ಅಸ್ಸಾಂ; ಬಿಜೆಪಿ ಗೆಲುವಿಗೆ ಅಡ್ಡಿಯಾಗಲಿಲ್ಲ ಸಿಎಎ ವಿಚಾರ
ಗೌಹಾತಿ, ಮೇ 03; ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿದೆ. ರಾಜ್ಯದಲ್ಲಿ 2ನೇ ಬಾರಿಗೆ ಸರ್ಕಾರ ರಚನೆ ಮಾಡುತ್ತಿರುವ ಬಿಜೆಪಿಯೇತರ ಪಕ್ಷ ಎಂಬ ಹೆಗ್ಗಳಿಕೆಗೆ ಬಿಜೆಪಿ ಪಾತ್ರವಾಗಿದೆ.
ಬಿಜೆಪಿ ಮತ್ತು ಮೈತ್ರಿಕೂಟದ ಪಕ್ಷಗಳಾದ ಎಜಿಪಿ, ಯುಪಿಪಿಎಲ್ ಅಸ್ಸಾಂನ 126 ವಿಧಾನಸಭಾ ಕ್ಷೇತ್ರಗಳ ಪೈಕಿ 75 ಸ್ಥಾನಗಳಲ್ಲಿ ಜಯಗಳಿಸಿವೆ. 2016ರ ಚುನಾವಣೆಯಲ್ಲಿ ಮೈತ್ರಿಕೂಟ 86 ಸ್ಥಾನಗಳಲ್ಲಿ ಗೆದ್ದಿತ್ತು.
ಕಾಂಗ್ರೆಸ್ ಮೈತ್ರಿಕೂಟ 50 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ವಿರೋಧ ಪಕ್ಷದ ಸಾಲಿನಲ್ಲಿ ಮತ್ತೊಮ್ಮೆ ಕೂರಲಿದೆ. ಸಿಎಎ ವಿಚಾರ ರಾಜ್ಯದಲ್ಲಿ ಬಿಜೆಪಿಗೆ ಚುನಾವಣೆಯಲ್ಲಿ ಯಾವುದೇ ಹಿನ್ನಡೆ ಉಂಟು ಮಾಡಿಲ್ಲ.

ಸಿಎಎ ವಿರುದ್ಧ ಹೋರಾಟ; 2019ರಲ್ಲಿ ಸಂಸತ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಅನುಮೋದನೆ ಸಿಕ್ಕಿದಾಗ ಅಸ್ಸಾಂನಲ್ಲಿ ಬೃಹತ್ ಪ್ರತಿಭಟನೆಗಳು ನಡೆದಿದ್ದವು. ಗಲಭೆ ನಡೆದು ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದರು.
ಅಸ್ಸಾಂ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಿಎಎ ವಿಚಾರ ಬರದಂತೆ ಬಿಜೆಪಿ ಎಚ್ಚರ ವಹಿಸಿತ್ತು. ಆದರೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸಿಎಎ ವಿಚಾರ ಹೆಚ್ಚು ಸುದ್ದಿಯಾಗುವಂತೆ ನೋಡಿಕೊಂಡವು.
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೊದಲ ಬಾರಿಗೆ ಎಐಯುಡಿಎಫ್ ಜೊತೆ ಮೈತ್ರಿ ಮಾಡಿಕೊಂಡಿತು. ಬೆಂಗಾಲಿ ಮುಸ್ಲಿಂ ಸಮುದಾಯದ ಬೆಂಬಲ ಎಐಯುಡಿಎಫ್ ಪಕ್ಷಕ್ಕೆ ಹೆಚ್ಚಿದೆ. ಬಿಜೆಪಿ ತನ್ನ ಪ್ರಚಾರದ ಸಂದರ್ಭದಲ್ಲಿ ಎಐಯುಡಿಎಫ್ ಮತ್ತು ಕಾಂಗ್ರೆಸ್ ವಿರುದ್ಧ ಸರಣಿ ಟೀಕೆಗಳನ್ನು ಮಾಡಿತು.
ಬಿಜೆಪಿ ಚುನಾವಣೆಯಲ್ಲಿ ಯುಪಿಪಿಎಲ್ ಜೊತೆ ಮೈತ್ರಿ ಮಾಡಿಕೊಂಡಿತು. ಇದು ಪಕ್ಷಕ್ಕೆ ನೆರವಾಗಿದ್ದು, ವಿದ್ಯಾರ್ಥಿಗಳ ಮತಗಳು ಪಕ್ಷಕ್ಕೆ ಬಂದಿವೆ. ಯುಪಿಪಿಎಲ್ ಪಕ್ಷ ಒಟ್ಟು 8 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.
ಈ ಬಾರಿಯ ಅಸ್ಸಾಂ ವಿಧಾನಸಭೆ ಚುನಾವಣೆ ಸಮಯದಲ್ಲಿ ಹೊಸ ಪ್ರಾದೇಶಿಕ ಪಕ್ಷಗಳು ಹುಟ್ಟಿಕೊಂಡವು. ಎಜೆಪಿ, ಆರ್ಡಿ ಪಕ್ಷಗಳಿಂದ ಬಿಜೆಪಿಗೆ ಸಹಾಯವಾಯಿತು. ಮೈತ್ರಿಕೂಟ ಚುನಾವಣೆಯಲ್ಲಿ ಗೆಲುವು ಸಾಧಿಸಿತು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications