ಪ್ರದ್ಯುಮ್ನ ಕೊಲೆ : ಗುರ್ಗಾಂವ್ ಕೋರ್ಟ್ ನಿಂದ ಜಾಮೀನು ನಿರಾಕರಣೆ
ಗುರ್ಗಾಂವ್, ಜನವರಿ 08: ಗುರ್ಗಾಂವಿನ ರಾಯನ್ ಅಂತಾರಾಷ್ಟ್ರೀಯ ಶಾಲೆಯಲ್ಲಿ ನಡೆದ 7 ವರ್ಷದ ಬಾಲಕ ಪ್ರದ್ಯುಮ್ನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ, 11 ನೇ ತರಗತಿಯ ಬಾಲಕನಿಗೆ ಜಾಮೀನು ನೀಡಲು ಗುರ್ಗಾಂವ್ ನ ನ್ಯಾಯಾಲಯವೊಂದು ನಿರಾಕರಿಸಿದೆ.
ಸಿಬಿಐ(ಕೇಂದ್ರ ತನಿಖಾ ದಳ)ವು ಈ ಕೊಲೆಯ ಕುರಿತು ನಡೆಸುತ್ತಿರುವ ತನಿಖೆ ಪ್ರಗತಿಯಲ್ಲಿರುವುದರಿಂದ ಆರೋಪಿಯನ್ನು ಬಿಡುಗಡೆ ಮಾಡದಂತೆ ಕೋರ್ಟಿಗೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ, ಕಳೆದ ಡಿಸೆಂಬರ್ ನಲ್ಲಿ ಮತ್ತು ಜ.8 ರಂದು ಒಟ್ಟು ಎರಡು ಬಾರಿ ಆರೋಪಿಯ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎರಡು ಬಾರಿಯೂ ಜಾಮೀನು ನಿರಾಕರಿಸಿದೆ.
ಸೆಪ್ಟೆಂಬರ್ 8 ರಂದು ಗುರ್ಗಾಂವಿನ ರಾಯನ್ ಶಾಲೆಯ ಶೌಚಾಲಯದಲ್ಲಿ ಪ್ರದ್ಯಮ್ನನ ಕತ್ತು ಸೀಳಿ ಸಾಯಿಸಲಾಗಿತ್ತು. ಘಟನೆಯ ನಂತರ ನಾಪತ್ತೆಯಾಗಿದ್ದ ಶಾಲೆಯ ಬಸ್ ಕಂಡಕ್ಟರ್ ನನ್ನೇ ಅಪರಾಧಿ ಎಂದು ಶಂಕಿಸಲಾಗಿತ್ತಾದರೂ, ಕೆಲ ದಿನಗಳ ನಂತರ ಕಂಡಕ್ಟರ್ ದೋಷಮುಕ್ತ ಎಂಬುದು ಸಾಬೀತಾಗಿತ್ತು. ಆದರೆ ಪರೀಕ್ಷೆಯನ್ನು ಮುಂದೂಡುವ ಸಲುವಾಗಿ ಇದೇ ಶಾಲೆಯಲ್ಲಿ11 ನೇ ತರಗತಿ ಓದುತ್ತಿದ್ದ 16 ವರ್ಷದ ವ್ಯಕ್ತಿಯೇ ಪ್ರದ್ಯುಮ್ನನನ್ನು ಕೊಲೆಮಾಡಿದ್ದು ತಿಳಿದುಬಂದಿತ್ತು.

ಪ್ರದ್ಯಮ್ನ ಠಾಕೂರ್ ಕುಟುಂಬಸ್ಥರು ಮತ್ತು ಸಾರ್ವಜನಿಕರ ಆಕ್ರೋಷದ ಮೇರೆಗೆ ಓ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿದ್ದು, ತನಿಖೆ ನಡೆಯುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications