Breaking: ಕ್ಲಬ್ನಲ್ಲಿ ಗಲಾಟೆ; ಮ್ಯಾನೇಜರ್ ಸೇರಿ 7 ಮಂದಿ ಬಂಧನ
ಗುರ್ಗಾಂವ್, ಆಗಸ್ಟ್ 11: ಹರಿಯಾಣದ ಗುರ್ಗಾಂವ್ನಲ್ಲಿರುವ ಕ್ಲಬ್ ಕಾಸಾ ಡಾಂಝಾದಲ್ಲಿ ವ್ಯಕ್ತಿಯೊಬ್ಬರ ಮೇಲೆ ಅಮಾನುಷವಾಗಿ ಬೌನ್ಸರ್ಗಳು ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಇದರ ಬೆನ್ನಲ್ಲೇ ಗುರ್ಗಾಂವ್ ಪೊಲೀಸರು ಕ್ಲಬ್ ಮ್ಯಾನೇಜರ್ ಮತ್ತು ಆರು ಮಂದಿ ಬೌನ್ಸರ್ಗಳನ್ನು ಬಂಧಿಸಿದ್ದಾರೆ.
ಉದ್ಯೋಗ್ ವಿಹಾರ್ನಲ್ಲಿರುವ ಕ್ಲಬ್ ಕಾಸಾ ಡಾಂಜಾದಲ್ಲಿ ಆಗಸ್ಟ್ 7-8 ರ ಮಧ್ಯರಾತ್ರಿಯಲ್ಲಿ ಬೌನ್ಸರ್ಗಳು ಮತ್ತು ಕ್ಲಬ್ಗೆ ಭೇಟಿ ನೀಡಿದ್ದ ಗುಂಪಿನ ನಡುವೆ ಗಲಾಟೆ ನಡೆದಿತ್ತು. ಗುಂಪಿನಲ್ಲಿದ ಯುವತಿಯನ್ನು ಅನುಚಿತವಾಗಿ ಮುಟ್ಟಿದ ಆರೋಪದ ಮೇಲೆ ವಾಗ್ವಾದ ಆರಂಭವಾಗಿ ಘರ್ಷಣೆ ನಡೆದಿತ್ತು.
ದೈಹಿಕ ಹಲ್ಲೆ ಮತ್ತು ಕಿರುಕುಳದ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಗುರುಗ್ರಾಮ್ ಪೊಲೀಸ್ ಮುಖ್ಯಸ್ಥ ಕಲಾ ರಾಮಚಂದ್ರನ್ ಹೇಳಿದ್ದಾರೆ. ಕ್ಲಬ್ನ ಮ್ಯಾನೇಜರ್ ಲೋಕೇಶ್, ಹಲ್ಲೆ ಮಾಡಿದ್ದ ಬೌನ್ಸರ್ಗಳಾದ ಸೋನು, ಮನ್ದೀಪ್, ಸುಮಿತ್, ನಿತಿನ್, ರಾಮ್ ಸಿಂಗ್ ಮತ್ತು ರಾಕೇಶ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

"ಪೊಲೀಸ್ ಕಮಿಷನರ್ ಅವರ ನಿರ್ದೇಶನದ ಹಿನ್ನೆಲೆಯಲ್ಲಿ, ಭದ್ರತಾ ಏಜೆನ್ಸಿಗಳಲ್ಲಿ ನೇಮಕಗೊಂಡಿರುವ ಬೌನ್ಸರ್ಗಳ ಕುರಿತು ಪೊಲೀಸ್ ಪರಿಶೀಲನೆ ನಡೆಯುತ್ತಿದೆ. ಕರ್ತವ್ಯಲೋಪ ಎಸಗುವ ಏಜೆನ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು" ಎಂದು ಅಪರಾಧ ವಿಭಾಗದ ಎಸಿಪಿ ಪ್ರೀತ್ ಪಾಲ್ ಸಾಂಗ್ವಾನ್ ಹೇಳಿದ್ದಾರೆ.
ದೂರುದಾರರು ಹಂಚಿಕೊಂಡ ವೈರಲ್ ವಿಡಿಯೋದಲ್ಲಿ, ಹಲವಾರು ಮಂದಿ ಬೌನ್ಸರ್ಗಳು ಯುವತಿಯ ಸ್ನೇಹಿತನನ್ನು ಥಳಿಸುತ್ತಿರುವುದನ್ನು ಕಾಣಬಹುದು. ಯುವತಿ ತನ್ನ ಸ್ನೇಹಿತನನ್ನು ಉಳಿಸುವಂತೆ ಬೌನ್ಸರ್ಗಳಲ್ಲಿ ಮನವಿ ಮಾಡುವುದನ್ನು, ತನ್ನ ಸ್ನೇಹಿತನಿಗೆ ರಕ್ತ ಬರುತ್ತಿದೆ ಎಂದು ಆಕೆ ಕಿರುಚುವುದನ್ನು ಸಹ ಕೇಳಬಹುದು.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 147 (ಗಲಭೆ), 149 (ಕಾನೂನುಬಾಹಿರ ಸಭೆ), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು), 354 ಎ (1) (ಐ) (ಲೈಂಗಿಕ ಕಿರುಕುಳ), 379 ಎ (ಕಳ್ಳತನ) ಮತ್ತು 506 (ಕ್ರಿಮಿನಲ್) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Recommended Video
ಕಾಸಾ ಡಾಂಜಾ ಕ್ಲಬ್ ಹಿಂಸಾಚಾರವನ್ನು ಖಂಡಿಸಿ ಹೇಳಿಕೆ ನೀಡಿದೆ. ಆದರೆ ಕಿರುಕುಳದ ಆರೋಪಗಳನ್ನು ನಿರಾಕರಿಸಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications