ಸಿಪಿಐಎಂ ಮುಖಂಡ ಸೀತಾರಂ ಯೆಚೂರಿ ಪುತ್ರ ಕೊರೊನಾಕ್ಕೆ ಬಲಿ
ಗುರುಗ್ರಾಮ, ಏಪ್ರಿಲ್ 22: ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರ ಪುತ್ರ ಆಶೀಶ್ ಯೆಚೂರಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೊವಿಡ್ 19 ಸೋಂಕಿನಿಂದ ಬಳಲುತ್ತಿದ್ದ ಆಶೀಶ್ ಅವರಿಗೆ 34 ವರ್ಷವಾಗಿತ್ತು.
ಕಳೆದ ಎರಡು ವಾರಗಳಿಂದ ಜೀವನ್ಮರಣ ಹೋರಾಟ ನಡೆಸಿದ್ದ ಆಶೀಶ್ ಕೆಲದಿನಗಳಲ್ಲಿ ಚೇತರಿಕೆ ಹೊಂದುವ ನಿರೀಕ್ಷೆಯಿತ್ತು. ಆದರೆ, ಗುರುಗ್ರಾಮದ ಮೇದಾಂತಾ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ 5.30ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ಆಪ್ತವಲಯ ತಿಳಿಸಿದೆ.
ಸಿಪಿಐ(ಎಂ) ಪೊಲಿಟ್ ಬ್ಯುರೋ ಸೀತಾರಾಮ್ ಯೆಚೂರಿ, ಇಂದ್ರಾಣಿ ಮಜುಂದಾರ್, ಆಶೀಶ್ ಅವರ ಪತ್ನಿ ಸ್ವಾತಿ, ಸೋದರಿ ಅಖಿಲಾ ಮತ್ತು ದುಃಖ ಸಂತಪ್ತ ಕುಟುಂಬದ ಇತರ ಸದಸ್ಯರಿಗೆ ತನ್ನ ಆಳವಾದ ಸಂತಾಪಗಳನ್ನು ವ್ಯಕ್ತಪಡಿಸಿದೆ.
ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದರು. ದೆಹಲಿಯ ಪ್ರಮುಖ ಮಾಧ್ಯಮ ಸಂಸ್ಥೆಯಲ್ಲಿ ಕಾಪಿ ಎಡಿಟರ್ ಆಗಿ ಆಶೀಶ್ ಕಾರ್ಯ ನಿರ್ವಹಿಸುತ್ತಿದ್ದರು.

ಈ ಬಗ್ಗೆ ಟ್ವೀಟ್ ಮಾಡಿರುವ ಸೀತಾರಾಂ ಯೆಚೂರಿ, "ನನ್ನ ಹಿರಿಯ ಪುತ್ರ ಆಶೀಶ್ ಕೋವಿಡ್ 19ನಿಂದ ಕಳೆದುಕೊಂಡೆ ಎಂದು ತಿಳಿಸಲು ದುಃಖವಾಗುತ್ತಿದೆ. ಆಶೀಶ್ಗೆ ಚಿಕಿತ್ಸೆ ನೀಡಿದ ಎಲ್ಲಾ ವೈದ್ಯ, ನರ್ಸ್ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ನನ್ನ ನಮನಗಳು'' ಎಂದಿದ್ದಾರೆ.
It is with great sadness that I have to inform that I lost my elder son, Ashish Yechury to COVID-19 this morning. I want to thank all those who gave us hope and who treated him - doctors, nurses, frontline health workers, sanitation workers and innumerable others who stood by us.
— Sitaram Yechury (@SitaramYechury) April 22, 2021
ಕಾಂಗ್ರೆಸ್ ಮುಖಂಡ ಶಶಿ ತರೂರ್ ಸೇರಿದಂತೆ ಹಲವಾರು ಗಣ್ಯರು, ಸೀತಾರಾಂ ಅವರಿಗೆ ಸಾಂತ್ವನ ಹೇಳಿ ಟ್ವೀಟ್ ಮಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications