Breaking: ಅಸ್ಸಾಂ: ಪರೀಕ್ಷೆ ನಕಲು ತಡೆಯಲು ಇಂಟರ್ನೆಟ್ ಸ್ಥಗಿತ
ಗುವಾಹಟಿ, ಆಗಸ್ಟ್ 21: ಉದ್ಯೋಗಾಕಾಂಕ್ಷಿಗಳು ನಕಲು ಮಾಡುವುದನ್ನು ತಡೆಯಲು ಅಸ್ಸಾಂ ರಾಜ್ಯ ಸರಕಾರವು ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ವಿವಿಧ ಇಲಾಖೆಗಳಲ್ಲಿನ 27,000 ಸರಕಾರಿ ಹುದ್ದೆಗಳನ್ನು ತುಂಬಲು ನಡೆಯಲಿರುವ ಅಸ್ಸಾಂನಲ್ಲಿ ಪ್ರಮುಖ ನೇಮಕಾತಿ ಪರೀಕ್ಷೆಗೆ ಸುಮಾರು 14 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಅಭ್ಯರ್ಥಿಗಳು ನಕಲು ಮಾಡುವುದನ್ನು ತಡೆಯಲು ರಾಜ್ಯ ಸರಕಾರವು ಪರೀಕ್ಷಾ ಕೇಂದ್ರಗಳ ಸುತ್ತ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ.
ಈ ಪರೀಕ್ಷೆಯು ರಾಜ್ಯದ ಅತಿದೊಡ್ಡ ನೇಮಕಾತಿ ಅಭಿಯಾನದ ಭಾಗವಾಗಿದ್ದು, ಇದರಲ್ಲಿ ಸುಮಾರು 14 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಪರೀಕ್ಷೆ ನಡೆಯುವ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳು ಲಭ್ಯವಿರುವುದಿಲ್ಲ ಎಂದು ಸರಕಾರ ಹೇಳಿದೆ.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿರುವುದರಿಂದ ಸಿಆರ್ಪಿಸಿಯ ಸೆಕ್ಷನ್ 144 ವಿಧಿಸಲಾಗುವುದು ಎಂದು ಅಸ್ಸಾಂ ಸರಕಾರ ತಿಳಿಸಿದೆ.
ಪರೀಕ್ಷಾ ನಿಯಮಗಳ ಭಾಗವಾಗಿ, ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೇಂದ್ರದ ಉಸ್ತುವಾರಿ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್ ಅಥವಾ ಇತರ ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ಕೊಂಡೊಯ್ಯುವುದನ್ನು ನಿರ್ಬಂಧಿಸಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರದ ಉಸ್ತುವಾರಿಗೆ ಪರೀಕ್ಷಾ ಕೇಂದ್ರದ ವಿಡಿಯೋ ಮಾಡಿಕೊಳ್ಳಲು ಸಹ ಸೂಚಿಸಲಾಗಿದೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪರೀಕ್ಷೆಗಳು ಸುಗಮವಾಗಿ ನಡೆಸುವುದನ್ನು ಖಚಿತಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ್ದಾರೆ.
ಗ್ರೇಡ್- III ಮತ್ತು ಗ್ರೇಡ್- IV ಹುದ್ದೆಗಳನ್ನು ಭರ್ತಿ ಮಾಡಲು ಭಾನುವಾರ ಮೊದಲ ಹಂತದ ಪರೀಕ್ಷೆ ನಡೆಯುತ್ತಿದ್ದು, ಆಗಸ್ಟ್ 28 ಮತ್ತು ಸೆಪ್ಟೆಂಬರ್ 11 ರಂದು ಮತ್ತೆ ಪರೀಕ್ಷಗಳು ನಡೆಯಲಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications