ಪ್ರದ್ಯುಮ್ನ ಹತ್ಯೆ : ಹನ್ನೊಂದನೇ ತರಗತಿ ವಿದ್ಯಾರ್ಥಿ ವಶಕ್ಕೆ
ಗುರ್ಗಾಂವ್, ನವೆಂಬರ್ 08 : ಪ್ರಮುಖ ಬೆಳವಣಿಗೆಯೊಂದರಲ್ಲಿ ಗುರ್ಗಾಂವ್ ನ ರಯನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ನಡೆದಿದ್ದ 7 ವರ್ಷದ ಬಾಲಕನ ಹತ್ಯೆಗೆ ಸಂಬಂಧಿಸಿದಂತೆ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಯನ್ನು ಸಿಬಿಐ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರದ್ಯುಮ್ನ ಠಾಕೂರ್ ಹತ್ಯೆಯಲ್ಲಿ ಈ ವಿದ್ಯಾರ್ಥಿಯ ಕೈವಾಡವಿರಬಹುದು ಎಂದು ಶಂಕಿಸಲಾಗಿದ್ದು, 11ನೇ ತರಗತಿಯಲ್ಲಿ ಓದುತ್ತಿರುವ ಈತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸೆಪ್ಟೆಂಬರ್ 8ರಂದು ಶಾಲೆಯ ಶೌಚಾಲಯದಲ್ಲಿ ಪ್ರದ್ಯುಮ್ನನ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದ್ಯುಮ್ನ ಶಾಲೆಗೆ ಬರುತ್ತಿದ್ದ ವಾಹನದ ಕಂಡಕ್ಟರ್ ನನ್ನು ಬಂಧಿಸಲಾಗಿದ್ದು, ಅನೈತಿಕ ಲೈಂಗಿಕ ಕ್ರಿಯೆಯನ್ನು ಪ್ರದ್ಯುಮ್ನ ಪ್ರತಿಭಟಿಸಿದ್ದಕ್ಕೆ ಆತನ ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಆದರೆ, ಈಗ ಹಿರಿಯ ವಿದ್ಯಾರ್ಥಿಯ ಹತ್ಯೆಯಿಂದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಪ್ರದ್ಯುಮ್ನ ಶೌಚಾಲಯವನ್ನು ಪ್ರವೇಶಿಸುವಾಗ ಮತ್ತೊಬ್ಬ ವಿದ್ಯಾರ್ಥಿ ಇದ್ದಿದ್ದನ್ನು ಸಿಸಿಟಿವಿ ಫುಟೇಜ್ ದೃಢಪಡಿಸಿದೆ. ಕತ್ತು ಸೀಳಿದ ನಂತರ ಪ್ರದ್ಯುಮ್ನ ತೆವಳಿಕೊಂಡ ಹೊರಬಂದಿದ್ದ, ಸ್ಥಳದಲ್ಲಿಯೇ ಸಾವಿಗೀಡಾಗಿದ್ದ. ಒಂದು ಮಾಹಿತಿಯ ಪ್ರಕಾರ, ಹಿರಿಯ ವಿದ್ಯಾರ್ಥಿ ಪರೀಕ್ಷೆ ಮುಂದೂಡಲೆಂದು ಹೀಗೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ನನ್ನ ಮಗನನ್ನು ನಿನ್ನೆ (ಮಂಗಳವಾರ) ರಾತ್ರಿಯೇ ಬಂಧಿಸಲಾಗಿದೆ. ಆತನಿಗೂ ಈ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಹತ್ಯೆ ಆಗಿರುವುದು ತಿಳಿಯುತ್ತಿದ್ದಂತೆ ಆತನೇ ತೋಟದ ಮಾಲಿ ಮತ್ತು ಶಿಕ್ಷಕರಿಗೆ ಮಾಹಿತಿ ತಿಳಿಸಿದ ಎಂದು ಬಂಧಿತನಾಗಿರುವ ವಿದ್ಯಾರ್ಥಿಯ ತಂದೆ ಅಳಲು ತೋಡಿಕೊಂಡಿದ್ದಾರೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications