ಗುರ್ಗಾಂವ್ ಮಳೆ ಅಟ್ಟಹಾಸ: Work From Home ಮಾಡಲು ಹೊರಬಿದ್ದ ಸಂದೇಶ!
ಗುರ್ಗಾಂವ್, ಸೆಪ್ಟೆಂಬರ್ 23: ಗುರ್ಗಾಂವ್ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಖಾಸಗಿ ಕಂಪನಿ ಉದ್ಯೋಗಿಗಳು ಸಾಧ್ಯವಾದಷ್ಟು ಮನೆಗೆಳಿಂದ ಕೆಲಸ ಮಾಡುವಂತೆ(ವರ್ಕ್ ಫ್ರಾಮ್ ಹೋಮ್) ಆಡಳಿತಾಧಿಕಾರಿಗಳು ಸಲಹೆ ನೀಡಿದ್ದಾರೆ.
ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಂಚಾರ ದಟ್ಟಣೆ ಸೃಷ್ಟಿಯಾಗಿದೆ. ಗುರುವಾರ ಸುರಿದ ಮಳೆಯಿಂದಾಗಿ ನಗರದ ಹಲವೆಡೆ ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಶುಕ್ರವಾರ ಮತ್ತೆ ಉದ್ಯೋಗಿಗಳು ರಸ್ತೆಗೆ ಇಳಿಯುವುದರಿಂದ ಮತ್ತಷ್ಟು ಸಮಸ್ಯೆ ಹಾಗೂ ಸಂಚಾರ ದಟ್ಟಣೆ ಸೃಷ್ಟಿ ಆಗುವ ಮುನ್ಸೂಚನೆ ಇದೆ.
ಶುಕ್ರವಾರ ಖಾಸಗಿ ಕಂಪನಿ ಹಾಗೂ ಕಾರ್ಪೋರೇಟ್ ಕಂಪನಿಯ ಉದ್ಯೋಗಿಗಳು ಕಂಪನಿಗೆ ತೆರಳುವುದಕ್ಕಿಂತ ಮನೆಯಿಂದಲೇ ಕೆಲಸ ಮಾಡುವುದು ಉತ್ತಮ ಎಂದು ಗುರ್ಗಾಂವ್ ಆಡಳಿತ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಇದರ ಮಧ್ಯೆ ಶುಕ್ರವಾರ ಸಹ ಗುರ್ಗಾಂವ್ ನಗರದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ್ದು, 'ಹಳದಿ ಅಲರ್ಟ್' ಅನ್ನು ಘೋಷಿಸಲಾಗಿದೆ.

ಗುರುಗ್ರಾಮ್ ದುರಂತ ನಿರ್ವಹಣಾ ಪ್ರಾಧಿಕಾರದ ಸಲಹೆ:
"ಭಾರೀ ಮಳೆಯ ಮುನ್ಸೂಚನೆಯ ದೃಷ್ಟಿಯಿಂದ, ಜಲಾವೃತ ಮತ್ತು ಸಂಚಾರ ದಟ್ಟಣೆಯ ಸಾಧ್ಯತೆಗಳಿವೆ. ಆದ್ದರಿಂದ, ಜಿಲ್ಲೆಯ ಎಲ್ಲಾ ಕಾರ್ಪೊರೇಟ್ ಕಚೇರಿಗಳು ಮತ್ತು ಖಾಸಗಿ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಮಾರ್ಗದರ್ಶನ ನೀಡುವಂತೆ ಸೂಚಿಸಲಾಗಿದೆ, ಇದರಿಂದ ಸಂಚಾರ ದಟ್ಟಣೆಯನ್ನು ತಪ್ಪಿಸಬಹುದು" ಎಂದು ಗುರುಗ್ರಾಮ್ ದುರಂತ ನಿರ್ವಹಣಾ ಪ್ರಾಧಿಕಾರ ತನ್ನ ಸಲಹೆಯಲ್ಲಿ ತಿಳಿಸಿದೆ.
ಶಾಲಾ-ಕಾಲೇಜುಗಳಿಗೆ ರಜೆ:
ಗುರ್ಗಾಂವ್ ಮಳೆಯಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆೆದುಕೊಳ್ಳಲಾಗಿದೆ. ನಗರದಲ್ಲಿ ಶಾಲಾ-ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸುವಂತೆ ಸೂಚನೆ ನೀಡಲಾಗಿದೆ.
ಇದರ ಮಧ್ಯೆ ರಾಷ್ಟ್ರೀಯ ರಾಜಧಾನಿ ಪ್ರದೇಶದಿಂದ ಮಾನ್ಸೂನ್ ಹಿಂತೆಗೆದುಕೊಳ್ಳುವ ಮೊದಲು ಮಳೆಯು ವಾತಾವರಣವನ್ನು ಶುದ್ಧಗೊಳಿಸುತ್ತದೆ. ಇದು ಗಾಳಿಯನ್ನು ಶುದ್ಧವಾಗಿಡುತ್ತದೆ ಮತ್ತು ತಾಪಮಾನವನ್ನು ನಿಯಂತ್ರಿಸುತ್ತದೆ. ನಗರದಲ್ಲಿ ಇಂದು ಕನಿಷ್ಠ ತಾಪಮಾನ 23.8 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ ಏಳು ಹಂತಗಳಿಗಿಂತ ಕಡಿಮೆಯಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications