ಭೂ ಮಾಫಿಯಾ ವರದಿಗಾರಿಕೆ: ಹಾಡಹಗಲೇ ಲೈಟ್ ಕಂಬಕ್ಕೆ ಕಟ್ಟಿ ಪತ್ರಕರ್ತನ ಮೇಲೆ ಹಲ್ಲೆ
ಗುವಾಹಟಿ, ನವೆಂಬರ್ 19: ಅಕ್ರಮ ಚಟುವಟಿಕೆಯ ವರದಿಗಾರಿಕೆಗೆ ತೆರಳಿದ್ದ ಪತ್ರಕರ್ತನನ್ನು ಲೈಟ್ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಅಸ್ಸಾಂ ರಾಜಧಾನಿ ಗುವಾಹಟಿಯಿಂದ 45 ಕಿಮೀ ದೂರದಲ್ಲಿರುವ ಮಿರ್ಜಾದಲ್ಲಿ ನಡೆದಿದೆ.
ಭೂ ಮಾಫಿಯಾದ ಕುರಿತು ವರದಿ ಮಾಡಲು ಮಿರ್ಜಾಕ್ಕೆ ಭಾನುವಾರ ತೆರಳಿದ್ದ ಪತ್ರಕರ್ತ ಮಿಲನ್ ಮಹಾಂತ ಅವರನ್ನು ಗ್ಯಾಂಬ್ಲರ್ಗಳು ಮತ್ತು ಭೂಮಾಫಿಯಾ ಗ್ಯಾಂಗ್ನ ಸದಸ್ಯರು ಹಿಡಿದು ಲೈಟ್ ಕಂಬಕ್ಕೆ ಕಟ್ಟಿ ಮನಬಂದಂತೆ ಥಳಿಸಿದ್ದರು. 42 ವರ್ಷದ ಮಿಲನ್, ಈ ಘಟನೆ ನಡೆದ ಸ್ಥಳದಿಂದ ಕೇವಲ ಐದು ಕಿ.ಮೀ ದೂರದಲ್ಲಿರುವ ಅಮ್ರಂಗಾ ಗ್ರಾಮದವರಾಗಿದ್ದಾರೆ. ಅವರು 20 ವರ್ಷಗಳಿಂದ ಅಸೋಮಿಯಾ ಪ್ರತಿದಿನ್ ಎಂಬ ಅಸ್ಸಾಂ ದಿನಪತ್ರಿಕೆಯ ವರದಿಗಾರರಾಗಿದ್ದಾರೆ.
'ಅವರು ನನ್ನನ್ನು ಕೊಲ್ಲಲು ಬಯಸಿದ್ದರು ಎನಿಸುತ್ತದೆ. ನಾನು ಅವರ ವಿರುದ್ಧ ಸರಣಿ ವರದಿಗಳನ್ನು ಬರೆದಿದ್ದೆ. ನನ್ನನ್ನು ರಕ್ಷಿಸಲು ಬಂದ ಜನರ ಮೇಲೆಯೂ ಅವರು ದಾಳಿ ಮಾಡಲು ಮುಂದಾಗಿದ್ದರು. ಘಟನೆ ನಡೆದು ಮೂರು ದಿನಗಳಾದರೂ ಪೊಲೀಸರು ನನ್ನ ಮನೆಗೆ ಬಂದು ಯಾವ ವಿವರವನ್ನೂ ಕೇಳಿಲ್ಲ' ಎಂದು ಮಿಲನ್ ಆರೋಪಿಸಿದ್ದಾರೆ.

ಭಾನುವಾರ ನಡೆದ ಹಲ್ಲೆಯೇ ಕೊನೆಯಾಗದೆ ಇರಬಹುದು ಎಂದು ಅವರ ಕುಟುಂಬದವರು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಯನ್ನು ಖಂಡಿಸಿ ಸ್ಥಳೀಯ ಪತ್ರಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮೂರು ದಿನಗಳಲ್ಲಿ ಕೇವಲ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
'ಒಬ್ಬ ವರದಿಗಾರನನ್ನು ಹಾಡ ಹಗಲೇ ಹಿಡಿದು ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಆದರೆ ಪೊಲೀಸರಿಗೆ ಇನ್ನೂ ಪ್ರಮುಖ ಆರೋಪಿಗಳನ್ನು ಹಿಡಿಯಲು ಸಾಧ್ಯವಾಗಿಲ್ಲ. ಪತ್ರಕರ್ತರ ರಕ್ಷಣೆಗೆ ನಮಗೆ ಹೊಸ ಕಾನೂನು ಬೇಕಾಗಿದೆ' ಎಂದು ಮಿರ್ಜಾ ಮೂಲದ ಪತ್ರಕರ್ತ ನಿರೆನ್ ಮಾಲಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications