Breaking: ಅಸ್ಸಾಂನಲ್ಲಿ ಜಪಾನೀಸ್ ಎನ್ಸೆಫಾಲಿಟಿಸ್ಗೆ ಮತ್ತೊಂದು ಬಲಿ
ಗುವಾಹಟಿ, ಜುಲೈ 23: ಅಸ್ಸಾಂನಲ್ಲಿ ಕಳೆದ 24 ಗಂಟೆಗಳಲ್ಲಿ ಜಪಾನೀಸ್ ಎನ್ಸೆಫಾಲಿಟಿಸ್ ವೈರಸ್ ಸೋಂಕಿನಿಂದ ಮತ್ತೊಂದು ಸಾವು ವರದಿಯಾಗಿದ್ದು, ಈ ಸೋಂಕಿನಿಂದ ಸಾವನ್ನಪ್ಪಿದವರು ಸಂಖ್ಯೆ 38 ಕ್ಕೆ ಏರಿದೆ.
ವರದಿಗಳ ಪ್ರಕಾರ, ಜುಲೈ 21 ರಂದು (ಗುರುವಾರ) ಗೋಲಾಘಾಟ್ ಮತ್ತು ದರ್ರಾಂಗ್ ಜಿಲ್ಲೆಗಳಲ್ಲಿ ಎರಡು ಸಾವುಗಳು ವರದಿಯಾಗಿದ್ದು, ಜುಲೈ 20 ರಂದು (ಬುಧವಾರ) ಮೂರು ಮಂದಿ ಈ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಅಸ್ಸಾಂನ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಪ್ರಕಾರ, ಕಳೆದ 24 ಗಂಟೆಗಳಲ್ಲಿ ಬಿಸ್ವನಾಥ್ ಜಿಲ್ಲೆಯಲ್ಲಿ ಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಆದರೆ ಇದೇ ವೇಳೆಯಲ್ಲಿ ರಾಜ್ಯದಲ್ಲಿ 15 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ 15 ಪ್ರಕರಣಗಳಲ್ಲಿ ಮೂರು ನಾಗಾವ್ ಜಿಲ್ಲೆಯಿಂದ ವರದಿಯಾಗಿದ್ದು, ಬಕ್ಸಾ ಮತ್ತು ಜೋರ್ಹತ್ನಲ್ಲಿ ತಲಾ ಇಬ್ಬರು, ಚಿರಾಂಗ್, ದಿಬ್ರುಗಢ್, ಗೋಲ್ಪಾರಾ, ಗೋಲಾಘಾಟ್, ಚರೈಡಿಯೊ, ಶಿವಸಾಗರ್, ತಿನ್ಸುಕಿಯಾ ಮತ್ತು ನಲ್ಬರಿ ಜಿಲ್ಲೆಯಿಂದ ತಲಾ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜುಲೈನಲ್ಲಿ ಇದುವರೆಗೆ ರಾಜ್ಯದಲ್ಲಿ ಒಟ್ಟು 251 ಜಪಾನೀಸ್ ಎನ್ಸೆಫಾಲಿಟಿಸ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನ ವಿರುದ್ಧ ಹೋರಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಆರೋಗ್ಯ ಇಲಾಖೆ ಎಲ್ಲಾ ಜಿಲ್ಲಾಡಳಿತಗಳು ಮತ್ತು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದೆ.
ಜಪಾನೀಸ್ ಎನ್ಸೆಫಾಲಿಟಿಸ್ ವೈರಸ್ (ಜೆಇವಿ) ಏಷ್ಯಾದಲ್ಲಿ ವೈರಲ್ ಎನ್ಸೆಫಾಲಿಟಿಸ್ಗೆ ಪ್ರಮುಖ ಕಾರಣವಾಗಿದೆ. ಇದು ಸೊಳ್ಳೆಯಿಂದ ಹರಡುವ ಫ್ಲೇವಿವೈರಸ್ ಆಗಿದ್ದು, ಡೆಂಗ್ಯೂ, ಹಳದಿ ಜ್ವರ ಮತ್ತು ವೆಸ್ಟ್ ನೈಲ್ ವೈರಸ್ಗಳಂತೆಯೇ ಅದೇ ಕುಲಕ್ಕೆ ಸೇರಿದ ಸೋಂಕಾಗಿದೆ.
ಜಪಾನೀಸ್ ಎನ್ಸೆಫಾಲಿಟಿಸ್ ವೈರಲ್ ಕಾಯಿಲೆಯ ಮೊದಲ ಪ್ರಕರಣ 1871 ರಲ್ಲಿ ಜಪಾನ್ನಲ್ಲಿ ದಾಖಲಾಗಿತ್ತು. ಈ ರೋಗದ ಲಕ್ಷಣಗಳನ್ನು ಹೊಂದಿರುವವರಲ್ಲಿ ಸಾವಿನ ಪ್ರಮಾಣವು ಶೇಕಡಾ 30 ರಷ್ಟಿರುತ್ತದೆ ಎನ್ನಲಾಗಿದೆ.
ಎರಡು ವಿನಾಶಕಾರಿ ಪ್ರವಾಹಗಳ ವಿರುದ್ಧ ಹೋರಾಡಿ ಇತ್ತೀಚೆಗಷ್ಟೇ ಸುಧಾರಿಸಿಕೊಳ್ಳುತ್ತಿರುವ ಅಸ್ಸಾಂ ರಾಜ್ಯಕ್ಕೆ ಈಗ ಜಪಾನೀಸ್ ಎನ್ಸೆಫಾಲಿಟಿಸ್ (JE) ಕಾಟ ಶುರುವಾಗಿದ್ದು, ರಾಜ್ಯದಲ್ಲಿ ಆತಂಕದ ವಾತವಾರಣವಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications