಕ ಜಾಮೀನು ಪಡೆದು ಹೊರ ಬಂದಿದ್ದ. ಆದರೆ, 2018ರಲ್ಲಿ ಕೋರ್ಟಿಗೆ ಹಾಜರಾಗಬೇಕಿತ್ತು. ಆದರೆ, ನಾಪತ್ತೆಯಾಗಿದ್ದವನು ಬಡ್ಡಿ ವ್ಯವಹಾರ ನಡೆಸಿ, ಅನೇಕರಿಗೆ ಮೋಸ ಮಾಡುತ್ತಿದ್ದ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications