ಕುಟುಂಬವೊಂದರ ಮೇಲೆ ಹಲ್ಲೆ: ಪಾಕಿಸ್ತಾನಕ್ಕೆ ಹೋಗಿ ಎಂದು ಬೆದರಿಸಿದ ಗುಂಪು
ಗುರ್ ಗಾಂವ್, ಮಾರ್ಚ್ 23: ಮನೆಯೊಂದಕ್ಕೆ ನುಗ್ಗಿದ ಗುಂಪೊಂದು ಕುಟುಂಬದ ಸದಸ್ಯರ ಮೇಲೆ ಹಾಕಿ ಸ್ಟಿಕ್ ಮತ್ತು ಕಬ್ಬಿಣದ ಸಲಾಕೆಗಳಿಂದ ಥಳಿಸಿ ಪಾಕಿಸ್ತಾನಕ್ಕೆ ಹೋಗುವಂತೆ ಬೆದರಿಕೆ ಒಡ್ಡಿದ ಘಟನೆ ಹರಿಯಾಣದ ಗುರ್ ಗಾಂವ್ನಲ್ಲಿ ನಡೆದಿದೆ.
ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಗುರುವಾರ ಹೋಳಿ ಸಂದರ್ಭದಲ್ಲಿ ಕ್ರಿಕೆಟ್ ಪಂದ್ಯ ಆಡುವಾಗ ಈ ದಾಳಿ ಘಟನೆ ನಡೆದಿದೆ. ಪ್ರಕರಣ ಸಂಬಂಧ ಒಬ್ಬನನ್ನು ಬಂಧಿಸಲಾಗಿದೆ.
ಗುಂಪೊಂದು ಕುಟುಂಬದ ಪುರುಷ ಸದಸ್ಯರ ಮೇಲೆ ಮನಬಂದಂತೆ ಕೋಲಿನಿಂದ ಹಲ್ಲೆ ನಡೆಸುವ ಮತ್ತು ಮಹಿಳೆಯರು ಜೋರಾಗಿ ಅಳುತ್ತಾ ಅವರನ್ನು ಬೇಡಿಕೊಳ್ಳುತ್ತಿರುವ ದೃಶ್ಯವಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಹಿಳೆಯರು ಮತ್ತು ಮಕ್ಕಳ ಮೇಲೆಯೂ ದಾಳಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. 14-15 ಮಂದಿಯ ಕೂಡು ಕುಟುಂಬದಲ್ಲಿ ಐವರು ಮಕ್ಕಳು ಕೂಡ ಗಾಯಗೊಂಡಿದ್ದಾರೆ. ಎರಡು ವರ್ಷದ ಮಗುವಿಗೆ ಸಹ ಏಟುಗಳು ಬಿದ್ದಿವೆ.
ಕರ್ನಾಟಕದ ಯಾವ ಸಂಸದ ಎಷ್ಟು ವಿದ್ಯಾಭ್ಯಾಸ ಮಾಡಿದ್ದಾರೆ?
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕುಟುಂಬದ ಕೆಲವು ಸದಸ್ಯರು ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಮನೆಯ ಮುಂದೆ ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಅಲ್ಲಿಗೆ ಪಾನಮತ್ತರಾಗಿ ಬಂದ ಆರೇಳು ಜನರು ಬೀದಿಯಲ್ಲಿ ಕ್ರಿಕೆಟ್ ಆಡದಂತೆ ಸೂಚಿಸಿದರು. ಅದಕ್ಕೆ ಕಿವಿಗೊಡದ ಮಂದಿ ಕ್ರಿಕೆಟ್ ಆಡುವುದನ್ನು ಮುಂದುವರಿಸಿದರು. ಸ್ವಲ್ಪ ಹೊತ್ತಿನಲ್ಲಿಯೇ ಕೋಲು, ಹಾಕಿ ಸ್ಟಿಕ್, ಕಬ್ಬಿಣದ ಸಲಾಕೆ ಮತ್ತು ನೀರಿನ ಪೈಪ್ಗಳನ್ನು ಹಿಡಿದುಕೊಂಡು ಬಂದ ಇನ್ನಷ್ಟು ಮಂದಿ ಹಲ್ಲೆ ನಡೆಸಿದರು ಎನ್ನಲಾಗಿದೆ.
'ಹೋಳಿ ದಿನದಂದು ಮಕ್ಕಳು ಕ್ರಿಕೆಟ್ ಆಡುತ್ತಿದ್ದರು. ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಏನು ಮಾಡುತ್ತಿದ್ದೀರಿ ಎಂದು ಕೇಳಿದರು. ಕ್ರಿಕೆಟ್ ಆಡುತ್ತಿದ್ದೇವೆ ಎಂದೆವು. ಅದರಲ್ಲಿ ಒಬ್ಬ 'ಪಾಕಿಸ್ತಾನಕ್ಕೆ ಹೋಗಿ ಆಡು' ಎಂದು ನಿಂದಿಸಿ ಕಪಾಳಕ್ಕೆ ಬಾರಿಸಿದ' ಎಂದು ಗಾಯಗೊಂಡಿರುವ ವ್ಯಕ್ತಿಯೊಬ್ಬರು ತಿಳಿಸಿದರು.
ಕೂಡಲೇ ಮಕ್ಕಳೆಲ್ಲರೂ ಮನೆಯೊಳಕ್ಕೆ ಓಡಿದರು. ಆದರೆ, ಒಂದಷ್ಟು ಮಂದಿ ಗುಂಪುಕಟ್ಟಿಕೊಂಡು ಬಂದು ಒಳಗೆ ನುಗ್ಗಿ ಥಳಿಸಿದರು. ಕಿಟಕಿ ಬಾಗಿಲುಗಳನ್ನು ಒಡೆದುಹಾಕಿದರು ಎಂದು ತಿಳಿಸಿದ್ದಾರೆ.
ಕರ್ನಾಟಕ ಸಂಸದರಿಗೆ ಅನುದಾನ ಸಿಕ್ಕಿದ್ದೆಷ್ಟು, ಅವರು ಕ್ಷೇತ್ರದಲ್ಲಿ ಖರ್ಚು ಮಾಡಿದ್ದೆಷ್ಟು, ಉಳಿಸಿಕೊಂಡಿದ್ದೆಷ್ಟು?
ಪೊಲೀಸ್ ಸಹಾಯವಾಣಿಗೆ ನಿರಂತರವಾಗಿ ಕರೆ ಮಾಡಿದರೂ ಯಾರೂ ಬರಲಿಲ್ಲ. ದಾಳಿ ನಡೆಸಿದವರು ಹೊರಟುಹೋದ ಬಳಿಕ 40 ನಿಮಿಷಗಳ ನಂತರ ಪೊಲೀಸರು ಬಂದರು ಎಂದು ಆರೋಪಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications