ಪ್ರದ್ಯುಮ್ನ ಹತ್ಯೆ: ಆರೋಪಿಯ ನ್ಯಾಯಾಂಗ ಬಂಧನ ವಿಸ್ತರಣೆ
ಗುರ್ಗಾಂವ್, ಜನವರಿ 30: ಗುರ್ಗಾಂವ್ ನ ರಾಯನ್ ಇಂಟರ್ನ್ಯಾಶನಲ್ ಸ್ಕೂಲಿನಲ್ಲಿ ಹತ್ಯೆಯಾದ ಪ್ರದ್ಯಮ್ನ ಪ್ರಕರಣದ ಆರೋಪಿಯ ನ್ಯಾಯಾಂಗ ಬಂಧನದ ಅವಧಿಯನ್ನು ಗುರ್ಗಾಂವ್(ಗುರುಗ್ರಾಮ) ನ ಚಿಲ್ಡ್ರನ್ಸ್ ಸೆಶನ್ಸ್ ಕೋರ್ಟ್ ವಿಸ್ತರಿಸಿದೆ.
ಆರೋಪಿ, ಇದೇ ಶಾಲೆಯಲ್ಲಿ 11 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯಾಘಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಫೆಬ್ರವರಿ 12 ರವರೆಗೆ ಮುಂದೂಡಲಾಗಿದೆ.
ಹರ್ಯಾಣದ ಗುರ್ಗಾಂವ್ ನಲ್ಲಿರುವ ರಾಯನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದ ಪ್ರದ್ಯುಮ್ನ ಠಾಕೂರ್ ನನ್ನು ಸೆಪ್ಟೆಂಬರ್ 8, 2017 ರಂದು ಶಾಲೆಯ ಶೌಚಾಲಯದಲ್ಲಿ ಕತ್ತು ಸೀಳಿ ಹತ್ಯೆಗೈಯಲಾಗಿತ್ತು.

ಈ ಸಂಬಂಧ ಇದೇ ಶಾಲೆಯಲ್ಲಿ ಓದುತ್ತಿದ್ದ 16 ವರ್ಷದ ವಿದ್ಯಾರ್ಥಿಯನ್ನು ಕೆಲ ದಿನಗಳ ನಂತರ ಬಂಧಿಸಲಾಗಿತ್ತು. ಪರೀಕ್ಷೆ ಮತ್ತು ಪಾಲಕರ ಮೀಟಿಂಗ್ ಮುಂದೂಡುವ ಸಲುವಾಗಿ ಆರೋಪಿಯೇ ಈ ಕೃತ್ಯ ಎಸಗಿರುವುದಾಗಿ ತನಿಖೆ ಸಂದರ್ಭದಲ್ಲಿ ತಿಳಿದುಬಂದಿತ್ತು.
ಈ ಪ್ರಕರಣವನ್ನು ಸದ್ಯಕ್ಕೆ ಸಿಬಿಐ ಗೆ ವಹಿಸಲಾಗಿದ್ದು, ಘಟನೆಯ ಸತ್ಯಾಸತ್ಯತೆ ಹೊರಬರಬೇಕಿದೆ. ಇತ್ತೀಚೆಗೆ ತಾನೇ ಆರೋಪಿ ಪರ ವಕೀಲರು ಎರಡು ಬಾರಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications