ಈಶಾನ್ಯ ರಾಜ್ಯ ತ್ರಿಪುರದಲ್ಲಿಯೂ ಕೊರೊನಾ ಸುಂಟರಗಾಳಿ
ಅಗರ್ತಲಾ, ಮೇ 31: ಈಶಾನ್ಯ ರಾಜ್ಯ ತ್ರಿಪುರದಲ್ಲಿಯೂ ಕೊರೊನಾವೈರಸ್ ಸೋಂಕು ಏರುತ್ತಿದೆ. ಒಂದೇ ವಾರದಲ್ಲಿ 200 ಪ್ರಕರಣಗಳು ಕಂಡು ಬಂದಿರುವುದು ಆ ರಾಜ್ಯವನ್ನು ಆತಂಕಕ್ಕೆ ದೂಡಿದೆ.
ಅಲ್ಲಿನ ಮುಖ್ಯಮಂತ್ರಿ ನೀಡಿರುವ ಮಾಹಿತಿ ಪ್ರಕಾರ, ಇದುವರೆಗೆ ತ್ರಿಪುರದಲ್ಲಿ ಕೊರೊನಾವೈರಸ್ಗೆ ತುತ್ತಾದವರ ಸಂಖ್ಯೆ 280 ಕ್ಕೆ ತಲುಪಿದೆ. ಭಾನುವಾರ ಒಂದೇ ದಿನ 11 ಪ್ರಕರಣಗಳು ಪಾಸಿಟಿವ್ ಬಂದಿವೆ. ವಿಶೇಷವೆಂದರೆ ಈ 11 ಜನರೂ ಚೆನ್ನೈನಿಂದ ತ್ರಿಪುರಕ್ಕೆ ಮರಳಿದವರಾಗಿದ್ದಾರೆ.
ತ್ರಿಪುರ ರಾಜ್ಯವು ಈವರೆಗೆ ಒಟ್ಟು 26,376 ವ್ಯಕ್ತಿಗಳ ರಕ್ತದ ಮಾದರಿಗಳನ್ನು ಪರೀಕ್ಷಿಸಿದ್ದು, ಸೋಂಕಿತ 280 ಜನರಲ್ಲಿ 172 ಮಂದಿಯನ್ನು ಈವರೆಗೆ ಗುಣಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ತಮ್ಮ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಇತರ ರಾಜ್ಯಗಳಿಂದ ಬರುವ ಎಲ್ಲ ವ್ಯಕ್ತಿಗಳ ಪರೀಕ್ಷಿಸಲು ತಮ್ಮ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ದೇಬ್ ಹೇಳಿದ್ದಾರೆ.

"ವಿಶೇಷವಾಗಿ ಬಾಂಗ್ಲಾದೇಶ ಮತ್ತು ಮಹಾರಾಷ್ಟ್ರ ಹಿಂದಿರುಗಿದವರ ಪರೀಕ್ಷಿಸಲಾಗುತ್ತಿದೆ. ಅವರನ್ನು ಕಡ್ಡಾಯ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದೆ. ಇತರ ರಾಜ್ಯಗಳಿಂದ ಬರುವ ಎಲ್ಲರಿಗೂ ಕೋವಿಡ್ -19 ಪರೀಕ್ಷೆಗಳನ್ನು ನಡೆಸಲು ಸರ್ಕಾರ ಯೋಜಿಸುತ್ತಿದೆ "ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications