ಕೊರೊನಾ ಶಂಕಿತರ ಅಂತ್ಯಕ್ರಿಯೆಗೆ ಸ್ಥಳೀಯರಿಂದ ಅಡ್ಡಿ: ಕಲ್ಲು ತೂರಾಟ
ಅಂಬಾಲಾ, ಏಪ್ರಿಲ್ 28: ಕೊರೊನಾ ಶಂಕಿತನ ಅಂತ್ಯಕ್ರಿಯೆಗೆ ಸ್ಥಳೀಯರು ಅಡ್ಡಿ ಪಡಿಸಿದ್ದು, ವೈದ್ಯರು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹರ್ಯಾಣಾದಲ್ಲಿ ನಡೆದಿದೆ.
ಯಾವುದೇ ಕಾರಣಕ್ಕೂ ವ್ಯಕ್ತಿಯ ಅಂತ್ಯಕ್ರಿಯೆ ಮಾಡಲು ಇಲ್ಲಿ ಅವಕಾಶ ಮಾಡಿಕೊಡುವುದಿಲ್ಲ ಎಂದು ಪ್ರತಿಭಟನೆ ಮಾಡಿದ ಸಾರ್ವಜನಿಕರು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರು.
60 ವರ್ಷದ ಮಹಿಳೆ ಸಿಟಿ ಸಿವಿಲ್ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರಳೆದಿದ್ದರು. ಕೊನೆಗೆ ಜನರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದರು. ಮಹಿಳೆಗೆ ಸೋಮವಾರ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಕೆ ಚಿಕಿತ್ಸೆ ಪಡೆಯುತ್ತಿರುವಾಗಲೇ ಮೃತಪಟ್ಟಿದ್ದಳು. ಆಕೆಯ ರಕ್ತದ ಮಾದರಿಯನ್ನು ಪಡೆದುಕೊಳ್ಳಲಾಗಿದೆ.

ಕೊರೊನಾ ಶಂಕಿತರು ಅಥವಾ ಕೊರೊನಾ ಸೋಂಕಿತರ ಅಂತ್ಯಕ್ರಿಯೆಯನ್ನು ಒಂದೇ ರೀತಿ ಮಾಡಲಾಗುತ್ತದೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಅದನ್ನು ನೋಡಿ ಇವರು ಕೊರೊನಾದಿಂದ ಮೃತಪಟ್ಟಿದ್ದಾರೆ ಎಂದುಕೊಳ್ಳುವುದು ತಪ್ಪು ಎಂದು ವೈದ್ಯರು ತಿಳಿಸಿದ್ದಾರೆ.
ಆಂಬ್ಯುಲೆನ್ಸ್ ಮೇಲೂ ಕಲ್ಲು ತೂರಾಟ ನಡೆಸಿ ಜಖಂ ಮಾಡಿದ್ದರು. ಲಾಕ್ಡೌನ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿ ಕಲ್ಲು ತೂರಾಟ ಮಾಡಿದ ಜನರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಎಸ್ಪಿ ಕುಮಾರ್ ಹೇಳಿದ್ದಾರೆ.
ಅಂಬಾಲಾದಲ್ಲಿ ಇದುವರೆಗೆ 12 ಕೊರೊನಾ ಪ್ರಕರಣಗಳು ದೃಢಪಟ್ಟಿದೆ. ಹರ್ಯಾಣಾದಲ್ಲಿ 289 ಪ್ರಕರಣಗಳಿದ್ದು ಮೂವರು ಮೃತಪಟ್ಟಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications