ಅಸ್ಸಾಂ; ಬಿಜೆಪಿ ಗೆಲುವಿಗೆ ಅಡ್ಡಿಯಾಗಲಿಲ್ಲ ಸಿಎಎ ವಿಚಾರ
ಗೌಹಾತಿ, ಮೇ 03; ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿದೆ. ರಾಜ್ಯದಲ್ಲಿ 2ನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿರುವ ಬಿಜೆಪಿಯೇತರ ಪಕ್ಷ ಎಂಬ ಹೆಗ್ಗಳಿಕೆಗೆ ಬಿಜೆಪಿ ಪಾತ್ರವಾಗಿದೆ.
ಬಿಜೆಪಿ ಮತ್ತು ಮೈತ್ರಿಕೂಟದ ಪಕ್ಷಗಳಾದ ಎಜಿಪಿ, ಯುಪಿಪಿಎಲ್ ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳ ಪೈಕಿ 75 ಸ್ಥಾನಗಳಲ್ಲಿ ಜಯಗಳಿಸಿವೆ. 2016ರ ಚುನಾವಣೆಯಲ್ಲಿ ಮೈತ್ರಿಕೂಟ 86 ಸ್ಥಾನಗಳಲ್ಲಿ ಗೆದ್ದಿತ್ತು.
ಕಾಂಗ್ರೆಸ್ ಮೈತ್ರಿಕೂಟ 50 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ವಿರೋಧ ಪಕ್ಷದ ಸಾಲಿನಲ್ಲಿ ಮತ್ತೊಮ್ಮೆ ಕೂರಲಿದೆ. ಸಿಎಎ ವಿಚಾರ ರಾಜ್ಯದಲ್ಲಿ ಬಿಜೆಪಿಗೆ ಚುನಾವಣೆಯಲ್ಲಿ ಯಾವುದೇ ಹಿನ್ನಡೆ ಉಂಟು ಮಾಡಿಲ್ಲ.

ಸಿಎಎ ವಿರುದ್ಧ ಹೋರಾಟ; 2019ರಲ್ಲಿ ಸಂಸತ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಅನುಮೋದನೆ ಸಿಕ್ಕಿದಾಗ ಅಸ್ಸಾಂನಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಗಲಭೆ ನಡೆದು ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದರು.
ಅಸ್ಸಾಂ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಿಎಎ ವಿಚಾರ ಬರದಂತೆ ಬಿಜೆಪಿ ಎಚ್ಚರ ವಹಿಸಿತ್ತು. ಆದರೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸಿಎಎ ವಿಚಾರ ಹೆಚ್ಚು ಸುದ್ದಿಯಾಗುವಂತೆ ನೋಡಿಕೊಂಡವು.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ಎಐಯುಡಿಎಫ್ ಜೊತೆ ಮೈತ್ರಿ ಮಾಡಿಕೊಂಡಿತು. ಬೆಂಗಾಲಿ ಮುಸ್ಲಿಂ ಸಮುದಾಯದ ಬೆಂಬಲ ಎಐಯುಡಿಎಫ್ ಪಕ್ಷಕ್ಕೆ ಹೆಚ್ಚಿದೆ. ಬಿಜೆಪಿ ತನ್ನ ಪ್ರಚಾರದ ಸಂದರ್ಭದಲ್ಲಿ ಎಐಯುಡಿಎಫ್ ಮತ್ತು ಕಾಂಗ್ರೆಸ್ ವಿರುದ್ಧ ಸರಣಿ ಟೀಕೆಗಳನ್ನು ಮಾಡಿತು.
ಬಿಜೆಪಿ ಚುನಾವಣೆಯಲ್ಲಿ ಯುಪಿಪಿಎಲ್ ಜೊತೆ ಮೈತ್ರಿ ಮಾಡಿಕೊಂಡಿತು. ಇದು ಪಕ್ಷಕ್ಕೆ ನೆರವಾಗಿದ್ದು, ವಿದ್ಯಾರ್ಥಿಗಳ ಮತಗಳು ಪಕ್ಷಕ್ಕೆ ಬಂದಿವೆ. ಯುಪಿಪಿಎಲ್ ಪಕ್ಷ ಒಟ್ಟು 8 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಈ ಬಾರಿಯ ಅಸ್ಸಾಂ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೊಸ ಪ್ರಾದೇಶಿಕ ಪಕ್ಷಗಳು ಹುಟ್ಟಿಕೊಂಡವು. ಎಜೆಪಿ, ಆರ್ಡಿ ಪಕ್ಷಗಳಿಂದ ಬಿಜೆಪಿಗೆ ಸಹಾಯವಾಯಿತು. ಮೈತ್ರಿಕೂಟ ಚುನಾವಣೆಯಲ್ಲಿ ಗೆಲುವು ಸಾಧಿಸಿತು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications