ಅಸ್ಸಾಂ ತೈಲ ಬಾವಿ ಅಗ್ನಿ ಅವಘಡ: ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಶವ ಪತ್ತೆ
ಗುವಾಹಟಿ, ಜೂನ್ 10: ಅಸ್ಸಾಂನ ತೈಲ ಬಾವಿ ಅಗ್ನಿ ಅವಘಡದ ಸಂದರ್ಭದಲ್ಲಿ ಬಂಕಿ ನಂದಿಸಲು ಬಂದು ಕಾಣೆಯಾಗಿದ್ದ ಇಬ್ಬರು ಅಗ್ನಿ ಶಾಮಕ ಸಿಬ್ಬಂದಿ ಶವವಾಗಿ ಪತ್ತೆಯಾಗಿದ್ದಾರೆ.
Recommended Video
ಅಸ್ಸಾಂನ ತಿನ್ಸೂಕಿಯಾ ಜಿಲ್ಲೆಯ ಬಾಘ್ಜನ್ ಪ್ರದೇಶದಲ್ಲಿ ಆಯಿಲ್ ಇಂಡಿಯಾ ಲಿಮಿಟೆಡ್ನ ಅನಿಲ ಬಾವಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಹತೋಟಿಗೆ ತರಲು ಇನ್ನೂ ನಾಲ್ಕು ವಾರಗಳ ಸಮಯ ಬೇಕಾಗುತ್ತದೆ ಎಂದು ಒಐಎಲ್ ತಿಳಿಸಿದೆ. ಮೇ 27ರಂದು ಸಂಭವಿಸಿದ ಸ್ಫೋಟದ ಬಳಿಕ ಅನಿಲ ಸೋರಿಯಾಗುತ್ತಿದೆ.

ಹೀಗಾಗಿ ಆ ಪ್ರದೇಶದ ಸುತ್ತಲಿನ 1.5 ಕಿ.ಮೀ.ವ್ಯಾಪ್ತಿಯಲ್ಲಿನ ಸುಮಾರು 6 ಸಾವಿರ ಜನರನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ. ಅಲ್ಲದೆ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆಯಿಲ್ ಇಂಡಿಯಾ ಲಿಮಿಟೆಡ್ 30 ಸಾವಿರ ರೂ. ಪರಿಹಾರ ಘೋಷಿಸಿದೆ.
ಎರಡು ಶವಗಳು ತೈಲ ಬಾವಿ ಹತ್ತಿರದಲ್ಲೇ ಇದ್ದ ನೀರಿರುವ ಪ್ರದೇಶದಲ್ಲಿ ಪತ್ತೆಯಾಗಿದ್ದು, ಬೆಂಕಿಯಿಂದ ನೀರಿಗೆ ಹಾರಿದ್ದಾರೆ, ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಮರಣೋತ್ತರ ಪರೀಕ್ಷೆ ಬಳಿಕ ಸತ್ಯ ಹೊರಬರಲಿದೆ. ಇಬ್ಬರ ಮೈಮೇಲೂ ಯಾವುದೇ ರೀತಿಯ ಸುಟ್ಟ ಗಾಯಗಳಾಗಿಲ್ಲ.
ಈಗಲೂ ತೈಲಾಗಾರದಿಂದ ಅನಿಲ ಸೋರಿಕೆಯಾಗುತ್ತಿದೆ. ಎನ್ಡಿಆರ್ಎಫ್ ಸಿಬ್ಬಂದಿ ಕೂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.ಅನಿಲ ಸೋರಿಕೆಯಿಂದಾಗಿ ಸುತ್ತಲಿನ ಗದ್ದೆಗಳು ಹಾಗೂ ಜೀವವೈವಿಧ್ಯಕ್ಕೆ ತೀವ್ರ ಹಾನಿಯುಂಟಾಗಿದೆ. ಪಕ್ಕದ ಹಳ್ಳಿಗಳ ಗದ್ದೆಗಳು, ಹಳ್ಳ, ಕೊಳಗಳು ಸಂಪೂರ್ಣ ಕಲುಶಿತಗೊಂಡಿವೆ. ಹೀಗಾಗಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.
ತಜ್ಞರ ತಂಡದ ಜೊತೆಗೆ ಸಭೆ ನಡೆಸಲಾಗುತ್ತಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲು ಇದು ಸೂಕ್ತ ಸಮಯವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ವಿಶ್ವಾಸವಿದೆ. ಬಾವಿಯನ್ನು ಸುರಕ್ಷಿತವಾಗಿ ಮುಚ್ಚಬಹುದಾಗಿದೆ.
ಆದರೆ ಈ ಸಂದರ್ಭದಲ್ಲಿ ಹೆಚ್ಚಿನಪ್ರಮಾಣದಲ್ಲಿ ನೀರಿನ ಅಗತ್ಯವಿದೆ. ಹೆಚ್ಚಿನ ಡಿಸ್ಚಾರ್ಜ್ ಪಂಪ್ಗಳ ಅವಶ್ಯವಿದೆ. ಅಲ್ಲದೆ ಡೆಬ್ರಿಸ್ನ್ನು ಸ್ವಚ್ಛಗೊಳಿಸಬೇಕಿದೆ ಎಂದು ಕಂಪನಿ ತಿಳಿಸಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications