ದೆಹಲಿ ಪೊಲೀಸರಿಗೆ ಅಸ್ಸಾಂನಲ್ಲಿ ಸಿಕ್ಕಿಬಿದ್ದ 'ಬುಲ್ಲಿ ಬಾಯಿ' ಆ್ಯಪ್ ಸೃಷ್ಟಿಕರ್ತ
ಗುವಾಹತಿ, ಜನವರಿ 06: ಬುಲ್ಲಿ ಬಾಯಿ ಆ್ಯಪ್ನ ಸೃಷ್ಟಿಕರ್ತ 21 ವರ್ಷದ ನೀರಜ್ ಬಿಷ್ಣೋಯ್ ಅವರನ್ನು ದೆಹಲಿ ಪೊಲೀಸರು ಅಸ್ಸಾಂನಲ್ಲಿ ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ. ಈತ ಹಲವಾರು ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಅವರ ಒಪ್ಪಿಗೆ ಇಲ್ಲದೆ ಅಪ್ಲೋಡ್ ಮಾಡಿ ಹರಾಜು ಮಾಡುವ ಬುಲ್ಲಿ ಬಾಯಿ ಆ್ಯಪ್ನ ಸೃಷ್ಟಿಕರ್ತನಾಗಿದ್ದಾನೆ.
ದೆಹಲಿ ಪೊಲೀಸ್ ತಂಡವು ಆರೋಪಿಯೊಂದಿಗೆ ಮಧ್ಯಾಹ್ನ 3:30 ಕ್ಕೆ ದೆಹಲಿ ವಿಮಾನ ನಿಲ್ದಾಣವನ್ನು ತಲುಪಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬುಧವಾರ (ಜನವರಿ5)ರಂದು 'ಬುಲ್ಲಿ ಬಾಯಿ' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಸೈಬರ್ ಪೊಲೀಸರು ಉತ್ತರಾಖಂಡದ ವಿದ್ಯಾರ್ಥಿಯನ್ನು ಬಂಧಿಸಿದ್ದರು. ವಿದ್ಯಾರ್ಥಿಯನ್ನು ಮಯಾಂಕ್ ರಾವಲ್ (21) ಎಂದು ಗುರುತಿಸಲಾಗಿದೆ.ಜೊತೆಗೆ ಮುಂಬೈ ಪೊಲೀಸರ ಸೈಬರ್ ಸೆಲ್ ಈ ಹಿಂದೆ ಉತ್ತರಾಖಂಡದ ಶ್ವೇತಾ ಸಿಂಗ್ (18) ಮತ್ತು ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ವಿಶಾಲ್ ಕುಮಾರ್ ಝಾ (21) ಅವರನ್ನು ಬಂಧಿಸಿದೆ.
'ಬುಲ್ಲಿ ಬಾಯಿ' ಆ್ಯಪ್ ಪ್ರಕರಣ ದೊಡ್ಡ ನೆಟ್ವರ್ಕ್ ಹೊಂದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣದಲ್ಲಿ ಮೊದಲು ಬಂಧಿತರಾದ ಬೆಂಗಳೂರು ಕಾಲೇಜು ವಿದ್ಯಾರ್ಥಿ ಇತರರ ಮೇಲೆ ಆರೋಪ ಹೋರಿಸಿದ್ದನು. ಜೊತೆಗೆ ಆ್ಯಪ್ ಹಿಂದೆ ದೊಡ್ಡ ಗ್ಯಾಂಗ್ ಇದೆ ಎಂದು ನಂಬಲು ಪೊಲೀಸರ ಬಳಿ ಸಾಕಷ್ಟು ಪುರಾವೆಗಳಿವೆ. ಆರೋಪಿತ ಮಹಿಳೆ ಹಾಗೂ ವಿದ್ಯಾರ್ಥಿಗಳನ್ನು ಬೇರೊಬ್ಬರು ಬಳಸಿದ್ದಾರೆನ್ನುವ ಅನುಮಾನವೂ ಇತ್ತು. ಈ ಜಾಡು ಹಿಡಿದು ಹೊರಟ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಬುಲ್ಲಿ ಬಾಯಿ ಆ್ಯಪ್ನ ಸೃಷ್ಟಿಕರ್ತ 21 ವರ್ಷದ ನೀರಜ್ ಬಿಷ್ಣೋಯ್. ಈತನೇ ಆ್ಯಪ್ನ ಸೃಷ್ಟಿಕರ್ತ ಎನ್ನಲಾಗುತ್ತಿದೆ. ಈತನ ಮಾರ್ಗದರ್ಶನದಲ್ಲೇ ಬಂಧಿತ ಮೂವರು ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ ಈತನಿಗೆ ಈ ಕೆಲಸಕ್ಕೆ ಸಾಥ್ ನೀಡಿದವರು ಯಾರು? ಅಥವಾ ಈತ ಸ್ವತ: ಮಹಿಳಾ ವಿರೋಧಿನಾ? ಮುಸ್ಲಿಂ ಮಹಿಳೆಯರನ್ನೇ ಗುರಿಯಾಗಿಸಿಕೊಂಡಿದ್ದು ಯಾಕೆ? ಇದರ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಬೇಕಿದೆ.

ಕಳೆದ ವರ್ಷ 'ಸುಲ್ಲಿ ಡೀಲ್ಸ್' ಹೆಸರಿನಲ್ಲಿ ಕಾಣಿಸಿಕೊಂಡಿತ್ತು:
ಗಿಟ್ಹಬ್ನಲ್ಲಿ ಮುಸ್ಲಿಂ ಮಹಿಳೆಯರ ಈ 'ಹರಾಜು' ಒಂದು ವರ್ಷದೊಳಗೆ ಎರಡನೇ ಬಾರಿಗೆ ನಡೆದಿದೆ. ಇಂಥ ಅಪ್ಲಿಕೇಶನ್ ಕಳೆದ ವರ್ಷ 'ಸುಲ್ಲಿ ಡೀಲ್ಸ್' ಎಂಬ ಹೆಸರಿನಲ್ಲಿ ಕಾಣಿಸಿಕೊಂಡಿತ್ತು. ಆದರೆ ಆ ಪ್ರಕರಣದಲ್ಲಿ ಯಾವುದೇ ಬಂಧನಗಳನ್ನು ಮಾಡಲಾಗಿಲ್ಲ. ಆದರೆ 'ಬುಲ್ಲಿ ಬಾಯಿ' ಆಪ್ ಸಾಮಾಜಿಕ ಜಾಲತಾಣ ಬಳಕೆದಾರರಿಂದ ಹಾಗೂ ರಾಜಕೀಯ ವಲಯಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
ಹೀಗಾಗಿ ಗಿಟ್ಹಬ್ ಪ್ಲಾಟ್ಫಾರ್ಮ್ ಹೋಸ್ಟ್ ಮಾಡಿದ ಆ್ಯಪ್ನಲ್ಲಿ ಮುಸ್ಲಿಂ ಮಹಿಳೆಯರ ಛಾಯಾಚಿತ್ರಗಳನ್ನು 'ಹರಾಜಿಗೆ' ಅಪ್ಲೋಡ್ ಮಾಡಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರಂಭದಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ದೆಹಲಿ ಪೊಲೀಸರು GitHub ಪ್ಲಾಟ್ಫಾರ್ಮ್ನಿಂದ ಅಪ್ಲಿಕೇಶನ್ನ ಡೆವಲಪರ್ ಕುರಿತು ವಿವರಗಳನ್ನು ಪಡೆದಿದ್ದಾರೆ ಮತ್ತು ಅದರ ಪ್ಲಾಟ್ಫಾರ್ಮ್ನಲ್ಲಿ ಸಂಬಂಧಿಸಿದ "ಆಕ್ಷೇಪಾರ್ಹ ವಿಷಯಗಳನ್ನು" ನಿರ್ಬಂಧಿಸಲು ಮತ್ತು ತೆಗೆದುಹಾಕಲು ಟ್ವಿಟ್ಟರ್ಗೆ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications