ಅಸ್ಸಾಂ; ಸಿಡಿಲು ಬಡಿದು 18 ಆನೆಗಳು ಸಾವು
ಗೌಹಾತಿ, ಮೇ 13; ಅಸ್ಸಾಂನ ನಾಗೋನ್ ಜಿಲ್ಲೆಯಲ್ಲಿ 18 ಆನೆಗಳು ಮೃತಪಟ್ಟಿವೆ. ಸಿಡಿಲು ಬಡಿದ ಕಾರಣ ಆನೆಗಳು ಸಾವನ್ನಪ್ಪಿವೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
"ಬುಧವಾರ ರಾತ್ರಿ ಉದ್ದೇಶಿತ ಖಂಡಾಲಿ ಅಭಯಾರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ" ಎಂದು ವನ್ಯಜೀವಿ ವಿಭಾಗದ ಮುಖ್ಯ ಸಂರಕ್ಷಣಾಧಿಕಾರಿ ಅಮಿತ್ ಶಾಯ್ ಮಾಹಿತಿ ನೀಡಿದ್ದಾರೆ.
ಆನೆ ಹಾವಳಿ ತಡೆಗೆ ಜೇನು ಸಾಕಣೆ; ದೇಶದಲ್ಲೇ ಮೊದಲ ಪ್ರಯೋಗ
"ಘಟನೆ ನಡೆದ ಪ್ರದೇಶ ದುರ್ಗಮವಾಗಿದ್ದು, ಗುರುವಾರ ಮಧ್ಯಾಹ್ನದ ತನಕ ನಮ್ಮ ತಂಡ ಅಲ್ಲಿಗೆ ತಲುಪಲು ಸಾಧ್ಯವಾಗಿಲ್ಲ. ಬೆಟ್ಟಪ್ರದೇಶವೊಂದರ ಮೇಲೆ 14, ಕೆಳಗೆ 8 ಆನೆಗಳ ಶವಗಳು ಪತ್ತೆಯಾಗಿದೆ" ಎಂದು ಅಮಿತ್ ಶಾಯ್ ವಿವರಣೆ ನೀಡಿದ್ದಾರೆ.
ಕುಶ ಆನೆ ಮರಳಿ ಕಾಡಿಗೆ; ಸಚಿವ ಅರವಿಂದ ಲಿಂಬಾವಳಿ
"ಪ್ರಾಥಮಿಕ ಮಾಹಿತಿಯಂತೆ ಆನೆಗಳು ಸಿಡಿಲು ಬಡಿದು ಮೃತಪಟ್ಟಿವೆ. ಶುಕ್ರವಾರ ಮೃತಪಟ್ಟ ಆನೆಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಖಚಿತ ಮಾಹಿತಿ ತಿಳಿಯಲಿದೆ" ಎಂದು ಹೇಳಿದ್ದಾರೆ.
ರಾಮನಗರ; ವಿದ್ಯುತ್ ಸ್ಪರ್ಶದಿಂದ ಆನೆ ಸಾವು
Recommended Video
ಸಾಲಾಗಿ ಆನೆಗಳು ಸತ್ತು ಬಿದ್ದಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲವರು ಈ ಘಟನೆಗೆ ಸಂತಾಪವನ್ನು ಸೂಚಿಸಿದ್ದಾರೆ. ಆನೆಗಳ ಸಾವಿಗೆ ನಿಖರ ಕಾರಣ ಏನು ಎಂಬುದು ಶುಕ್ರವಾರ ತಿಳಿಯಲಿದೆ.