ಪಿ.ಜಿ. ಮಾಲೀಕನ ಕಿರುಕುಳ: ಸ್ಪೈಸ್ ಜೆಟ್ ಗಗನಸಖಿ ಆತ್ಮಹತ್ಯೆ
ನವದೆಹಲಿ, ಡಿಸೆಂಬರ್ 19: ಖಾಸಗಿ ವಿಮಾನಯಾನ ಸಂಸ್ಥೆಯೊಂದರ ಗಗನಸಖಿಯೊಬ್ಬರು ಗುರುಗ್ರಾಮದಲ್ಲಿನ ಡಿಎಲ್ಎಫ್ ಮೂರನೇ ಹಂತದಲ್ಲಿರುವ ಪೇಯಿಂಗ್ ಗೆಸ್ಟ್ (ಪಿ.ಜಿ) ಒಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದ್ದಾರೆ.
ಮೃತ ಗಗನಸಖಿಯನ್ನು ಮಿಸ್ತು ಸರ್ಕಾರ್ ಎಂದು ಗುರುತಿಸಲಾಗಿದೆ. ಪಶ್ಚಿಮ ಬಂಗಾಳದ ಸಿಲಿಗುರಿ ಜಿಲ್ಲೆಯವರಾದ ಮಿಸ್ತು, ಸ್ಪೈಸ್ಜೆಟ್ ವಿಮಾನಯಾನ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಮಿಸ್ತು ತಾವು ವಾಸವಿದ್ದ ಪಿ.ಜಿ. ಮಾಲೀಕನ ದುರ್ವರ್ತನೆಯಿಂದಾಗಿ ಬೇಸೆತ್ತುಗೊಂಡಿದ್ದರು. ಆತನ ಕುರಿತು ಭಯ ಹೊಂದಿದ್ದರು ಎಂದು ಆಕೆಯ ತಂದೆ ಆರೋಪಿಸಿದ್ದಾರೆ.
'ಮಂಗಳವಾರ ರಾತ್ರಿ 2 ಗಂಟೆ ಸುಮಾರಿಗೆ ಕರೆ ಮಾಡಿದ್ದ ಮಗಳು, ಪಿಜಿ ಮಾಲೀಕ ಅಮರಿಂದರ್ ಸಿಂಗ್ ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ಅಳಲು ತೋಡಿಕೊಂಡಿದ್ದಳು. ಅದೇ ದಿನ ರಾತ್ರಿ ಆಕೆ ಕೆಲಸ ಮುಗಿಸಿ ಪಿ.ಜಿಗೆ ಮರಳಿದಾಗ ಅಮರಿಂದರ್ ಸಿಂಗ್ ಕೆಲವು ವಿಚಾರಕ್ಕೆ ಸಂಬಂಧಿಸಿದಂತೆ ಆಕೆಯನ್ನು ನಿಂದಿಸಿ ಅವಮಾನಿಸಿದ್ದಾನೆ. ನನ್ನ ಜತೆ ಮಾತನಾಡುವಾಗ ಆಕೆ ಅಳುತ್ತಿದ್ದಳು. ತನ್ನ ಮೊಬೈಲ್ಅನ್ನು ಆತ ಹ್ಯಾಕ್ ಮಾಡಿದ್ದು, ಹೊರಗೆಲ್ಲೂ ಹೋಗಲು ಬಿಡುತ್ತಿಲ್ಲ ಎಂಬುದಾಗಿ ತಿಳಿಸಿದ್ದಳು' ಎಂದು ಆಕೆಯ ತಂದೆ ಹವಾಲು ಚಾಂದ್ ಸರ್ಕಾರ್ ಹೇಳಿದ್ದಾರೆ.
ಸಿಂಗ್ನ ಸತತ ಕಿರುಕುಳ ತಾಳಲಾರದೆ ಮಗಳು ಸಿಲಿಗುರಿಗೆ ವಾಪಸ್ ಬರಲು ನಿರ್ಧರಿಸಿದ್ದಳು. ಬಳಿಕ ಆಕೆ ಕರೆ ಕಟ್ ಮಾಡಿದ್ದಳು ಎಂದು ಚಾಂದ್ ಸರ್ಕಾರ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮಗಳು ಏನೋ ಮಾಡಿಕೊಂಡಿದ್ದಾಳೆ
'ಕೆಲವು ಸಮಯದ ಬಳಿಕ ಕರೆ ಮಾಡಿದ ಸಿಂಗ್, ನಿಮ್ಮ ಮಗಳು ಏನೋ ಮಾಡಿಕೊಂಡಿದ್ದಾಳೆ ಎಂದು ತಿಳಿಸಿದ. ನನ್ನ ಮಗಳಿಗೆ ಏನಾಯಿತು ಎಂದು ಕೇಳಿದರೆ ಆತ ತಿಳಿಸಲಿಲ್ಲ. ನಾನು ಗುರುಗ್ರಾಮ ಪೊಲೀಸರನ್ನು ಸಂಪರ್ಕಿಸಿ ಪಿ.ಜಿ. ಮಾಲೀಕನನ್ನು ವಿಚಾರಿಸುವಂತೆ ಮನವಿ ಮಾಡಿಕೊಂಡೆ' ಎಂದು ಹೇಳಿದ್ದಾರೆ.

ಫೋನಿನಲ್ಲಿ ಮಾತಾಡುವಾಗ ಸುಳಿವು ಸಿಕ್ಕಿರಲಿಲ್ಲ
'ಪೊಲೀಸರು ಸ್ಥಳಕ್ಕೆ ಭೇಟಿ ನೀಡುವ ವೇಳೆ, ತನ್ನ ಕೊಠಡಿಯ ಸೀಲಿಂಗ್ ಫ್ಯಾನ್ಗೆ ಆಕೆ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ. ಮಾಲೀಕ ಸಿಂಗ್ನೇ ನನ್ನ ಮಗಳಿಗೆ ಏನೋ ಮಾಡಿದ್ದಾನೆ ಎಂದು ನನಗೆ ಅನುಮಾನವಿದೆ. ನನ್ನ ಮಗಳು ಖಿನ್ನಳಾಗಿದ್ದಳು. ಆದರೆ ನನ್ನ ಬಳಿ ಕೊನೆಯ ಸಲ ಫೋನಿನಲ್ಲಿ ಮಾತನಾಡುವಾಗ ಈ ರೀತಿಯ ಅತಿರೇಕದ ನಿರ್ಧಾರ ತೆಗೆದುಕೊಳ್ಳುತ್ತಾಳೆ ಎಂಬ ಯಾವ ಸುಳಿವೂ ಸಿಕ್ಕಿರಲಿಲ್ಲ' ಎಂದು ಚಾಂದ್ ಸರ್ಕಾರ್ ಕಣ್ಣೀರಿಟ್ಟಿದ್ದಾರೆ.

ಡೆತ್ ನೋಟ್ ಸಿಕ್ಕಿಲ್ಲ
'ಆಕೆಯ ಬಳಿ ಅಥವಾ ಪಿ.ಜಿಯ ಕೊಠಡಿಯಲ್ಲಿ ಯಾವುದೇ ಆತ್ಮಹತ್ಯೆಯ ಪತ್ರ ದೊರೆತಿಲ್ಲ. ಕೋಣೆಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಮೃತದೇಹ ಸಿಕ್ಕಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರೊಂದಿಗೆ ಸ್ಥಳಕ್ಕೆ ಬಂದಿದ್ದು, ಸಾಕ್ಷ್ಯಗಳನ್ನು ಸಂಗ್ರಹಿಸಿದ್ದೇವೆ. ಮುಂದಿನ ತನಿಖೆ ನಡೆಯುತ್ತಿದೆ' ಎಂದು ತನಿಖಾಧಿಕಾರಿ ರಾಮ್ ನಿವಾಸ್ ತಿಳಿಸಿದ್ದಾರೆ.

ಸಿಂಗ್ ವಿರುದ್ಧ ಪ್ರಕರಣ
'ಮೃತಳ ತಂದೆ ನೀಡಿರುವ ದೂರಿನ ಅನ್ವಯ, ಡಿಎಲ್ಎಫ್ ಮೂರನೇ ಹಂತದ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306ರ ಅನ್ವಯ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ್ದೇವೆ. ಆರೋಪಿಯನ್ನು ಬಂಧಿಸಲು ಎಲ್ಲ ಪ್ರಯತ್ನ ನಡೆಸಿದ್ದೇವೆ. ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದೇವೆ ಮತ್ತು ಇತರೆ ಉದ್ಯೋಗಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದೇವೆ' ಎಂದು ಹೇಳಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications