Breaking: ಚಾಕುವಿನಿಂದ ಚುಚ್ಚಿ ತಾಯಿಯನ್ನು ಕೊಂದ ಮಗ
ಗುರ್ಗಾಂವ್, ಆಗಸ್ಟ್ 12: 21 ವರ್ಷದ ಯುವಕನೊಬ್ಬ ತನ್ನ ವಿಧವೆ ತಾಯಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಹಲವು ಬಾರಿ ಚಾಕುವಿನಿಂದ ಇರಿದು, ಕತ್ತು ಹಿಸುಕಿ ಅಮಾನುಷವಾಗಿ ಹತ್ಯೆ ಮಾಡಿರುವ ಘಟನೆ ಹರ್ಯಾಣದ ಗುರ್ಗಾಂವ್ನಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಪ್ರವೇಶ್ ನನ್ನು ಬಂಧಿಸಲಾಗಿದ್ದು, ಆತ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತಿಯ ಮರಣದ ನಂತರ ಸೋನಾ ದೇವಿ (40) ತನ್ನ ತಾಯಿಯ ಗ್ರಾಮವಾದ ಹಿಸಾರ್ನ ಗರ್ಹಿಗೆ ಹಿಂತಿರುಗಿ ಖಾಸಗಿ ಶಾಲೆಯೊಂದರಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ಆರು ತಿಂಗಳ ಹಿಂದೆ ಕೆಲಸ ಬಿಟ್ಟು ಅದೇ ಗ್ರಾಮದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು.

ಅವರ ಮಗ ಆರೋಪಿ ಪ್ರವೇಶ್ ಸೋನೆಪತ್ನ ಜಟ್ವಾಡ ಮೊಹಲ್ಲಾದಲ್ಲಿ ವಾಸವಾಗಿದ್ದು, ಆಗ್ಗಾಗ್ಗೆ ತನ್ನ ತಾಯಿಯನ್ನು ಭೇಟಿಯಾಗುತ್ತಿದ್ದರು. ಆಗಸ್ಟ್ 6 ರಂದು ಬಂದು ಭೇಟಿಯಾದ ಸಮಯದಲ್ಲಿ, ತಾಯಿಯನ್ನು ಕೊಲೆ ಮಾಡಿದ್ದಾನೆ.
ಚಾಕುವಿನಿಂದ ಹಲವು ಬಾರಿ ಇರಿದಿರುವ ಆರೋಪಿ, ಆಕೆ ಮೃತಪಟ್ಟಿದಾಳೆ ಎಂದು ಖಚಿತಪಡಿಸಿಕೊಳ್ಳಲು ಕತ್ತು ಹಿಸುಕಿದ್ದಾನೆ. ನಂತರ ಆಕೆಯ ಶವವನ್ನು ಮಂಚದ ಕೆಳಗೆ ಬಚ್ಚಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಲ್ಕೈದು ದಿನಗಳ ನಂತರ ದುರ್ವಾಸನೆ ಗಮನಿಸಿದ ಮನೆ ಮಾಲೀಕರು ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಕೊಳೆತ ಸ್ಥಿತಿಯಲ್ಲಿದ್ದ ಸೋನಾ ದೇವಿಯ ಶವ ಪತ್ತೆಯಾಗಿದೆ.
ತನಿಖೆಯ ಸಮಯದಲ್ಲಿ, ಸೋನಾ ದೇವಿ ಸಹೋದರ ಪರ್ವಿಂದರ್, ಪ್ರವೇಶ್ ಆಕೆಯನ್ನು ಕೊಂದಿದ್ದಾನೆ ಎಂದು ಆರೋಪಿಸಿದ್ದು, ಅವರನ್ನು ರೋಹ್ಟಕ್ನಲ್ಲಿ ಬಂಧಿಸಲಾಗಿದೆ ಎಂದು ಸೆಕ್ಟರ್ 10 ಎ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೋಲೀಸ್ ಅಧಿಕಾರಿಯ ಪ್ರಕಾರ, ತನ್ನ ತಾಯಿಯು ಹಲವಾರು ಬಾರಿ ಫೋನ್ನಲ್ಲಿ ಮಾತನಾಡುವುದನ್ನು ನೋಡಿದ್ದರಿಂದ ಆಕೆ ಅಕ್ರಮ ಸಂಬಂಧವನ್ನು ಹೊಂದಿದ್ದಾರೆ ಎಂದು ಪ್ರವೇಶ್ ಶಂಕಿಸಿದ್ದಾನೆ. ಬಳಿಕ ಹತ್ಯೆ ಮಾಡಿದ್ದಾನೆ ಎಂದಿದ್ದಾರೆ.
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು 201 (ಸಾಕ್ಷ್ಯ ಅಡಗಿಸಿಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications