ಚುನಾವಣೆ ಮುಗಿಯುತ್ತಿದ್ದಂತೆಯೇ 'ಆಪರೇಷನ್ ಕಮಲ' ಭೀತಿ: ಶುರುವಾಯ್ತು ರೆಸಾರ್ಟ್ ರಾಜಕಾರಣ
ಗುವಾಹಟಿ, ಏಪ್ರಿಲ್ 9: ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ 'ಆಪರೇಷನ್ ಕಮಲ'ದ ಭೀತಿ ಶುರುವಾಗಿದೆ. ರಾಜ್ಯದಲ್ಲಿ ಏಪ್ರಿಲ್ 6ರಂದು ಮೂರನೇ ಹಾಗೂ ಅಂತಿಮ ಹಂತದ ಚುನಾವಣೆ ಮುಕ್ತಾಯವಾಗಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ವಿರೋಧಪಕ್ಷದ ಮೈತ್ರಿಕೂಟದಲ್ಲಿರುವ ಸುಮಾರು 22 ಅಭ್ಯರ್ಥಿಗಳು ಜೈಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಚುನಾವಣೆ ಫಲಿತಾಂಶ ಘೋಷಣೆಗೆ ಮುನ್ನವೇ ಬಿಜೆಪಿ ಆಮಿಷವೊಡ್ಡಿ ಅವರನ್ನು ತಮ್ಮ ಕಡೆಗೆ ಸೆಳೆದುಕೊಳ್ಳಬಹುದು ಎಂಬ ಭೀತಿಯಿಂದ ಅವರನ್ನು ಜೈಪುರದ ಹೋಟೆಲ್ ಒಂದರಲ್ಲಿ 'ಸುರಕ್ಷಿತ'ವಾಗಿ ಇರಿಸಲಾಗಿದೆ.
ಮಹಾಜೋತ್ ಎಂದು ಕರೆಯಲಾಗುವ ಕಾಂಗ್ರೆಸ್ ನೇತೃತ್ವದ ವಿರೋಧಪಕ್ಷದ ಅಭ್ಯರ್ಥಿಗಳು 'ಆಪರೇಷನ್ ಕಮಲ'ದ ಮುನ್ಸೂಚನೆಯಿಂದ ರಾಜ್ಯ ತೊರೆದಿದ್ದಾರೆ ಎನ್ನಲಾಗಿದೆ. ಇದರಲ್ಲಿ ಮೌಲಾನಾ ಬದ್ರುದ್ದೀನ್ ಅಜ್ಮಲ್ ಅವರ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್), ಬೋಡೊಲ್ಯಾಂಡ್ ಪೀಪಲ್ಸ್ ಪ್ರಂಟ್ (ಬಿಪಿಎಫ್) ಮತ್ತು ಎಡಪಕ್ಷಗಳ ಅಭ್ಯರ್ಥಿಗಳು ಸೇರಿದ್ದಾರೆ.
ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ರಾಜಸ್ಥಾನದ ರಾಜಧಾನಿ ಜೈಪುರದ ರೆಸಾರ್ಟ್ ಒಂದರಲ್ಲಿ ಅವರನ್ನು ಇರಿಸಲಾಗಿದೆ ಎನ್ನಲಾಗಿದೆ. ಕಳೆದ ಜುಲೈ ತಿಂಗಳಲ್ಲಿ ಕಾಂಗ್ರೆಸ್ನಲ್ಲಿ ಆಂತರಿಕ ಬಿಕ್ಕಟ್ಟು ತಲೆದೋರಿದ ಸಂದರ್ಭದಲ್ಲಿ ಕೂಡ ಪಕ್ಷದ ಶಾಸಕರನ್ನು ಈ ರೆಸಾರ್ಟ್ಗೆ ಕರೆತರಲಾಗಿತ್ತು.

'ಚುನಾವಣೆಯಲ್ಲಿ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ಅನ್ನು ಒಡೆಯಲು ಬಿಜೆಪಿ ಪ್ರಯತ್ನಿಸುವುದು ಸಾಮಾನ್ಯವಾಗಿಬಿಟ್ಟಿದೆ. ಹೀಗಾಗಿ ಮೈತ್ರಿಪಕ್ಷಗಳು ತಮ್ಮ ಸುರಕ್ಷತೆ ನೋಡಿಕೊಳ್ಳಲು ಬಯಸಿದ್ದಾರೆ' ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ.
ಅಸ್ಸಾಂನಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಈ ಬಾರಿ ಚುನಾವಣೆ ಕುತೂಹಲ ಕೆರಳಿಸಿದ್ದು, ಮೂರು ಹಂತಗಳಲ್ಲಿ ಮತದಾನ ನಡೆದಿದೆ. ವಿರೋಧಪಕ್ಷದಲ್ಲಿರುವ ಮಹಾಜೋತ್ ಮಹಾ ಒಕ್ಕೂಟವು 10 ಪಕ್ಷಗಳನ್ನು ಒಳಗೊಂಡಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications