ಪ್ರದ್ಯುಮ್ನ ಹತ್ಯೆ : ಹನ್ನೊಂದನೇ ತರಗತಿ ವಿದ್ಯಾರ್ಥಿ ವಶಕ್ಕೆ
ಗುರ್ಗಾಂವ್, ನವೆಂಬರ್ 08 : ಪ್ರಮುಖ ಬೆಳವಣಿಗೆಯೊಂದರಲ್ಲಿ ಗುರ್ಗಾಂವ್ ನ ರಯನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ನಡೆದಿದ್ದ 7 ವರ್ಷದ ಬಾಲಕನ ಹತ್ಯೆಗೆ ಸಂಬಂಧಿಸಿದಂತೆ ಅದೇ ಶಾಲೆಯ ಹಿರಿಯ ವಿದ್ಯಾರ್ಥಿಯನ್ನು ಸಿಬಿಐ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಪ್ರದ್ಯುಮ್ನ ಠಾಕೂರ್ ಹತ್ಯೆಯಲ್ಲಿ ಈ ವಿದ್ಯಾರ್ಥಿಯ ಕೈವಾಡವಿರಬಹುದು ಎಂದು ಶಂಕಿಸಲಾಗಿದ್ದು, 11ನೇ ತರಗತಿಯಲ್ಲಿ ಓದುತ್ತಿರುವ ಈತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಸೆಪ್ಟೆಂಬರ್ 8ರಂದು ಶಾಲೆಯ ಶೌಚಾಲಯದಲ್ಲಿ ಪ್ರದ್ಯುಮ್ನನ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದ್ಯುಮ್ನ ಶಾಲೆಗೆ ಬರುತ್ತಿದ್ದ ವಾಹನದ ಕಂಡಕ್ಟರ್ ನನ್ನು ಬಂಧಿಸಲಾಗಿದ್ದು, ಅನೈತಿಕ ಲೈಂಗಿಕ ಕ್ರಿಯೆಯನ್ನು ಪ್ರದ್ಯುಮ್ನ ಪ್ರತಿಭಟಿಸಿದ್ದಕ್ಕೆ ಆತನ ಹತ್ಯೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಆದರೆ, ಈಗ ಹಿರಿಯ ವಿದ್ಯಾರ್ಥಿಯ ಹತ್ಯೆಯಿಂದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಪ್ರದ್ಯುಮ್ನ ಶೌಚಾಲಯವನ್ನು ಪ್ರವೇಶಿಸುವಾಗ ಮತ್ತೊಬ್ಬ ವಿದ್ಯಾರ್ಥಿ ಇದ್ದಿದ್ದನ್ನು ಸಿಸಿಟಿವಿ ಫುಟೇಜ್ ದೃಢಪಡಿಸಿದೆ. ಕತ್ತು ಸೀಳಿದ ನಂತರ ಪ್ರದ್ಯುಮ್ನ ತೆವಳಿಕೊಂಡ ಹೊರಬಂದಿದ್ದ, ಸ್ಥಳದಲ್ಲಿಯೇ ಸಾವಿಗೀಡಾಗಿದ್ದ. ಒಂದು ಮಾಹಿತಿಯ ಪ್ರಕಾರ, ಹಿರಿಯ ವಿದ್ಯಾರ್ಥಿ ಪರೀಕ್ಷೆ ಮುಂದೂಡಲೆಂದು ಹೀಗೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ನನ್ನ ಮಗನನ್ನು ನಿನ್ನೆ (ಮಂಗಳವಾರ) ರಾತ್ರಿಯೇ ಬಂಧಿಸಲಾಗಿದೆ. ಆತನಿಗೂ ಈ ಹತ್ಯೆಗೂ ಯಾವುದೇ ಸಂಬಂಧವಿಲ್ಲ. ಹತ್ಯೆ ಆಗಿರುವುದು ತಿಳಿಯುತ್ತಿದ್ದಂತೆ ಆತನೇ ತೋಟದ ಮಾಲಿ ಮತ್ತು ಶಿಕ್ಷಕರಿಗೆ ಮಾಹಿತಿ ತಿಳಿಸಿದ ಎಂದು ಬಂಧಿತನಾಗಿರುವ ವಿದ್ಯಾರ್ಥಿಯ ತಂದೆ ಅಳಲು ತೋಡಿಕೊಂಡಿದ್ದಾರೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ










Click it and Unblock the Notifications