ಉಗ್ರರನ್ನು ಹತ್ತಿಕ್ಕುವಷ್ಟು ನಾಯಕತ್ವ ಸಮರ್ಥವಾಗಿದೆ: ಅಜಿತ್ ದೋವಲ್
ಗುರುಗ್ರಾಮ, ಮಾರ್ಚ್ 19: ಕೇಂದ್ರದ ನಾಯಕತ್ವವು ಯಾವುದೇ ಭಯೋತ್ಪಾದನೆ ಚಟುವಟಿಕೆ ಮತ್ತು ಅದಕ್ಕೆ ಕುಮ್ಮಕ್ಕು ನೀಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸಂಪೂರ್ಣ ಸಮರ್ಥವಾಗಿದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಹೇಳಿದ್ದಾರೆ.
ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) 80ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಫೆಬ್ರವರಿ 14ರಂದು ಪುಲ್ವಾಮಾ ದಾಳಿಯಲ್ಲಿ ಸಿಆರ್ಪಿಎಫ್ನ 40 ಯೋಧರು ಬಲಿಯಾದ ಘಟನೆಯನ್ನು ಭಾರತ ಮರೆತಿಲ್ಲ, ಮರೆಯುವುದಿಲ್ಲ ಎಂದು ಹೇಳಿದರು.

ಪುಲ್ವಾಮಾದಂತಹ ಭಯೋತ್ಪಾದನಾ ಕೃತ್ಯಗಳಿಗೆ ಮತ್ತು ಅದಕ್ಕೆ ಬೆಂಬಲ ನೀಡುವವರಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯೆ ನೀಡುವಷ್ಟು ದೇಶದ ನಾಯಕತ್ವ ಸಮರ್ಥವಾಗಿದೆ ಎಂದು ಭರವಸೆ ನೀಡುತ್ತೇನೆ ಎಂದು ದೋವಲ್ ತಿಳಿಸಿದರು.
NSA Ajit Doval at the 80th CRPF Anniversary Parade in Gurugram: What we have to do, which path we have to follow, what action is to be taken & at what time, our nation's leadership is capable & strong enough to take this decision & face every kind of challenge. https://t.co/VRO5P0Wn1d
— ANI (@ANI) 19 March 2019
'ನಾವೇನು ಮಾಡಬೇಕು? ನಮ್ಮ ದಾರಿ, ಗುರಿ, ನಮ್ಮ ಪ್ರತಿಕ್ರಿಯೆ ಮತ್ತು ಪ್ರತಿಕ್ರಿಯಿಸುವ ಸಮಯ ಏನಿರಬೇಕು? ದೇಶದ ನಾಯಕತ್ವವು ಅದನ್ನು ಮಾಡಲು ಸಮರ್ಥವೂ ಹೌದು ಮತ್ತು ಧೈರ್ಯಶಾಲಿಯೂ ಹೌದು. ದೇಶವು ಇಂತಹ ಎಲ್ಲಾ ಸವಾಲುಗಳನ್ನು ಎದುರಿಸಲಿದೆ ಮತ್ತು ಇದನ್ನು ಮಾಡಲು ನಮಗೆ ಧೈರ್ಯವೂ ಇದೆ' ಎಂದರು.
ಪುಲ್ವಾಮಾ ದಾಳಿಯಲ್ಲಿ ಬಲಿಯಾದ 40 ಹುತಾತ್ಮರಿಗೆ ಗೌರವವನ್ನು ಸಲ್ಲಿಸಿದರು. ಇದೊಂದು ದುಃಖಕರ ಘಟನೆ. ಈ ಯೋಧರಿಗೆ ಮತ್ತು ಅವರ ಕುಟುಂಬಗಳಿಗೆ ದೇಶ ಯಾವಾಗಲೂ ಋಣಿಯಾಗಿರುತ್ತದೆ ಎಂದು ನೋವು ವ್ಯಕ್ತಪಡಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications