ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಮುಖ್ಯಮಂತ್ರಿ ಜೊತೆ ವೇದಿಕೆ ಹಂಚಿಕೊಂಡ ಪ್ರಣಬ್ ಮುಖರ್ಜಿ

|
Google Oneindia Kannada News

ಗುರ್ಗಾಂವ್, ಸೆಪ್ಟೆಂಬರ್ 03: ಇತ್ತೀಚೆಗಷ್ಟೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಕಾಂಗ್ರೆಸ್ಸಿಗರ ಕಣ್ಣು ಕೆಂಪಾಗಿಸಿದ್ದ ಪ್ರಣಬ್ ಮುಖರ್ಜಿ, ಇದೀಗ ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ.

ಪ್ರಣಬ್ ಮುಖರ್ಜಿ ಫೌಂಡೇಶನ್ ಎಂಬ ಮಾಜಿ ರಾಷ್ಟ್ರಪತಿ ಮುಖರ್ಜಿ ಅವರ ಸಂಘಟನೆಯೊಂದು ಆರೆಸ್ಸೆಸ್ ಜೊತೆ ವಿಲೀನವಾಗುತ್ತದೆ ಎಂಬ ವದಂತಿ ಹಬ್ಬಿದ ಎರಡು ದಿನದ ನಂತರ ನಡೆದ ಈ ಬೆಳವಣಿಗೆ ಕುತೂಹಲ ಕೆರಳಿಸಿದೆ.

ಆರೆಸ್ಸೆಸ್, ಪ್ರಣಬ್ ಮುಖರ್ಜಿ ಮತ್ತು ರಾಷ್ಟ್ರಭಕ್ತಿ ಸ್ಫುರಿಸುವ ಮಾತುಆರೆಸ್ಸೆಸ್, ಪ್ರಣಬ್ ಮುಖರ್ಜಿ ಮತ್ತು ರಾಷ್ಟ್ರಭಕ್ತಿ ಸ್ಫುರಿಸುವ ಮಾತು

ಆದರೆ ಈ ಕುರಿತು ಪ್ರಣಬ್ ಮುಖರ್ಜಿ ಅವರ ಅಧಿಕೃತ ಟ್ವಿಟ್ಟರ್ ಖಾತೆ ಮೂಲಕ ಸ್ಪಷ್ಟನೆ ನೀಡಲಾಗಿದ್ದು, ಅಮಥ ಯಾವುದೇ ವಿಲೀನದ ಯೋಚನೆ ಇಲ್ಲ. ಸ್ಮಾರ್ಟ್ ಗ್ರಾಮ ಯೋಜನೆಯ ಅಡಿಯಲ್ಲಿ ಜುಲೈ 2016 ರಲ್ಲಿ ಪ್ರಣಬ್ ಮುಖರ್ಜಿ ಅವರು ಹರ್ಯಾಣದ ಗುರ್ಗಾಂವ್ ನಲ್ಲಿರುವ ಕೆಲವು ಗ್ರಾಮಗಳನ್ನು ದತ್ತು ಪಡೆದಿದ್ದರು. ಅದರ ಸಲುವಾಗಿ ಗುರ್ಗಾಂವಿಗೆ ತೆರಳಿ, ಅಲ್ಲಿ ಮುಖ್ಯಮಂತ್ರಿಗಳ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ.

Pranab Mukherjee shares stage with CM Khattar in Haryana

ವಿವಿಧತೆಯಲ್ಲಿ ಏಕತೆ ನಮ್ಮ ದೊಡ್ಡ ಶಕ್ತಿ: ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಪ್ರಣಬ್ವಿವಿಧತೆಯಲ್ಲಿ ಏಕತೆ ನಮ್ಮ ದೊಡ್ಡ ಶಕ್ತಿ: ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಪ್ರಣಬ್

ಈ ಯೋಜನೆಯ ಅಡಿಯಲ್ಲಿ ಮುಖರ್ಜಿ ಅವರು 5 ಗ್ರಾಮಗಳನ್ನು ದತ್ತು ಪಡೆದಿದ್ದಾರೆ.ಅವುಗಳ ಸ್ಥಿತಿಗತಿಯ ಬಗ್ಗೆ ತಿಳಿಯಲು ಆಗಾಗಗ ಅಲ್ಲಿಗೆ ಪ್ರವಾಸ ಕೈಗೊಳ್ಳುತ್ತಾರೆ ಎಂದು ಅವರ ಆಅಪ್ತ ಮೂಲಗಳು ತಿಳಿಸಿವೆ.

English summary
Former president Pranab Mukherjee on Sunday shared the stage with Haryana Chief Minister Manohar Lal Khattar for the inauguration of projects under the Smartgram Yojona.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X