ಇಂಥ ಶಾಲೆಗೆ ಮಕ್ಕಳನ್ನು ಹೇಗೆ ಕಳಿಸುವುದು? ತಾಯಿಯ ಆಕ್ರಂದನ
ಗುರ್ಗಾಂವ್, ಸೆಪ್ಟೆಂಬರ್ 09 : ಏಳು ವರ್ಷದ ಬಾಲಕನ ಹತ್ಯೆಗೆ ಸಾಕ್ಷಿಯಾದ ರಯನ್ ಅಂತಾರಾಷ್ಟ್ರೀಯ ಶಾಲೆಯ ವಿರುದ್ಧ ಪೋಷಕರೆಲ್ಲರೂ ದಂಗೆ ಎದ್ದಿದ್ದು, ಬಾಲಕನ ಕೊಲೆಯ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸುತ್ತಿದ್ದಾರೆ.
ಎರಡನೇ ತರಗತಿಯಲ್ಲಿ ಓದುತ್ತಿದ್ದ ಪ್ರದ್ಯುಮನ್ ನನ್ನು ಶೌಚಾಲಯದಲ್ಲಿ ಅಮಾನುಷವಾಗಿ, ಕತ್ತು ಕತ್ತರಿಸಿ ಹತ್ಯೆಗೈದ ಬಸ್ ಕಂಡಕ್ಟರ್ ಅಶೋಕ್ ನನ್ನು ಬಂಧಿಸಲಾಗಿದ್ದು, ಆತನನ್ನು ನ್ಯಾಯಾಲಯ ಪೊಲೀಸ್ ವಶಕ್ಕೆ ನೀಡಿದೆ. ಕೊಲೆಗಡುಕ ಬಾಲಕನನ್ನು ಲೈಂಗಿಕವಾಗಿ ಬಳಸಿಕೊಳ್ಳಲು ಯತ್ನಿಸಿದ್ದ ಎಂದೂ ತಿಳಿದುಬಂದಿದೆ.

ಶಾಲೆಗೆ ಬರುತ್ತಲೇ ಶೌಚಾಲಯಕ್ಕೆ ಹೋಗಿದ್ದ ಪ್ರದ್ಯುಮನ ಕೆಲವೇ ಕ್ಷಣಗಳಲ್ಲಿ ಹತ್ಯೆಗೀಡಾಗಿದ್ದ. ಶೌಚಾಲಯದಲ್ಲಿ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ ಬಸ್ ಕಂಡಕ್ಟರ್ ಅಶೋಕ್, ಬಾಲಕನ ಕತ್ತು ಸೀಳೆ ಭೀಭತ್ಸವಾಗಿ ಹತ್ಯೆಗೈದಿದ್ದ. ಶಾಲೆಗೆ ಹೋದ ಹದಿನೈದೇ ನಿಮಿಷದಲ್ಲಿ ಬಾಲಕ ಸತ್ತ ಸುದ್ದಿ ತಂದೆಯನ್ನು ತಲುಪಿತ್ತು.
ಶುಕ್ರವಾರದಿಂದಲೇ ಬಾಲಕನ ಪೋಷಕರು ಮತ್ತು ನೂರಾರು ಮಕ್ಕಳ ತಂದೆತಾಯಿಯರು ಶಾಲೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಮಕ್ಕಳಿಗೆ ರಕ್ಷಣೆ ನೀಡಲು ವಿಫಲವಾದ ಶಾಲೆಗೆ ತಮ್ಮ ಮಕ್ಕಳನ್ನು ಕಳಿಸುವುದು ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶಾಲೆಯ ಪ್ರಿನ್ಸಿಪಾಲ್ ನೀರಜ್ ಬಾತ್ರಾನನ್ನು ಅಮಾನತುಗೊಳಿಸಲಾಗಿದ್ದರೂ, ಹತ್ಯೆ ಮಾಡಿದ ಅಶೋಕ್ ನನ್ನು ಬಂಧಿಸಲಾಗಿದ್ದರೂ, ಪ್ರತಿಭಟನೆಯನ್ನು ಬಿಡದ ಪೋಷಕರು ಇಡೀ ಮ್ಯಾನೇಜ್ಮೆಂಟ್ ವಿರುದ್ಧ ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಬಾಲಕನ ತಂದೆ ಗುರ್ಗಾಂವ್ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿ ಮನವಿಯನ್ನು ಸಲ್ಲಿಸಿದರು.
ಹತ್ಯೆಯಾದ ಬಾಲಕನ ಅಕ್ಕ 5ನೇ ತರಗತಿಯಲ್ಲಿ ಇದೇ ಶಾಲೆಯಲ್ಲಿ ಓದುತ್ತಿದ್ದಾಳೆ. ಮಕ್ಕಳಿಗೆ ರಕ್ಷಣೆ ಸಿಗದಿದ್ದರೆ ಇಂಥ ಶಾಲೆಗೆ ಕಳಿಸುವುದು ಹೇಗೆ ಎಂಬುದು ಬಾಲಕನ ತಾಯಿ ಜ್ಯೋತಿಯವರ ಅಳಲು. ಮಗನನ್ನು ಕಳೆದುಕೊಂಡಿರುವ ಜ್ಯೋತಿಯವರು ಆರ್ತನಾದ ಕರಳು ಕಿತ್ತುಬರುವಂತಿತ್ತು.
ಶುಕ್ರವಾರವೇ ಶಾಲೆಗೆ ನುಗ್ಗಿದ್ದ ನೂರಾರು ಪೋಷಕರು ಶಾಲೆಯ ಪೀಠೋಪಕರಣವನ್ನು ಧ್ವಂಸ ಮಾಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಘಟನೆ ನಡೆದ ನಂತರ ಹಲವಾರು ಪೋಷಕರು ತಮ್ಮ ಮಕ್ಕಳ ಸುರಕ್ಷತೆಯ ಬಗ್ಗೆ ಶಿಕ್ಷಕರಿಗೆ ಫೋನ್ ಮಾಡಿ ವಿಚಾರಿಸಿದರೂ ಉತ್ತರ ಬರದಿರುವುದು ಅವರನ್ನು ಮತ್ತಷ್ಟು ಕ್ರೋಧಿತರನ್ನಾಗಿ ಮಾಡಿದೆ.
ನ್ಯಾಯಾಲಯದಲ್ಲಿ ಆರೋಪಿಯನ್ನು ಪ್ರತಿನಿಧಿಸದಿರಲು ನಿರ್ಧಾರ : ಆರೋಪಿ ಅಶೋಕ್ ನನ್ನು ನ್ಯಾಯಾಲಯದಲ್ಲಿ ಪ್ರತಿನಿಧಿಸದಿರಲು ಸೊಹನಾ ಬಾರ್ ಅಸೋಸಿಯೇಷನ್ ನಿರ್ಧರಿಸಿದೆ. ಈ ಕುರಿತು ಪತ್ರಿಕಾಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications